ರಾಜ್ಯ

ಶೀಘ್ರದಲ್ಲೇ ನೂತನ ಜೈವಿಕ ಇಂಧನ ನೀತಿ : ಸಚಿವ ಪ್ರಿಯಾಂಕ್‌ ಖರ್ಗೆ

ಬೆಂಗಳೂರು : ಗ್ರಾಮೀಣ ಪ್ರದೇಶಗಳಲ್ಲಿ ಪರ್ಯಾಯ ಇಂಧನ ವ್ಯವಸ್ಥೆಯನ್ನು ಪ್ರೋತ್ಸಾಹಿಸುವ ಸಲುವಾಗಿ ನೂತನ ಜೈವಿಕ ಇಂಧನ ನೀತಿಯನ್ನು ಜಾರಿಗೆ ತರಲು ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ನಡೆದ ಕರ್ನಾಟಕ ರಾಜ್ಯ ಜೈವಿಕ ಇಂಧನ ಅಭಿವೃದ್ಧಿ ಮಂಡಳಿಯ 10 ನೇ ವಾರ್ಷಿಕ ಸರ್ವ ಸದಸ್ಯ ಸಮಿತಿ ಸಭೆಯ ನಂತರ ಸಚಿವರು ಜೈವಿಕ ಇಂಧನ ನೀತಿಯ ಬಗ್ಗೆ ಮಾಹಿತಿ ನೀಡಿ, ಈ ಸಂಬಂಧ ಈಗಾಗಲೇ ಕೆಲವು ಪೂರ್ವ ಸಿದ್ಧತಾ ಕಾರ್ಯಯೋಜನೆಗಳನ್ನು ಕೈಗೊಳ್ಳಲಾಗಿದೆ, ರಾಜ್ಯದಲ್ಲಿ ಹಾಗೂ ಇತರ ರಾಜ್ಯಗಳಿಗೆ ಭೇಟಿ ನೀಡಿ ಜೈವಿಕ ಇಂಧನ ಕಾರ್ಯಯೋಜನೆಗಳ ಅನುಷ್ಟಾನ ಪ್ರಕ್ರಿಯೆ ಹಾಗೂ ವಸ್ತುಸ್ಥಿತಿ ಅಧ್ಯಯನ ಮಾಡಲಾಗಿದೆ, ಇದರೊಂದಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಜೈವಿಕ ಇಂಧನ ನೀತಿಗಳ ವಿಶ್ಲೇಷಣೆ ಮಾಡಲಾಗಿದೆ ಎಂದು ಹೇಳಿದರು.

ಜೈವಿಕ ಇಂಧನ ಸಂಪನ್ಮೂಲಗಳ ಲಭ್ಯತೆ, ಕ್ರೋಢಿಕರಣ ಕುರಿತು ಪರಿಶೀಲನೆ ಮಾಡಲಾಗಿದ್ದು, ನೂತನ ಕರ್ನಾಟಕ ರಾಜ್ಯ ಜೈವಿಕ ಇಂಧನ ರಚನೆ ಕುರಿತು ಪ್ರಕ್ರಿಯೆ ಆರಂಭಿಸಲಾಗಿದೆ ಎಂದೂ ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದು ರಾಜ್ಯದಲ್ಲಿ ಜೈವಿಕ ಇಂಧನ ಕ್ಷೇತ್ರದಲ್ಲಿ ಬಂಡವಾಳ ಹೂಡಿಕೆದಾರರನ್ನು ಆಕರ್ಷಿಸಲು ಪೂರಕ ವಾತಾವರಣ ನಿರ್ಮಾಣ ಮಾಡುವ ಕುರಿತು ಸಮ್ಮೇಳನಗಳು, ಕಾರ್ಯಗಾರಗಳು, ವಸ್ತು ಪ್ರದರ್ಶನಗಳು ಹಾಗೂ ಹೂಡಿಕೆದಾರರ ಸಮಾವೇಶಗಳಲ್ಲಿ ಭಾಗವಹಿಸಿ ಮಾಹಿತಿ ಸಂಗ್ರಸಲಾಗಿದೆ ಹಾಗೂ ಮಂಡಳಿಗೆ ಕೈಗಾರಿಕಾ ಸಂಘಟನೆಗಳು, ಸಂಸ್ಥೆಗಳು, ವಿದೇಶದ ವಿಶ್ವವಿದ್ಯಾಲಯಗಳು ಮುಂತಾದ ಸಂಸ್ಥೆಗಳ ಪ್ರತಿನಿಧಿಗಳನ್ನು ಆಹ್ವಾನಿಸಿ ಚರ್ಚಿಸಲಾಗಿದೆ ಎಂಬ ಮಾಹಿತಿಯನ್ನು ನೀಡಿದ್ದಾರೆ.

ರಾಜ್ಯದಲ್ಲಿನ ಜೈವಿಕ ಇಂಧನ ಬಯೋಬ್ರಿಕೆಟ್ಸ್, ಬಯೋಪಿಲೆಟ್ಸ್, ಬಯೋಚಾರ್, ಬಯೋಕೋಲ್. ಬಯೋಡೀಸೆಲ್, 2ಜಿ ಎಥನಾಲ್, ಗ್ರೀನ್ ಹೈಡ್ರೋಜನ್ ಕಾರ್ಯಯೋಜನೆಗಳಲ್ಲಿ ನಿರತರಾಗಿರುವ ಉದ್ದಿಮೆದಾರರುಗಳ ವಿಚಾರ ವಿನಿಮಯ ಸಭೆಯನ್ನು ತುಮಕೂರು ಹಾಗೂ ಬೆಂಗಳೂರು ಗಳಲ್ಲಿಆಯೋಜಿಸಲಾಗಿದ್ದು ಮಾಹಿತ ಸಂಗ್ರಹಿಸಲಾಗಿದೆ, ಶೀಘ್ರದಲ್ಲೇ ನೀತಿಯ ಕರಡು ಸಿದ್ಧಪಡಿಸಿ ಸಾರ್ವಜನಿಕರ ಅಭಿಪ್ರಾಯಕ್ಕಾಗಿ ಪ್ರಕಟಿಸಲಾಗುವುದು ಎಂದು ತಿಳಿಸಿದ್ದಾರೆ.

ಅಭಿವೃದ್ಧಿ ಮಂಡಳಿ ಸಭೆಯಲ್ಲಿ ಕೃಷಿ ಸಚಿವ ಚೆಲುರಾಯಸ್ವಾಮಿ, ಕರ್ನಾಟಕ ರಾಜ್ಯ ಜೈವಿಕ ಇಂಧನ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಸುಧೀಂದ್ರ ಎಸ್.ಇ.ಸುಧೀಂದ್ರ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ ಕಾರ್ಯದರ್ಶಿ ಸಮೀರ್‌ ಶುಕ್ಲಾ, ಆಯುಕ್ತೆ ಅರುಂಧತಿ ಚಂದ್ರಶೇಖರ್‌ ಹಾಗೂ ಮಂಡಳಿ ಸದಸ್ಯರು ಪಾಲ್ಗೊಂಡಿದ್ದರು.

ಆಂದೋಲನ ಡೆಸ್ಕ್

Recent Posts

ರಾಜ್ಯದಲ್ಲಿ ವಸತಿ ರಹಿತರಿಗೆ 5 ಲಕ್ಷ ನಿವೇಶನ : ಸಿಎಂ ಘೋಷಣೆ

ಬೆಂಗಳೂರು : ರಾಜ್ಯದಲ್ಲಿ 5 ಲಕ್ಷ ನಿವೇಶನ ಹಂಚಿಕೆಗೆ ತೀರ್ಮಾನ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ತಿಳಿಸಿದರು. ಸಿಎಂ ಡಿ.ಕೆ.ಶಿವಕುಮಾರ್‌ ನೇತೃತ್ವದ…

11 hours ago

ನಟ ದರ್ಶನ್‌ಗೆ ಮತ್ತೊಂದು ಕಾನೂನು ಸಂಕಷ್ಟ

ಮೈಸೂರು: ಚಿತ್ರದುರ್ಗದ  ರೇಣುಕಾಸ್ವಾಮಿ ಕೊಲೆ  ಪ್ರಕರಣದಲ್ಲಿ ಜೈಲು ಸೇರಿರುವ ಬೆನ್ನಲ್ಲೇ ನಟ ದರ್ಶನ್‌ಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಮೈಸೂರಿನ…

13 hours ago

ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್‌ ಒಡೆಯರ್‌

ಕೊಪ್ಪಳ: ಐತಿಹಾಸಿಕ ಅಂಜನಾದ್ರಿಗೆ ಸಂಸದ ಯದುವೀರ್  ಒಡೆಯರ್‌ ಭೇಟಿ ನೀಡಿ ದೇವರ ದರ್ಶನ ಪಡೆದರು. ಹನುಮ ಹುಟ್ಟಿದ ನಾಡು ಎಂದು…

15 hours ago

7 ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ ಅವರು ಬರೋಬ್ಬರಿ 7 ವರ್ಷಗಳ ಬಳಿಕ ಭಾರತಕ್ಕೆ ಆಗಮಿಸಲಿದ್ದಾರೆ. ಸೆಪ್ಟೆಂಬರ್‌ 12ರಂದು ದೆಹಲಿಗೆ…

15 hours ago

ಓದುಗರ ಪತ್ರ: ಕುಕ್ಕರಹಳ್ಳಿಕೆರೆ ಅಂಗಳದಲ್ಲಿ ನಾಯಿಗಳ ಹಾವಳಿ ನಿಯಂತ್ರಿಸಿ

ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…

21 hours ago

ಓದುಗರ ಪತ್ರ: ಸಚಿವರುಗಳೇ ಮುಖ್ಯಮಂತ್ರಿಗಳ ಮಾತನ್ನು ಕಾರ್ಯರೂಪಕ್ಕೆ ತನ್ನಿ

ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…

21 hours ago