ಬೆಳಗಾವಿ: ಕೇಂದ್ರ ಸರ್ಕಾರ ಅನುಮೋದನೆ ದೊರೆತ ತಕ್ಷಣ ಕರ್ನಾಟಕದಲ್ಲಿ ಹೊಸ ಅಂಗನವಾಡಿ ಕೇಂದ್ರಗಳನ್ನು ಆರಂಭಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.
ಶುಕ್ರವಾರದ ವಿಧಾನಪರಿಷತ್ ಕಲಾಪದಲ್ಲಿ ಪ್ರಶ್ನೋತ್ತರ ವೇಳೆ ಜೆಡಿಎಸ್ ಸದಸ್ಯ ಜವರಾಯಿ ಗೌಡ ಪರವಾಗಿ ತಿಪ್ಪೇಸ್ವಾಮಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕರ್ನಾಟಕದಲ್ಲಿ ಹೊಸ ಅಂಗನವಾಡಿ ಕೇಂದ್ರಗಳ ಸ್ಥಾಪನೆ ಸಂಬಂಧ 2022ರಲ್ಲೇ ಕೇಂದ್ರ ಸರ್ಕಾರದ ಅನುಮೋದನೆಗಾಗಿ ಸಲ್ಲಿಸಲಾಗಿದೆ. ಅನುಮೋದನೆ ದೊರೆತ ತಕ್ಷಣ ಹೊಸ ಅಂಗನವಾಡಿ ಕೇಂದ್ರಗಳನ್ನು ಆರಂಭಿಸಲಾಗುವುದು ಎಂದರು.
ಹಿಂದುಳಿದ ವರ್ಗಗಳ ಮಕ್ಕಳಿಗೆ ಪೌಷ್ಠಿಕ ಆಹಾರ ನೀಡುವುದರ ಜೊತೆಗೆ ಗುಣಮಟ್ಟದ ಶಿಕ್ಷಣ ನೀಡುವುದೇ ಅಂಗನವಾಡಿಯ ಪರಿಕಲ್ಪನೆ. ಇದನ್ನು ಕರ್ನಾಟಕ ಸರ್ಕಾರ ಅಚ್ಚುಕಟ್ಟಾಗಿ ನಿಭಾಯಿಸುತ್ತಿದೆ. ಅಂಗನವಾಡಿ ಕಟ್ಟಡಗಳ ನಿರ್ಮಾಣಕ್ಕೆ ಶೀಘ್ರವೇ ಕ್ರಮವಹಿಸಲಾಗುವುದು ಎಂದು ಸಚಿವರು ಹೇಳಿದರು.
ಹೊಸದಾಗಿ ಅಂಗನವಾಡಿ ಕೇಂದ್ರಗಳನ್ನು ಪ್ರಾರಂಭಿಸಲು ಕೇಂದ್ರ ಸರ್ಕಾರದ ಅನುಮೋದನೆ ಅವಶ್ಯಕತೆವಿರುತ್ತದೆ. ಈ ಸಂಬಂಧ ನಾನು ಈಗಾಗಲೇ ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಅನ್ನಪೂರ್ಣ ದೇವಿ ಅವರನ್ನು 3 ಬಾರಿ ಭೇಟಿಯಾಗಿ ಮನವಿ ಸಲ್ಲಿಸಿರುವೆ ಎಂದರು.
ಶಾಲಾ ಆವರಣದಲ್ಲಿ ನಿವೇಶನ ಕೋರಿ ಈಗಾಗಲೇ ಕ್ಷೇತ್ರದ ಶಿಕ್ಷಣಾಧಿಕಾರಿಗಳಿಗೆ ಪತ್ರ ಬರೆಯಲಾಗಿದ್ದು, ಪ್ರಸ್ತುತ ಶಾಲಾ ಕೊಠಡಿಗಳಲ್ಲಿ ಯಾವುದೇ ತೊಂದರೆಯಿಲ್ಲದೆ ಅಂಗನವಾಡಿ ಕೇಂದ್ರಗಳನ್ನು ನಡೆಸಲಾಗುತ್ತಿದೆ. ರಾಜ್ಯದಲ್ಲಿ ಸ್ವಂತ ಕಟ್ಟಡವಿಲ್ಲದ ಅಂಗನವಾಡಿ ಕೇಂದ್ರಗಳಿಗೆ ಹೊಸದಾಗಿ ಕಟ್ಟಡ ನಿರ್ಮಿಸಲು ಕಳೆದ 2 ವರ್ಷಗಳಲ್ಲಿ 22.92 ಕೋಟಿ ಬಿಡುಗಡೆಯಾಗಿರುತ್ತದೆ. ಈಗಾಗಲೇ 337 ಅಂಗನವಾಡಿ ಕಟ್ಟಡಗಳ ಕಾಮಗಾಗಿ ಪೂರ್ಣಗೊಂಡಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮಾಹಿತಿ ನೀಡಿದರು.
ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…
ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…
೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…