ಬೆಂಗಳೂರು: ಕರ್ನಾಟಕ ರಾಜಕೀಯದಲ್ಲಿ ಅಡ್ಜೆಸ್ಟ್ ಮೆಂಟ್ ಮತ್ತು ನೆಪೋಟಿಸಂ ಬಗ್ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬೆಂಗಳೂರಿನಲ್ಲಿ ಪುಸ್ತಕ ಬಿಡುಗಡೆ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಮಾಜಿ ಸಂಸದ ಪ್ರತಾಪ್ ಸಿಂಹ ಅವರು, ರಾಜಕೀಯ ನಾಯಕರೆಲ್ಲರಿಗೂ ತಮ್ಮ ಮಕ್ಕಳದ್ದೇ ಚಿಂತೆ. ಹಾಗಾದರೆ ಕಂಡವರ ಮಕ್ಕಳನ್ನು ಬೆಳೆಸುವವರು ಯಾರು ಎಂದು ಪ್ರಶ್ನೆ ಮಾಡಿದ್ದಾರೆ.
ಮುಂದುವರಿದು ಮಾತನಾಡಿದ ಪ್ರತಾಪ್ ಸಿಂಹ ಕಂಡವರ ಮಕ್ಕಳನ್ನು ಬೆಳೆಸಿದ ದೇವರಾಜ ಅರಸು ಅವರು ದೇವರಾದರು. ಆದರೆ ಈಗ ಯಡಿಯೂರಪ್ಪ, ಮಲ್ಲಿಕಾರ್ಜುನ ಖರ್ಗೆ, ಸಿದ್ದರಾಮಯ್ಯ ಸೇರಿದಂತೆ ಎಲ್ಲಾ ನಾಯಕರಿಗೂ ತಮ್ಮ ಮಕ್ಕಳದ್ದೇ ಚಿಂತೆ. ಹಾಗಾದರೆ ಬೇರೆಯವರ ಮಕ್ಕಳನ್ನು ಬೆಳೆಸುವವರು ಯಾರು ಎಂದು ಮತ್ತೆ ಪ್ರಶ್ನಿಸಿದರು.
ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಎಂಪಿ ಟಿಕೆಟ್ ಎಲ್ಲವನ್ನೂ ಅವರವರ ಮಕ್ಕಳಿಗೆ ಕೊಟ್ಟರು. ಇದು ಮುಂದುವರಿದರೆ ಕಂಡವರ ಮಕ್ಕಳು ಹೇಗೆ ಮುಂದೆ ಬರುತ್ತಾರೆ ಎಂದು ಪ್ರಶ್ನಿಸಿದರು.
ನನ್ನನ್ನೂ ತುಂಬಾ ಜನ ಬರವಣಿಗೆ ಮುಂದುವರಿಸಿ ಎಂದು ಹೇಳುತ್ತಾರೆ. ನಾನು ಮುಂದೆ ಬರೆಯಲು ಹೋದರೆ ಮೊದಲು ಬಿಜೆಪಿಯನ್ನೇ ತೊಳೆಯುತ್ತೇನೆ. ನನಗೆ ಎಲ್ಲಾ ಪಕ್ಷಗಳ ಬಗ್ಗೆಯೂ ಗೊತ್ತು ಎಂದು ಕುಟುಂಬ ರಾಜಕಾರಣದ ವಿರುದ್ಧ ನೇರ ವಾಗ್ದಾಳಿ ನಡೆಸಿದರು.
ಬೆಂಗಳೂರು:ಇತ್ತೀಚೆಗೆ ನಿರ್ಮಾಪಕ ಕನಕಪುರ ಶ್ರೀನಿವಾಸ್ ಕನ್ನಡ ಚಿತ್ರರಂಗದ ಹಲವರ ಬಗ್ಗೆ ನಾಲಿಗೆ ಹರಿಬಿಟ್ಟಿದ್ದರು. ಅಶ್ಲೀಲವಾಗಿ ಮಾತನಾಡಿದ್ದರು. ಈ ವಿಚಾರಕ್ಕೆ ಸಂಬಂಧಿಸಿದಂತೆ…
ಮೈಸೂರು: ಶಾಸಕ ಜಿ.ಟಿ.ದೇವೇಗೌಡ ಜೆಡಿಎಸ್ ಪಕ್ಷದಿಂದ ದೂರ ಉಳಿದಿರುವ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ. ಈ…
ಮೈಸೂರು: ರಾಜ್ಯ ಸರ್ಕಾರದ ವೈಫಲ್ಯಗಳನ್ನು ಮುಚ್ಚಿಕೊಳ್ಳಲು ಕೇಂದ್ರ ಬಜೆಟ್ ಬಗ್ಗೆ ಟೀಕೆ ಮಾಡಲಾಗುತ್ತಿದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಆಕ್ರೋಶ…
ಮಡಿಕೇರಿ: ಎಸ್ಡಿಪಿಐ ರಾಜ್ಯಾಧ್ಯಕ್ಷ ಮಜಿದ್ ಪ್ರಯಾಣಿಸುತ್ತಿದ್ದ ಕಾರ್ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಅದೃಷ್ಟವಶಾತ್ ಪಾರಾಗಿದ್ದಾರೆ. ಕೊಡಗು ಜಿಲ್ಲೆ ಕುಶಾಲನಗರ ತಾಲ್ಲೂಕಿನ…
ಮೈಸೂರಿನ ಜಲಪುರಿ ಬಡಾವಣೆಯ ಪೊಲೀಸ್ ಆಸ್ಪತ್ರೆ ಮುಂಭಾಗದ ರಸ್ತೆ ತೀರಾ ಹದಗೆಟ್ಟಿದೆ. ಕಾಳಿಕಾಂಬ ರಸ್ತೆ ದುರಸ್ತಿ ಕಾಮಗಾರಿ ನಡೆಯುತ್ತಿರುವುದರಿಂದ ಕೆಲವು…
೨೦೦೮ರಲ್ಲಿ ಭಾರತದಲ್ಲಿ ಶುರುವಾದ ‘ಇಂಡಿಯನ್ ಪ್ರೀಮಿಯರ್ ಲೀಗ್’ (ಐಪಿಎಲ್) ಕ್ರಿಕೆಟ್ ಆಟವು ಇಡೀ ದೇಶದ ಗಮನ ಸೆಳೆದಿದೆ. ಐಪಿಎಲ್ ತಂಡಗಳಲ್ಲಿ …