ರಾಜ್ಯ

ನೇಹಾ ಹತ್ಯೆ ಪ್ರಕರಣ: ನೇಹಾ ಫಯಾಜ್‌ಗೆ ಪ್ರಪೋಸ್‌ ಮಾಡಿದ್ದಳು; ಫಯಾಜ್‌ ತಾಯಿ ಮೊದಲ ಪ್ರತಿಕ್ರಿಯೆ

ಹುಬ್ಬಳ್ಳಿ: ಗುರುವಾರ ( ಏಪ್ರಿಲ್‌ 18 ) ಬಿವಿಬಿ ಕಾಲೇಜು ಆವರಣದಲ್ಲಿ ಎಂಸಿಎ ವಿದ್ಯಾರ್ಥಿನಿ ನೇಹಾ ಹಿರೇಮಠ್‌ಗೆ ಚಾಕುವಿನಿಂದ ಇರಿದು ಕೊಂದ ಪ್ರಕರಣ ಸದ್ಯ ಭಾರೀ ಚರ್ಚೆಗೆ ಕಾರಣವಾಗಿದ್ದು, ಆರೋಪಿ ಫಯಾಜ್‌ಗೆ ಗಂಭೀರ ಶಿಕ್ಷೆ ವಿಧಿಸುವಂತೆ ಪ್ರತಿಭಟನೆಗಳು ನಡೆಯುತ್ತಿವೆ. ಒಂದೆಡೆ ಪ್ರಕರಣ ರಾಜಕೀಯ ಸ್ವರೂಪವನ್ನೂ ಸಹ ಪಡೆದುಕೊಳ್ಳುತ್ತಿದೆ.

ಆರಂಭದಲ್ಲಿ ಲವ್‌ ಜಿಹಾದ್‌, ಪ್ರೀತಿ ನಿರಾಕರಿಸಿದ್ದಕ್ಕೆ ನಡೆದ ಹತ್ಯೆ ಎಂದು ಹೇಳಲಾಗಿತ್ತಾದರೂ ಸದ್ಯ ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು ಎನ್ನಲಾಗುತ್ತಿದೆ. ಇಬ್ಬರೂ ಜತೆಗಿರುವ ಫೋಟೊಗಳು ವೈರಲ್‌ ಆಗುತ್ತಿವೆ. ಇದೇ ಸಂದರ್ಭದಲ್ಲಿ ಫಯಾಜ್‌ ತಂದೆ ಬಾಬಾಸಾಹೇಬ್‌ ಸುಬಾನಿ ಮಾತನಾಡಿ ತನ್ನ ಮಗನ ಪರ ಕ್ಷಮೆ ಕೇಳಿದ್ದರು. ಇದೀಗ ಫಯಾಜ್‌ನ ತಾಯಿ ಮುಮ್ತಾಜ್‌ ಮಾತನಾಡಿದ್ದು, ಮಗ ಮಾಡಿರುವ ತಪ್ಪಿಗೆ ಕ್ಷಮೆ ಯಾಚಿಸಿದ್ದಾರೆ ಹಾಗೂ ನೇಹಾ ತನ್ನ ಮಗನಿಗೆ ಪ್ರೇಮ ನಿವೇದನೆ ಮಾಡಿದ್ದ ವಿಚಾರವನ್ನೂ ಸಹ ಹಂಚಿಕೊಂಡಿದ್ದಾರೆ.

ʼನನ್ನ ಮಗ ಮಾಡಿರುವ ತಪ್ಪಿಗೆ ರಾಜ್ಯದ ಜನರ ಕ್ಷಮೆ ಯಾಚಿಸುತ್ತೇನೆ. ನನ್ನ ಮಗ ಫಯಾಜ್‌ಗೆ ನೇಹಾ ಪ್ರಪೋಸ್‌ ಮಾಡಿದ್ದಳು. ನನ್ನ ಬಳಿ ಇದರ ಬಗ್ಗೆ ಹೇಳಿದಾಗ ಬೇಡ ಎಂದು ಹೇಳಿದ್ದೆ. ನೇಹಾ ಬೇರೆ ಅಲ್ಲ, ನನ್ನ ಮಗಳು ಬೇರೆ ಅಲ್ಲ. ನನ್ನ ಮಗನಿಗೆ ತಕ್ಕ ಶಿಕ್ಷೆ ಆಗಬೇಕುʼ ಎಂದು ಮುಮ್ತಾಜ್‌ ಹೇಳಿದರು.

ಅಲ್ಲದೇ ʼಫಯಾಜ್‌ ಚಿಕ್ಕ ವಯಸ್ಸಿನಿಂದಲೂ ಚೆನ್ನಾಗಿ ಓದುತ್ತಿದ್ದ. ಆತನನ್ನು ಕೆಎಎಸ್‌ ಅಧಿಕಾರಿ ಮಾಡುವ ಕನಸು ಕಂಡಿದ್ದೆ. ಈ ರೀತಿ ಆಗಿದ್ದು ಬಹಳ ಸಂಕಟ ಆಗುತ್ತೆ. ನೇಹಾ ಸಹ ತುಂಬಾ ಒಳ್ಳೆ ಹುಡುಗಿ. ಫಯಾಜ್‌ – ನೇಹಾ ಮದುವೆಯಾಗಬೇಕು ಎಂದುಕೊಂಡಿದ್ದರು. ತಪ್ಪು ಮಾಡಿದವರಿಗೆ ಶಿಕ್ಷೆಯಾಗಬೇಕುʼ ಎಂದೂ ಸಹ ಮುಮ್ತಾಜ್‌ ಹೇಳಿಕೊಂಡರು.

ಶ್ರೀನಿವಾಸ ಎ

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ನನ್ನೂರು. ಡಿ ಬನುಮಯ್ಯ ಕಾಲೇಜಿನಲ್ಲಿ ಪದವಿ ಮುಗಿಸಿದ ನಾನು ಕಳೆದ ನಾಲ್ಕು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ತೊಡಗಿಸಿಕೊಂಡಿದ್ದೇನೆ. ಒನ್‌ಇಂಡಿಯಾ ಕನ್ನಡದಲ್ಲಿ ಸೋಷಿಯಲ್‌ ಮೀಡಿಯಾ ಎಕ್ಸಿಕ್ಯೂಟಿವ್‌ ಆಗಿ ಕೆಲಸ ಆರಂಭಿಸಿ ಮೈಖೇಲ್‌ ಕನ್ನಡ ಹಾಗೂ ಕನ್ನಡ ಫಿಲ್ಮಿಬೀಟ್‌ನಲ್ಲಿ ಮೂರು ವರ್ಷಗಳ ಕಾಲ ಸಬ್‌ಎಡಿಟರ್‌ ಆಗಿ ಕೆಲಸ ನಿರ್ವಹಿಸಿದ್ದೇನೆ. ಪ್ರಸ್ತುತ ಆಂದೋಲನ ದಿನಪತ್ರಿಕೆಯ ಡಿಜಿಟಲ್‌ ಟೀಮ್‌ ಲೀಡ್‌ ಆಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಕ್ರೀಡೆ ಹಾಗೂ ಸಿನಿಮಾ ನನ್ನ ಆಸಕ್ತಿ ಕ್ಷೇತ್ರಗಳಾಗಿದ್ದು, ಪ್ರವಾಸ ಮತ್ತು ಫೋಟೋಗ್ರಫಿ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಊರ ಜಾತ್ರೆ ಒಂದು ನೆನಪು…

ನಂಜನಗೂಡಿನ ಜಾತ್ರೆ ಅಂದು ಹೇಗಿತ್ತೋ ಇಂದೂ ಹಾಗೆ ತನ್ನ ಆಚರಣೆಯ ಮುಗ್ಧತೆ ಉಳಿಸಿಕೊಂಡಿದೆ  ಡಾ.ಹೆಚ್.ಸಿ.ಮಹದೇವಪ್ಪ, ಸಚಿವರು ನಂಜನಗೂಡಿನಿಂದ ಕೆಲವೇ ಮೈಲಿಗಳ…

4 mins ago

ಯುದ್ಧ: ಕಟ್ಟಡ ನಿರ್ಮಾಣ ವಲಯಕ್ಕೆ ಬೆಲೆ ಏರಿಕೆಯ ಬಿಸಿ

ಚಿರಂಜೀವಿ ಸಿ.ಹುಲ್ಲಹಳ್ಳಿ ಮೈಸೂರು: ಮಧ್ಯಪ್ರಾಚ್ಯ ದೇಶದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮ ಜನಸಾಮಾನ್ಯರಿಗೆ ನಿತ್ಯ ಒಂದಲ್ಲಾ ಒಂದು ಬಿಸಿ ತಟ್ಟುತ್ತಿದೆ. ಕಟ್ಟಡ…

9 mins ago

ಚಿರತೆ ದಾಳಿ: ಇಬ್ಬರಿಗೆ ಗಾಯ

ಹುಣಸೂರು: ಚಿರತೆ ಮರಿ ದಾಳಿಯಿಂದ ಇಬ್ಬರು ಗಾಯಗೊಂಡಿರುವ ಘಟನೆ ತಾಲ್ಲೂಕಿನ ಹುಲ್ಯಾಳು ಗ್ರಾಮದಲ್ಲಿ ನಡೆದಿದೆ. ತಾಲ್ಲೂಕಿನ ಗಾವಡಗೆರೆಹೋಬಳಿಯ ಹುಲ್ಯಾಳು ಗ್ರಾಮದ…

17 mins ago

ವೈಭವ್‌ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್‌ : ಸಿಎಸ್‌ಕೆ ವಿರುದ್ಧ ಆರ್‌ಆರ್‌ಗೆ ಗೆಲುವು

ಗುವಹಾಟಿ : ಆರಂಭದಲ್ಲಿ ಬೌಲರ್‌ಗಳ ಅಬ್ಬರ ನಂತರ ವೈಭವ್‌ ಸೂರ್ಯವಂಶಿ ಅವರ ಸ್ಫೋಟಕ ಅರ್ಧಶತಕದ ಆಟದಿಂದ ಚೆನ್ನೈ ಸೂಪರ್‌ ಕಿಂಗ್ಸ್‌…

8 hours ago

ಮೈಸೂರು ರೇಸ್ ಕ್ಲಬ್ ಚುನಾವಣೆ; ಸದಸ್ಯರಾಗಿ ಐವರ ಆಯ್ಕೆ

ಮೈಸೂರು: ನಗರದ ಪ್ರತಿಷ್ಠಿತ ಮೈಸೂರು ರೇಸ್ ಕ್ಲಬ್ ಸದಸ್ಯರಾಗಿ ಗೀತಿಕಾ ಬಸಪ್ಪ (152 ಮತ), ಡಾ.ಕೆ.ರವಿ (147), ಕಲೆಂಗಡ ಮಂದಣ್ಣ…

9 hours ago