ಹುಬ್ಬಳಿ: ಹುಬ್ಬಳಿಯ ನೇಹಾ ಹಾಗೂ ಅಂಜಲಿ ಹಾಗೆಯೇ ನಿನ್ನ ಹತ್ಯೆ ಆಗುತ್ತದೆ ಎಂದು ಶಾಲೆಯ ಮುಖ್ಯಶಿಕ್ಷಕಿಗೆ ಅನಾಮಧೇಯ ವ್ಯಕ್ತಿಯೊಬ್ಬ ಬೆದರಿಕೆ ಪತ್ರ ಬರೆದಿದ್ದಾನೆ.
ಹುಬ್ಬಳಿಯ ಬೆಂಗೇರಿಯಲ್ಲಿರುವ ರೋಟರಿ ಪ್ರಾಥಮಿಕ ಫ್ರೌಡ ಶಾಲೆಯ ಮುಖ್ಯ ಶಿಕ್ಷಕಿ ದೀಪ ಅಡವಿಮಠ ಎನ್ನುವವರಿಗೆ ಕಳೆದ ಐದು ದಿನಗಳ ಹಿಂದೆ ಅಂಚೆ ಮೂಲಕ ಅನಾಮಧೇಯ ಬೆದರಿಕೆ ಪತ್ರ ಬಂದಿದೆ. ಈ ಪತ್ರದಲ್ಲಿ ʼದೀಪಾ ನಿನ್ನ ಹತ್ಯೆ ನೇಹಾ ಮತ್ತು ಅಂಜಲಿ ಹಾಗೇ.. ಕೆಲವೇ ದಿನʼ ಎಂದು ಬರೆದಿದೆ.
ಈ ಬೆದರಿಕೆ ಪತ್ರ ಕುರಿತು ಶಿಕ್ಷಕಿ ದೀಪ, ಕೇಶ್ವಾಪೂರ ಪೊಲೀಸರ ಗಮನಕ್ಕೆ ತಂದಿದ್ದು, ಈ ಹಿನ್ನೆಲೆ ಶಿಕ್ಷಕಿಯ ಮನೆಗೆ ಪೊಲೀಸರು ಭೇಟಿ ನೀಡಿ ಮಾಹಿತಿ ಪಡೆದಿದ್ದಾರೆ.
ಎಸಿಪಿ ಶಿವಪ್ರಕಾಶ್ ನಾಯಕ್ ಶಿಕ್ಷಕಿ ಮನೆಗೆ ಭೇಟಿ ನೀಡಿದ್ದಾರೆ. ಜೊತೆಗೆ ಮುಂಜಾಗ್ರತಾ ಕ್ರಮವಾಗಿ ಶಿಕ್ಷಕಿಯ ಮನೆ ಮುಂದೆ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ನೇಹಾ, ಅಂಜಲಿ ಹತ್ಯೆ ಮಾಸುವ ಮುನ್ನವೇ ಈ ಕೊಲೆ ಬೆದರಿಕೆ ಪತ್ರ ಆತಂಕ ತದ್ದೊಡಿದೆ.
ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಡೆದಿದೆ ಎನ್ನಲಾದ ಹಗರಣದ ಸಂಬಂಧ ಹೆಚ್ಚಿನ ವಿಚಾರಣೆಗಾಗಿ ಮಾಜಿ ಆಯುಕ್ತ ದಿನೇಶ್…
ಮಡಿಕೇರಿ : ದುಬಾರೆ ಶಿಬಿರದ ಸಾಕಾನೆ ತಕ್ಷ ಅನಾರೋಗ್ಯದಿಂದ ಸೋಮವಾರ ರಾತ್ರಿ ಮೃತಪಟ್ಟಿದೆ. ಡಿ.೮ರಂದು ರಾತ್ರಿ ೯.೩೦ರ ಸಮಯದಲ್ಲಿ ತಕ್ಷ…
ಮೈಸೂರು : ಕೇಳಿದ ತಕ್ಷಣ ಹಣ ಕೊಡಲಿಲ್ಲ ಎಂಬ ಕಾರಣಕ್ಕಾಗಿ ಸ್ನೇಹಿತನ ಮೇಲೆ ಯುವಕನೊಬ್ಬ ಚಾಕುವಿನಿಂದ ಇರಿದಿರುವ ಘಟನೆ ನಗರದಲ್ಲಿ…
ಮೈಸೂರು : ಲೈಂಗಿಕವಾಗಿ ಸಹಕರಿಸಿದಲ್ಲಿ ಚೆನ್ನಾಗಿ ನೋಡಿಕೊಳ್ಳುತ್ತೀನಿ ಎಂದು ಮಹಿಳಾ ಉದ್ಯೋಗಿಗೆ ಕಿರುಕುಳ ನೀಡಿದ ಖಾಸಗಿ ಕಾರ್ಖಾನೆ ಮಾಲೀಕನ ವಿರುದ್ದ…
ಮೈಸೂರು : ಚಾಮುಂಡಿಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಾಲಯದಲ್ಲಿ ದೇವಿಯ ದರ್ಶನ ಹಾಗೂ ಸಮೂಹ ದೇವಾಲಯಗಳ ಸೇವೆಗಳ ಶುಲ್ಕಗಳನ್ನು ಏರಿಸಿರುವ ರಾಜ್ಯ…
ಬೆಳಗಾವಿ : ರಾಜ್ಯದಲ್ಲಿ 545 ಪಿಎಸ್ಐ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದು, ಈಗಾಗಲೇ ಅಭ್ಯರ್ಥಿಗಳಿಗೆ ತರಬೇತಿ ನೀಡಲಾಗುತ್ತಿದೆ. ಮೂರು ತಿಂಗಳ…