ಬೆಂಗಳೂರು: ಕರ್ನಾಟಕ ರಾಜಕೀಯದಲ್ಲಿ ಅಡ್ಜೆಸ್ಟ್ ಮೆಂಟ್ ಮತ್ತು ನೆಪೋಟಿಸಂ ಬಗ್ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬೆಂಗಳೂರಿನಲ್ಲಿ ಪುಸ್ತಕ ಬಿಡುಗಡೆ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಮಾಜಿ ಸಂಸದ ಪ್ರತಾಪ್ ಸಿಂಹ ಅವರು, ರಾಜಕೀಯ ನಾಯಕರೆಲ್ಲರಿಗೂ ತಮ್ಮ ಮಕ್ಕಳದ್ದೇ ಚಿಂತೆ. ಹಾಗಾದರೆ ಕಂಡವರ ಮಕ್ಕಳನ್ನು ಬೆಳೆಸುವವರು ಯಾರು ಎಂದು ಪ್ರಶ್ನೆ ಮಾಡಿದ್ದಾರೆ.
ಮುಂದುವರಿದು ಮಾತನಾಡಿದ ಪ್ರತಾಪ್ ಸಿಂಹ ಕಂಡವರ ಮಕ್ಕಳನ್ನು ಬೆಳೆಸಿದ ದೇವರಾಜ ಅರಸು ಅವರು ದೇವರಾದರು. ಆದರೆ ಈಗ ಯಡಿಯೂರಪ್ಪ, ಮಲ್ಲಿಕಾರ್ಜುನ ಖರ್ಗೆ, ಸಿದ್ದರಾಮಯ್ಯ ಸೇರಿದಂತೆ ಎಲ್ಲಾ ನಾಯಕರಿಗೂ ತಮ್ಮ ಮಕ್ಕಳದ್ದೇ ಚಿಂತೆ. ಹಾಗಾದರೆ ಬೇರೆಯವರ ಮಕ್ಕಳನ್ನು ಬೆಳೆಸುವವರು ಯಾರು ಎಂದು ಮತ್ತೆ ಪ್ರಶ್ನಿಸಿದರು.
ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಎಂಪಿ ಟಿಕೆಟ್ ಎಲ್ಲವನ್ನೂ ಅವರವರ ಮಕ್ಕಳಿಗೆ ಕೊಟ್ಟರು. ಇದು ಮುಂದುವರಿದರೆ ಕಂಡವರ ಮಕ್ಕಳು ಹೇಗೆ ಮುಂದೆ ಬರುತ್ತಾರೆ ಎಂದು ಪ್ರಶ್ನಿಸಿದರು.
ನನ್ನನ್ನೂ ತುಂಬಾ ಜನ ಬರವಣಿಗೆ ಮುಂದುವರಿಸಿ ಎಂದು ಹೇಳುತ್ತಾರೆ. ನಾನು ಮುಂದೆ ಬರೆಯಲು ಹೋದರೆ ಮೊದಲು ಬಿಜೆಪಿಯನ್ನೇ ತೊಳೆಯುತ್ತೇನೆ. ನನಗೆ ಎಲ್ಲಾ ಪಕ್ಷಗಳ ಬಗ್ಗೆಯೂ ಗೊತ್ತು ಎಂದು ಕುಟುಂಬ ರಾಜಕಾರಣದ ವಿರುದ್ಧ ನೇರ ವಾಗ್ದಾಳಿ ನಡೆಸಿದರು.
ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಸಂಖ್ಯೆ ಹೆಚ್ಚುತ್ತಿದ್ದು, ನಗರದಲ್ಲಿ 911 ಅಕ್ರಮ ವಿದೇಶ ನುಸುಳುಕೋರರು ಇರೋದಾಗಿ ಖುದ್ದು…
ಹನೂರು : ಕಾವೇರಿ ವನ್ಯಜೀವಿ ವಿಭಾಗದ ಹನೂರು ವಲಯ ವ್ಯಾಪ್ತಿಯಲ್ಲಿ ಆಗಸ್ಟ್ 15ರಿಂದ 19ರವರೆಗೆ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಇಲಾಖಾ…
ಹೊಸದಿಲ್ಲಿ : ಸಾವಿರಾರು ಜನರ ಸಾವಿಗೆ ಕಾರಣವಾದ 1984ರ ಸಿಖ್ ವಿರೋಧಿ ಗಲಭೆಯ ಸಂದರ್ಭದಲ್ಲಿ ಐವರು ವ್ಯಕ್ತಿಗಳ ಹತ್ಯೆ ಪ್ರಕರಣದಲ್ಲಿ…
ಮೈಸೂರು: ನಗರದ ಸಂತ ಮರಿಯಾ ದಿ ಮಥಿಯಾಸ್ ಶಾಲೆಯ ಶಿಕ್ಷಕ ನಾರಾಯಣಸ್ವಾಮಿ ಅವರು ಮೈಸೂರು ೩ ಕರ್ನಾಟಕ ರಾಷ್ಟ್ರೀಯ ಕೆಡೆಟ್…
ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ನಡೆದ ಎನ್ಕೌಂಟರ್ ಪ್ರಕರಣದ ಬೆನ್ನಲ್ಲೇ ಆ ಭಾಗದಲ್ಲಿ ನಡೆಯುತ್ತಿರುವ ಕಳ್ಳಬೇಟೆ ಪ್ರಕರಣಗಳನ್ನು ರಾಜ್ಯ…
ಮಂಡ್ಯ: ಟೋಲ್ ಬಳಿಯ ಸೈನ್ ಬೋರ್ಡ್ಗೆ ಅತಿ ವೇಗವಾಗಿ ಬಂದ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್ನಲ್ಲಿದ್ದ ಇಬ್ಬರು ಸ್ಥಳದಲ್ಲೇ…