ಹುಬ್ಬಳ್ಳಿ: ಗುರುವಾರ ( ಏಪ್ರಿಲ್ 18 ) ಬಿವಿಬಿ ಕಾಲೇಜು ಆವರಣದಲ್ಲಿ ಎಂಸಿಎ ವಿದ್ಯಾರ್ಥಿನಿ ನೇಹಾ ಹಿರೇಮಠ್ಗೆ ಚಾಕುವಿನಿಂದ ಇರಿದು ಕೊಂದ ಪ್ರಕರಣ ಸದ್ಯ ಭಾರೀ ಚರ್ಚೆಗೆ ಕಾರಣವಾಗಿದ್ದು, ಆರೋಪಿ ಫಯಾಜ್ಗೆ ಗಂಭೀರ ಶಿಕ್ಷೆ ವಿಧಿಸುವಂತೆ ಪ್ರತಿಭಟನೆಗಳು ನಡೆಯುತ್ತಿವೆ. ಒಂದೆಡೆ ಪ್ರಕರಣ ರಾಜಕೀಯ ಸ್ವರೂಪವನ್ನೂ ಸಹ ಪಡೆದುಕೊಳ್ಳುತ್ತಿದೆ.
ಆರಂಭದಲ್ಲಿ ಲವ್ ಜಿಹಾದ್, ಪ್ರೀತಿ ನಿರಾಕರಿಸಿದ್ದಕ್ಕೆ ನಡೆದ ಹತ್ಯೆ ಎಂದು ಹೇಳಲಾಗಿತ್ತಾದರೂ ಸದ್ಯ ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು ಎನ್ನಲಾಗುತ್ತಿದೆ. ಇಬ್ಬರೂ ಜತೆಗಿರುವ ಫೋಟೊಗಳು ವೈರಲ್ ಆಗುತ್ತಿವೆ. ಇದೇ ಸಂದರ್ಭದಲ್ಲಿ ಫಯಾಜ್ ತಂದೆ ಬಾಬಾಸಾಹೇಬ್ ಸುಬಾನಿ ಮಾತನಾಡಿ ತನ್ನ ಮಗನ ಪರ ಕ್ಷಮೆ ಕೇಳಿದ್ದರು. ಇದೀಗ ಫಯಾಜ್ನ ತಾಯಿ ಮುಮ್ತಾಜ್ ಮಾತನಾಡಿದ್ದು, ಮಗ ಮಾಡಿರುವ ತಪ್ಪಿಗೆ ಕ್ಷಮೆ ಯಾಚಿಸಿದ್ದಾರೆ ಹಾಗೂ ನೇಹಾ ತನ್ನ ಮಗನಿಗೆ ಪ್ರೇಮ ನಿವೇದನೆ ಮಾಡಿದ್ದ ವಿಚಾರವನ್ನೂ ಸಹ ಹಂಚಿಕೊಂಡಿದ್ದಾರೆ.
ʼನನ್ನ ಮಗ ಮಾಡಿರುವ ತಪ್ಪಿಗೆ ರಾಜ್ಯದ ಜನರ ಕ್ಷಮೆ ಯಾಚಿಸುತ್ತೇನೆ. ನನ್ನ ಮಗ ಫಯಾಜ್ಗೆ ನೇಹಾ ಪ್ರಪೋಸ್ ಮಾಡಿದ್ದಳು. ನನ್ನ ಬಳಿ ಇದರ ಬಗ್ಗೆ ಹೇಳಿದಾಗ ಬೇಡ ಎಂದು ಹೇಳಿದ್ದೆ. ನೇಹಾ ಬೇರೆ ಅಲ್ಲ, ನನ್ನ ಮಗಳು ಬೇರೆ ಅಲ್ಲ. ನನ್ನ ಮಗನಿಗೆ ತಕ್ಕ ಶಿಕ್ಷೆ ಆಗಬೇಕುʼ ಎಂದು ಮುಮ್ತಾಜ್ ಹೇಳಿದರು.
ಅಲ್ಲದೇ ʼಫಯಾಜ್ ಚಿಕ್ಕ ವಯಸ್ಸಿನಿಂದಲೂ ಚೆನ್ನಾಗಿ ಓದುತ್ತಿದ್ದ. ಆತನನ್ನು ಕೆಎಎಸ್ ಅಧಿಕಾರಿ ಮಾಡುವ ಕನಸು ಕಂಡಿದ್ದೆ. ಈ ರೀತಿ ಆಗಿದ್ದು ಬಹಳ ಸಂಕಟ ಆಗುತ್ತೆ. ನೇಹಾ ಸಹ ತುಂಬಾ ಒಳ್ಳೆ ಹುಡುಗಿ. ಫಯಾಜ್ – ನೇಹಾ ಮದುವೆಯಾಗಬೇಕು ಎಂದುಕೊಂಡಿದ್ದರು. ತಪ್ಪು ಮಾಡಿದವರಿಗೆ ಶಿಕ್ಷೆಯಾಗಬೇಕುʼ ಎಂದೂ ಸಹ ಮುಮ್ತಾಜ್ ಹೇಳಿಕೊಂಡರು.
ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…
ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…
ಹನೂರು : ಅರಣ್ಯ ಇಲಾಖೆ ಸಿಬ್ಬಂದಿ ಗುಂಡಿಗೆ ಮೂವರು ಬಲಿ ಪ್ರಕರಣಕ್ಕೆ ದಿನಕ್ಕೊಂದು ಟ್ವಿಸ್ಟ್ ಸಿಗುತ್ತಿದೆ. ದನ ಹುಡುಕಲು ಹೋಗಿದ್ದವರ…
ಬೆಂಗಳೂರು: ಬೆಂಗಳೂರು ದಕ್ಷಿಣದ ದೊಡ್ಡೇರಿಯಲ್ಲಿ ಬೃಹತ್ ನಕಲಿ ಔಷಧ ಜಾಲ ಪತ್ತೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ ಈ ಪ್ರಕರಣವನ್ನು…
ಸದ್ದಿಲ್ಲದೆ ಕೈಗೊಂಡ ತೀರ್ಮಾನಕ್ಕೆ ಬೆಚ್ಚಿದ ರಿಯಲ್ ಎಸ್ಟೇಟ್ ಉದ್ಯಮಿಗಳು; ಮೂರು ಪಕ್ಷಗಳಲ್ಲೂ ತಳಮಳ ಕೆ.ಬಿ.ರಮೇಶನಾಯಕ ಮೈಸೂರು : ಕಳೆದ ಎರಡು…
ಮೊದಲಬಾರಿಗೆ ರಾಷ್ಟ್ರರಾಜಧಾನಿಯಿಂದ ಹೊರಗೆ ಆಯೋಜನೆ 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭವು ಇದೇ ಮೊದಲ ಬಾರಿಗೆ ನವದೆಹಲಿಯಿಂದ…