ಹುಬ್ಬಳ್ಳಿ: ಬಿವಿಬಿ ಕಾಲೇಜು ಆವರಣದಲ್ಲಿ ಎಂಸಿಎ ವಿದ್ಯಾರ್ಥಿನಿ ನೇಹಾ ಹಿರೇಮಠ್ಗೆ ಚಾಕುವಿನಿಂದ ಇರಿದು ಕೊಂದ ಪ್ರಕರಣ ಸದ್ಯ ರಾಷ್ಟ್ರಾದ್ಯಂತ ಚರ್ಚೆಗೆ ಕಾರಣವಾಗಿದ್ದು, ಆರೋಪಿ ಫಯಾಜ್ಗೆ ಗಂಭೀರ ಶಿಕ್ಷೆ ವಿಧಿಸುವಂತೆ ಪ್ರತಿಭಟನೆಗಳು ನಡೆಯುತ್ತಿವೆ.
ನೇಹಾ ಹಿರೇಮಠ್ ತಂದೆ ನಿರಂಜನ್ ಹಿರೇಮಠ್ ಮಾಧ್ಯಮದವರ ಜತೆ ಮಾತನಾಡಿ ಫಯಾಜ್ ಈ ಹಿಂದೆಯೂ ಕೊಲೆ ಯತ್ನ ಮಾಡಿದ್ದ, ತನ್ನ ತಂದೆಯನ್ನೇ ಕೊಲೆ ಮಾಡಲು ಮುಂದಾಗಿದ್ದ ಎಂಬ ಸ್ಪೋಟಕ ಹೇಳಿಕೆ ನೀಡಿದ್ದಾರೆ.
ಫಯಾಜ್ ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಈ ಹಿಂದೆ ತನ್ನ ತಂದೆಯನ್ನೇ ಕೊಲ್ಲಲು ಯತ್ನಿಸಿದ್ದ ಎಂಬ ವಿಚಾರ ತಿಳಿದುಬಂದಿದೆ. ಈ ವಿಚಾರ ಹಾಗೂ ನೇಹಾಳನ್ನು ಪ್ರೀತಿಸುತ್ತಿದ್ದ ಎಂಬ ವಿಚಾರವನ್ನು ಮೊದಲೇ ತಿಳಿಸಬಹುದಿತ್ತಲ್ಲವೇ? ಒಂದು ವೇಳೆ ಈ ವಿಚಾರವನ್ನು ಮೊದಲೇ ತಿಳಿಸಿದ್ದರೆ ನಾವು ಎಚ್ಚೆತ್ತುಕೊಂಡು ಮಗಳನ್ನು ರಕ್ಷಣೆ ಮಾಡುತ್ತಿದ್ದೆವಲ್ಲವೇ? ಅದರ ಬದಲು ಈಗ ಕ್ಷಮೆ ಕೇಳುತ್ತಿದ್ದೇನೆ ಎಂದರೆ ಏನು ಪ್ರಯೋಜನ ಎಂದು ನಿರಂಜನ್ ಹಿರೇಮಠ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಫಯಾಜ್ ಹಲ್ಲೆ ಮಾಡಿದ ಹಾಗೂ ಕೊಲೆ ಯತ್ನ ಮಾಡಿದ್ದ ವಿಚಾರವಾಗಿ ಆತನ ತಂದೆಯೇ ಪೊಲೀಸರ ಮೊರೆ ಹೋಗಿದ್ದರು. ಆತನನ್ನು ಠಾಣೆಗೆ ಕರೆಸಿದ್ದ ಪೊಲೀಸರು ಆತನಿಗೆ ಎಚ್ಚರಿಕೆ ನೀಡಿ ಮುಚ್ಚಳಿಕೆ ಬರೆಸಿಕೊಂಡು ಕಳುಹಿಸಿಕೊಟ್ಟಿದ್ದರು. ಇದರ ಬದಲು ಆಗಲೇ ಆತನ ವಿರುದ್ಧ ಕ್ರಮ ಕೈಗೊಂಡಿದ್ದರೆ ಆತ ಇಷ್ಟು ಮುಂದುವರೆಯುತ್ತಿದ್ದನೇ? ಅಥವಾ ನಮಗಾದರೂ ಮಾಹಿತಿ ನೀಡಿದ್ದರೆ ನಾವೇ ಮುನ್ನೆಚ್ಚರಿಕೆ ವಹಿಸುತ್ತಿದ್ದೆವಲ್ಲವೇ ಎಂದು ಪ್ರಶ್ನಿಸಿ ಆಕ್ರೋಶ ಹೊರಹಾಕಿದ್ದಾರೆ ನೇಹಾ ತಂದೆ ನಿರಂಜನ್ ಹಿರೇಮಠ್.
ಇನ್ನು ಮುಂದುವರಿದು ಮಾತನಾಡಿದ ನಿರಂಜನ್ ಕೇವಲ ಕ್ಷಮೆ ಕೇಳುವುದರಿಂದ ಏನು ಪ್ರಯೋಜನವಿಲ್ಲ, ಆತನನ್ನು ಜಾಮೀನು ಕೊಡಿಸಿ ಕರೆದುಕೊಂಡು ಬಂದು ನಮ್ಮ ಮಗಳನ್ನು ಹತ್ಯೆ ಮಾಡಿದ ರೀತಿ ಬರ್ಬರವಾಗಿ ಕೊಲೆ ಮಾಡಿ. ಇಲ್ಲವಾದರೆ ನೇಣಿಗೇರಿಸಿ. ಆಗ ಮಾತ್ರ ನಮ್ಮ ಮಗಳ ಆತ್ಮಕ್ಕೆ ಶಾಂತಿ ಸಿಗಲು ಸಾಧ್ಯ, ಅದನ್ನು ಬಿಟ್ಟು ಕ್ಷಮೆ ಎಂದರೆ ಏನೂ ಉಪಯೋಗವಿಲ್ಲ ಎಂದು ಹಿರೇಮಠ ಕಿಡಿಕಾರಿದರು.
ಕೊಡಗು: ಸಿದ್ದಾಪುರ ವ್ಯಾಪ್ತಿಯ ಶಿಲ್ಪ ಎಸ್ಟೇಟ್ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ಏಕಾಏಕಿ ದಾಳಿ ನಡೆಸಿದೆ. ಬಂಗಾಳ ಮೂಲದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ಗುಂಡಿನ ದಾಳಿಗೆ ಬಲಿಯಾಗಿದ್ದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮ ವ್ಯಾಪ್ತಿಯಲ್ಲಿ ನಡೆದ ಎನ್ಕೌಂಟರ್ ಘಟನೆಯ…
ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…
ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ರಾಜ್ಯ ಕಾಂಗ್ರೆಸ್ನಲ್ಲಿ ಪರ್ಯಾಯ ಶಕ್ತಿ ಕೇಂದ್ರ ತಲೆ ಎತ್ತುತ್ತದೆಯೇ? ಇಂತಹದೊಂದು ಪ್ರಶ್ನೆಗೆ ತಕ್ಷಣ ಉತ್ತರ…