ರಾಜ್ಯ

ನೇಹಾ ಹತ್ಯೆ ಪ್ರಕರಣ: ನೇಹಾ ಫಯಾಜ್‌ಗೆ ಪ್ರಪೋಸ್‌ ಮಾಡಿದ್ದಳು; ಫಯಾಜ್‌ ತಾಯಿ ಮೊದಲ ಪ್ರತಿಕ್ರಿಯೆ

ಹುಬ್ಬಳ್ಳಿ: ಗುರುವಾರ ( ಏಪ್ರಿಲ್‌ 18 ) ಬಿವಿಬಿ ಕಾಲೇಜು ಆವರಣದಲ್ಲಿ ಎಂಸಿಎ ವಿದ್ಯಾರ್ಥಿನಿ ನೇಹಾ ಹಿರೇಮಠ್‌ಗೆ ಚಾಕುವಿನಿಂದ ಇರಿದು ಕೊಂದ ಪ್ರಕರಣ ಸದ್ಯ ಭಾರೀ ಚರ್ಚೆಗೆ ಕಾರಣವಾಗಿದ್ದು, ಆರೋಪಿ ಫಯಾಜ್‌ಗೆ ಗಂಭೀರ ಶಿಕ್ಷೆ ವಿಧಿಸುವಂತೆ ಪ್ರತಿಭಟನೆಗಳು ನಡೆಯುತ್ತಿವೆ. ಒಂದೆಡೆ ಪ್ರಕರಣ ರಾಜಕೀಯ ಸ್ವರೂಪವನ್ನೂ ಸಹ ಪಡೆದುಕೊಳ್ಳುತ್ತಿದೆ.

ಆರಂಭದಲ್ಲಿ ಲವ್‌ ಜಿಹಾದ್‌, ಪ್ರೀತಿ ನಿರಾಕರಿಸಿದ್ದಕ್ಕೆ ನಡೆದ ಹತ್ಯೆ ಎಂದು ಹೇಳಲಾಗಿತ್ತಾದರೂ ಸದ್ಯ ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು ಎನ್ನಲಾಗುತ್ತಿದೆ. ಇಬ್ಬರೂ ಜತೆಗಿರುವ ಫೋಟೊಗಳು ವೈರಲ್‌ ಆಗುತ್ತಿವೆ. ಇದೇ ಸಂದರ್ಭದಲ್ಲಿ ಫಯಾಜ್‌ ತಂದೆ ಬಾಬಾಸಾಹೇಬ್‌ ಸುಬಾನಿ ಮಾತನಾಡಿ ತನ್ನ ಮಗನ ಪರ ಕ್ಷಮೆ ಕೇಳಿದ್ದರು. ಇದೀಗ ಫಯಾಜ್‌ನ ತಾಯಿ ಮುಮ್ತಾಜ್‌ ಮಾತನಾಡಿದ್ದು, ಮಗ ಮಾಡಿರುವ ತಪ್ಪಿಗೆ ಕ್ಷಮೆ ಯಾಚಿಸಿದ್ದಾರೆ ಹಾಗೂ ನೇಹಾ ತನ್ನ ಮಗನಿಗೆ ಪ್ರೇಮ ನಿವೇದನೆ ಮಾಡಿದ್ದ ವಿಚಾರವನ್ನೂ ಸಹ ಹಂಚಿಕೊಂಡಿದ್ದಾರೆ.

ʼನನ್ನ ಮಗ ಮಾಡಿರುವ ತಪ್ಪಿಗೆ ರಾಜ್ಯದ ಜನರ ಕ್ಷಮೆ ಯಾಚಿಸುತ್ತೇನೆ. ನನ್ನ ಮಗ ಫಯಾಜ್‌ಗೆ ನೇಹಾ ಪ್ರಪೋಸ್‌ ಮಾಡಿದ್ದಳು. ನನ್ನ ಬಳಿ ಇದರ ಬಗ್ಗೆ ಹೇಳಿದಾಗ ಬೇಡ ಎಂದು ಹೇಳಿದ್ದೆ. ನೇಹಾ ಬೇರೆ ಅಲ್ಲ, ನನ್ನ ಮಗಳು ಬೇರೆ ಅಲ್ಲ. ನನ್ನ ಮಗನಿಗೆ ತಕ್ಕ ಶಿಕ್ಷೆ ಆಗಬೇಕುʼ ಎಂದು ಮುಮ್ತಾಜ್‌ ಹೇಳಿದರು.

ಅಲ್ಲದೇ ʼಫಯಾಜ್‌ ಚಿಕ್ಕ ವಯಸ್ಸಿನಿಂದಲೂ ಚೆನ್ನಾಗಿ ಓದುತ್ತಿದ್ದ. ಆತನನ್ನು ಕೆಎಎಸ್‌ ಅಧಿಕಾರಿ ಮಾಡುವ ಕನಸು ಕಂಡಿದ್ದೆ. ಈ ರೀತಿ ಆಗಿದ್ದು ಬಹಳ ಸಂಕಟ ಆಗುತ್ತೆ. ನೇಹಾ ಸಹ ತುಂಬಾ ಒಳ್ಳೆ ಹುಡುಗಿ. ಫಯಾಜ್‌ – ನೇಹಾ ಮದುವೆಯಾಗಬೇಕು ಎಂದುಕೊಂಡಿದ್ದರು. ತಪ್ಪು ಮಾಡಿದವರಿಗೆ ಶಿಕ್ಷೆಯಾಗಬೇಕುʼ ಎಂದೂ ಸಹ ಮುಮ್ತಾಜ್‌ ಹೇಳಿಕೊಂಡರು.

ಶ್ರೀನಿವಾಸ ಎ

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ನನ್ನೂರು. ಡಿ ಬನುಮಯ್ಯ ಕಾಲೇಜಿನಲ್ಲಿ ಪದವಿ ಮುಗಿಸಿದ ನಾನು ಕಳೆದ ನಾಲ್ಕು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ತೊಡಗಿಸಿಕೊಂಡಿದ್ದೇನೆ. ಒನ್‌ಇಂಡಿಯಾ ಕನ್ನಡದಲ್ಲಿ ಸೋಷಿಯಲ್‌ ಮೀಡಿಯಾ ಎಕ್ಸಿಕ್ಯೂಟಿವ್‌ ಆಗಿ ಕೆಲಸ ಆರಂಭಿಸಿ ಮೈಖೇಲ್‌ ಕನ್ನಡ ಹಾಗೂ ಕನ್ನಡ ಫಿಲ್ಮಿಬೀಟ್‌ನಲ್ಲಿ ಮೂರು ವರ್ಷಗಳ ಕಾಲ ಸಬ್‌ಎಡಿಟರ್‌ ಆಗಿ ಕೆಲಸ ನಿರ್ವಹಿಸಿದ್ದೇನೆ. ಪ್ರಸ್ತುತ ಆಂದೋಲನ ದಿನಪತ್ರಿಕೆಯ ಡಿಜಿಟಲ್‌ ಟೀಮ್‌ ಲೀಡ್‌ ಆಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಕ್ರೀಡೆ ಹಾಗೂ ಸಿನಿಮಾ ನನ್ನ ಆಸಕ್ತಿ ಕ್ಷೇತ್ರಗಳಾಗಿದ್ದು, ಪ್ರವಾಸ ಮತ್ತು ಫೋಟೋಗ್ರಫಿ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಸಾರ್ವಜನಿಕ ಸ್ಥಳದಲ್ಲಿ ಜಾತಿ ನಿಂದನೆಯಾದರೆ ಮಾತ್ರ ಎಸ್‌ಸಿ,ಎಸ್‌ಟಿ ಕಾಯ್ದೆ ಅನ್ವಯ ; ಸುಪ್ರೀಂ ಕೋರ್ಟ್‌

ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…

9 hours ago

ಆರೋಪದಿಂದ ಮುಕ್ತನಾಗಿ ಹೊರಬರುತ್ತೇನೆ : ಸಚಿವ ನಾಗೇಂದ್ರ ವಿಶ್ವಾಸ

ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…

12 hours ago

ಶೂಟೌಟ್‌ ಪ್ರಕರಣ ; ಮೃತರು ಬೇಟೆಗಾರರು ಎಂಬುದಕ್ಕೆ ಮತ್ತಷ್ಟು ಸಾಕ್ಷ್ಯ ಬಿಡುಗಡೆ ಮಾಡಿದ ಅರಣ್ಯ ಇಲಾಖೆ

ಹನೂರು : ಅರಣ್ಯ ಇಲಾಖೆ ಸಿಬ್ಬಂದಿ ಗುಂಡಿಗೆ ಮೂವರು ಬಲಿ ಪ್ರಕರಣಕ್ಕೆ ದಿನಕ್ಕೊಂದು ಟ್ವಿಸ್ಟ್​​ ಸಿಗುತ್ತಿದೆ. ದನ ಹುಡುಕಲು ಹೋಗಿದ್ದವರ…

12 hours ago

ನಕಲಿ ಔಷಧ ಜಾಲ ಪತ್ತೆ ಪ್ರಕರಣ ; ಎಸ್‌ಐಟಿ ತನಿಖೆಗೆ ಆದೇಶ

ಬೆಂಗಳೂರು: ಬೆಂಗಳೂರು ದಕ್ಷಿಣದ ದೊಡ್ಡೇರಿಯಲ್ಲಿ ಬೃಹತ್ ನಕಲಿ ಔಷಧ ಜಾಲ ಪತ್ತೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ ಈ ಪ್ರಕರಣವನ್ನು…

13 hours ago

ಮುಡಾ ಬದಲಿ ನಿವೇಶನಗಳ ಹಂಚಿಕೆ ಆದೇಶ ರದ್ದು ; ಮುಯ್ಯಿಗೆ ಮುಯ್ಯಿ ತೀರಿಸಿಕೊಂಡ ಸಚಿವ ಯತೀಂದ್ರ

ಸದ್ದಿಲ್ಲದೆ ಕೈಗೊಂಡ ತೀರ್ಮಾನಕ್ಕೆ ಬೆಚ್ಚಿದ ರಿಯಲ್‌ ಎಸ್ಟೇಟ್ ಉದ್ಯಮಿಗಳು; ಮೂರು ಪಕ್ಷಗಳಲ್ಲೂ ತಳಮಳ ಕೆ.ಬಿ.ರಮೇಶನಾಯಕ ಮೈಸೂರು : ಕಳೆದ ಎರಡು…

14 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ; 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ

ಮೊದಲಬಾರಿಗೆ ರಾಷ್ಟ್ರರಾಜಧಾನಿಯಿಂದ ಹೊರಗೆ ಆಯೋಜನೆ   72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭವು ಇದೇ ಮೊದಲ ಬಾರಿಗೆ ನವದೆಹಲಿಯಿಂದ…

14 hours ago