ರಾಜ್ಯ

ರಾಜ್ಯದಲ್ಲಿ ಶೀಘ್ರದಲ್ಲೇ ಅರ್ಹರಿಗೆ ಹೊಸ ಬಿಪಿಎಲ್‌ ಕಾರ್ಡ್‌ ವಿತರಣೆ: ಸಚಿವ ಮುನಿಯಪ್ಪ ಘೋಷಣೆ

ಬೆಳಗಾವಿ: ರಾಜ್ಯದಲ್ಲಿ ಶೀಘ್ರದಲ್ಲೇ ಅರ್ಹರಿಗೆ ಹೊಸ ಬಿಪಿಎಲ್‌ ಕಾರ್ಡ್‌ ವಿತರಣೆ ಮಾಡಲಾಗುವುದು ಎಂದು ಆಹಾರ ಇಲಾಖೆ ಸಚಿವ ಕೆ.ಎಚ್.ಮುನಿಯಪ್ಪ ಘೋಷಣೆ ಮಾಡಿದ್ದಾರೆ.

ಈ ಕುರಿತು ಬೆಳಗಾವಿಯಲ್ಲಿ ಮಾತನಾಡಿದ ಅವರು, ಅರ್ಹರಿಗೆ ಬಿಪಿಎಲ್‌ ಕಾರ್ಡ್‌ ಕೊಡುತ್ತಿದ್ದೇವೆ. 10 ಲಕ್ಷ ಅನರ್ಹರನ್ನು ಎಪಿಎಲ್‌ ಕಾರ್ಡ್‌ಗೆ ಶಿಫ್ಟ್‌ ಮಾಡುತ್ತಿದ್ದೇವೆ ಎಂದು ಹೇಳಿದರು.

ಇದನ್ನು ಓದಿ: ಮೈಸೂರಿನಲ್ಲಿ ಸೆರೆ ಸಿಕ್ಕಿದ್ದ 4 ಹುಲಿ ಮರಿಗಳ ನಿಗೂಢ ಸಾವು

ಎಪಿಎಲ್‌ ಕಾರ್ಡ್‌ಗೆ ಮೊದಲು 15 ಕೆಜಿ ಅಕ್ಕಿ ಕೊಡುತ್ತಿದ್ದೆವು. ಆದರೆ ಹಲವರು ಅಕ್ಕಿ ತೆಗೆದುಕೊಳ್ಳುತ್ತಿರಲಿಲ್ಲ. ಆದ್ದರಿಂದ ಒಂದು ವರ್ಷದಿಂದ ಅಕ್ಕಿ ತೆಗೆದುಕೊಳ್ಳದೇ ಇದ್ದವರನ್ನು ಸಸ್ಪೆಂಡ್‌ ಮಾಡಿದ್ದೇವೆ. ಡಿಮ್ಯಾಂಡ್‌ ಬಂದರೆ ಮತ್ತೆ ಅಕ್ಕಿ ಕೊಡುತ್ತೇವೆ ಎಂದು ಹೇಳಿದರು.

ಇನ್ನು ರಾಜ್ಯದಲ್ಲಿ ಅನ್ನಭಾಗ್ಯ ಅಕ್ಕಿ ಅಕ್ರಮ ಸಂಗ್ರಹ ಹಾಗೂ ಮಾರಾಟಕ್ಕೆ ಸಂಬಂಧಿಸಿದಂತೆ 570 ಜನರನ್ನು ಬಂಧಿಸಲಾಗಿದೆ. ಒಟ್ಟು 29,603.15 ಕ್ವಿಂಟಾಲ್‌ ಅಕ್ಕಿಯನ್ನು ವಶಪಡಿಸಿಕೊಂಡಿದ್ದು, 314 ವಾಹನಗಳನ್ನು ಜಪ್ತಿ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

ಆಂದೋಲನ ಡೆಸ್ಕ್

Recent Posts

ನೇಪಾಳ ಪ್ರವಾಹ | ಮೃತರ ಸಂಖ್ಯೆ 939ಕ್ಕೆ ಏರಿಕೆ, ಇನ್ನೂ ಸುಮಾರು 4,000 ಜನ ಕಣ್ಮರೆ

ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ ಮುಂದುವರಿದಿದ್ದು, ಮೃತರ ಸಂಖ್ಯೆ 939ಕ್ಕೆ ಏರಿಕೆಯಾಗಿದೆ. ಇನ್ನೂ ಸುಮಾರು 4 ಸಾವಿರ ಜನರು…

46 mins ago

ಮಡಿಕೇರಿ: ಕೆರೆಗೆ ಹಾರಿ ತಾಯಿ ಮಗಳು ಆತ್ಮಹತ್ಯೆ

ಮಡಿಕೇರಿ: ತಲಕಾವೇರಿ ಸಮೀಪದ ತಣ್ಣಿಮಾನಿ ಗ್ರಾಮದಲ್ಲಿ ತಾಯಿ ಮತ್ತು ಮಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.…

56 mins ago

ಮಡಿಕೇರಿ: ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್‌ ಕಲ್ಲುಬಂಡೆ!

ಮಡಿಕೇರಿ: ಕೊಡಗಿನಲ್ಲಿ ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್‌ ಕಲ್ಲುಬಂಡೆ ಆತಂಕ ಮೂಡಿಸಿದೆ. ಮಡಿಕೇರಿ ತಾಲೂಕಿನ ಕುಂದಚೇರಿ ಗ್ರಾಮದ ಪೊಲಮಾನಿ…

1 hour ago

ಓದುಗರ ಪತ್ರ: ನೀರು ಸೋರಿಕೆ ತಡೆಗಟ್ಟಿ

ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…

9 hours ago

ಓದುಗರ ಪತ್ರ: ಬದಲಾಗುತ್ತಿದೆ ಚಾತುರ್ಮಾಸ ಪದದ ಅರ್ಥ

ಪ್ರತಿವರ್ಷ ಆಷಾಢ, ಶ್ರಾವಣ ಮಾಸದ ಸಮಯದಲ್ಲಿ ಎಲ್ಲ ಮಠಾಧೀಶರೂ ಚಾತುರ್ಮಾಸ ವ್ರತವನ್ನು ಆಚರಿಸುವುದು ವಾಡಿಕೆ. ಚಾತುರ್ಮಾಸ ಎಂದರೆ ನಾಲ್ಕು ತಿಂಗಳು.…

9 hours ago

ಓದುಗರ ಪತ್ರ: ದಸರಾ ಮಹೋತ್ಸವ ಸರಳವಾಗಿರಲಿ

ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವವು ನಮ್ಮ ನಾಡಿನ ಸಾಂಸ್ಕೃತಿಕ ಅನನ್ಯತೆಯನ್ನು ಎತ್ತಿ ಹಿಡಿಯುತ್ತದೆ. ಕಲೆ, ಸಾಹಿತ್ಯ, ಸಂಸ್ಕೃತಿಯ ಮೂಲಕ…

9 hours ago