ಹುಬ್ಬಳಿ: ಹುಬ್ಬಳಿಯ ನೇಹಾ ಹಾಗೂ ಅಂಜಲಿ ಹಾಗೆಯೇ ನಿನ್ನ ಹತ್ಯೆ ಆಗುತ್ತದೆ ಎಂದು ಶಾಲೆಯ ಮುಖ್ಯಶಿಕ್ಷಕಿಗೆ ಅನಾಮಧೇಯ ವ್ಯಕ್ತಿಯೊಬ್ಬ ಬೆದರಿಕೆ ಪತ್ರ ಬರೆದಿದ್ದಾನೆ.
ಹುಬ್ಬಳಿಯ ಬೆಂಗೇರಿಯಲ್ಲಿರುವ ರೋಟರಿ ಪ್ರಾಥಮಿಕ ಫ್ರೌಡ ಶಾಲೆಯ ಮುಖ್ಯ ಶಿಕ್ಷಕಿ ದೀಪ ಅಡವಿಮಠ ಎನ್ನುವವರಿಗೆ ಕಳೆದ ಐದು ದಿನಗಳ ಹಿಂದೆ ಅಂಚೆ ಮೂಲಕ ಅನಾಮಧೇಯ ಬೆದರಿಕೆ ಪತ್ರ ಬಂದಿದೆ. ಈ ಪತ್ರದಲ್ಲಿ ʼದೀಪಾ ನಿನ್ನ ಹತ್ಯೆ ನೇಹಾ ಮತ್ತು ಅಂಜಲಿ ಹಾಗೇ.. ಕೆಲವೇ ದಿನʼ ಎಂದು ಬರೆದಿದೆ.
ಈ ಬೆದರಿಕೆ ಪತ್ರ ಕುರಿತು ಶಿಕ್ಷಕಿ ದೀಪ, ಕೇಶ್ವಾಪೂರ ಪೊಲೀಸರ ಗಮನಕ್ಕೆ ತಂದಿದ್ದು, ಈ ಹಿನ್ನೆಲೆ ಶಿಕ್ಷಕಿಯ ಮನೆಗೆ ಪೊಲೀಸರು ಭೇಟಿ ನೀಡಿ ಮಾಹಿತಿ ಪಡೆದಿದ್ದಾರೆ.
ಎಸಿಪಿ ಶಿವಪ್ರಕಾಶ್ ನಾಯಕ್ ಶಿಕ್ಷಕಿ ಮನೆಗೆ ಭೇಟಿ ನೀಡಿದ್ದಾರೆ. ಜೊತೆಗೆ ಮುಂಜಾಗ್ರತಾ ಕ್ರಮವಾಗಿ ಶಿಕ್ಷಕಿಯ ಮನೆ ಮುಂದೆ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ನೇಹಾ, ಅಂಜಲಿ ಹತ್ಯೆ ಮಾಸುವ ಮುನ್ನವೇ ಈ ಕೊಲೆ ಬೆದರಿಕೆ ಪತ್ರ ಆತಂಕ ತದ್ದೊಡಿದೆ.
ಮೈಸೂರು: ದಕ್ಷಿಣ ಭಾರತದ ಗಾನ ಕೋಗಿಲೆ ಎಂದೇ ಹೆಸರಾದ ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶರಾಗಿದ್ದಾರೆ. ಅವರಿಗೆ 88 ವರ್ಷ ವಯಸ್ಸಾಗಿತ್ತು.…
ಗುಂಡ್ಲುಪೇಟೆ: ತಾಲ್ಲೂಕಿನ ಕಗ್ಗಳದಹುಂಡಿ ಗ್ರಾಮದ ಮನೆಯೊಳಗೆ ನುಗ್ಗಿದ್ದ ನಾಗರಹಾವನ್ನು ಉರಗಪ್ರೇಮಿ ಸ್ವಾಮಿ ಅವರು ಸುರಕ್ಷಿತವಾಗಿ ರಕ್ಷಿಸಿ ಅರಣ್ಯ ಪ್ರದೇಶಕ್ಕೆ ಬಿಟ್ಟಿದ್ದಾರೆ.…
ಮಡಿಕೇರಿ: ತಾಲ್ಲೂಕಿನ ಕೆದಕಲ್ ಸಮೀಪದ ಕೋಟೆಕಾಡು ಪ್ರದೇಶದಲ್ಲಿ ಬೈಕ್ ಸವಾರನ ಮೇಲೆ ಕಾಡುಕೋಣ ದಾಳಿ ನಡೆಸಿದ ಘಟನೆ ನಡೆದಿದೆ. ಕಕ್ಕಬ್ಬೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದ ಮಹದೇಶ್ವರಬೆಟ್ಟ ಮುಖ್ಯರಸ್ತೆಯ ಸಮೀಪ ಶನಿವಾರ ಬೆಳಿಗ್ಗೆ ಹುಚ್ಚು ನಾಯಿಯೊಂದು…
ಹಾಸನ: ಜಿಲ್ಲೆಯ ಸಕಲೇಶಪುರ ಗವಿಬೆಟ್ಟದಲ್ಲಿ ಪ್ರವಾಸಿಗರು ರೀಲ್ಸ್ಗಾಗಿ ಥಾರ್ ಕಾರನ್ನು ಡ್ರಿಫ್ಟಿಂಗ್ ಮಾಡಿದ್ದಾರೆ. ಇದರಿಂದ ಜಾನುವಾರುಗಳ ಮೇವು ಹಾಗೂ ರಸ್ತೆಗೆ…
ಹನೋಯ್: ವಿಯೆಟ್ನಾಂ ಫು ಕ್ವಾಕ್ ದ್ವೀಪದ ಬಳಿ 32 ಮಂದಿ ಭಾರತೀಯ ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ಸ್ಪೀಡ್ ಬೋಟ್ ಮುಳುಗಡೆಯಾಗಿದ್ದು, ಕನಿಷ್ಠ…