ರಾಜ್ಯ

ಕೃಷಿ ಕ್ಷೇತ್ರದಲ್ಲಿನ ಹೊಸ ಬದಲಾವಣೆಗಳು ಪ್ರತಿ ರೈತರನ್ನೂ ತಲುಪಬೇಕು: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕೃಷಿ ಕ್ಷೇತ್ರದಲ್ಲಿನ ಹೊಸ ಬದಲಾವಣೆಗಳು ಪ್ರತಿ ರೈತರನ್ನೂ ತಲುಪಬೇಕು. ಈ ದಿಸೆಯಲ್ಲಿ ಎಫ್‌ಕೆಸಿಸಿಐನ ಪ್ರಯತ್ನ ಉತ್ತಮವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ ಆಯೋಜಿಸಿದ್ದ “ಗ್ಲೋಬಲ್ ಅಗ್ರಿಟೆಕ್ ಸಮ್ಮಿಟ್-2026″ನ್ನು ಉದ್ಘಾಟಿಸಿ ಮಾತನಾಡಿದರು.

ಎಫ್‌ಕೆಸಿಸಿಐನ ಅಧ್ಯಕ್ಷರಾದ ಉಮಾರೆಡ್ಡಿ ಅವರು ಉತ್ತಮ ವಾಣಿಜ್ಯೋದ್ಯಮಿಯಾಗಿ ನನಗೆ ಚಿರಪರಿಚಿತರು. ಕೃಷಿ ವಿವಿ ಹಾಗೂ ಎಫ್‌ಕೆಸಿಸಿಐನ ಸಹಭಾಗಿತ್ವದಲ್ಲಿ ಏರ್ಪಡಿಸಲಾದ ಆಯೋಜಿಸಿದ್ದ “ಗ್ಲೋಬಲ್ ಅಗ್ರಿಟೆಕ್ ಸಮ್ಮಿಟ್-2026 ರೈತರಿಗೆ ಸಹಕಾರಿಯಾಗಿದೆ. ರೈತರಿಗೆ ಉಪಯುಕ್ತವಾದ ಈ ಕಾರ್ಯಕ್ರಮದಲ್ಲಿ ಸಾವಯವ ಕೃಷಿ ಹಾಗೂ ಯಂತ್ರೋಪಕರಣಗಳ ವಸ್ತುಪ್ರದರ್ಶನ ಏರ್ಪಡಿಸಿರುವುದು ಉತ್ತಮವಾಗಿದೆ. ಆದರೆ ವಸ್ತುಪ್ರದರ್ಶನವನ್ನು ಪ್ರತ್ಯೇಕವಾಗಿ ಆಯೋಜಿಸುವುದು ಉತ್ತಮವಾಗಿದೆ. ಇಂತಹ ಕಾರ್ಯಕ್ರಮಗಳಲ್ಲಿ ರೈತರು ಹೆಚ್ಚು ಸಂಖ್ಯೆಯಲ್ಲಿ ಭಾಗವಹಿಸುವಂತಾಗಬೇಕು ಎಂದರು.

ಭಾರತ ದೇಶ ಕೃಷಿ ಪ್ರಧಾನ ದೇಶ. ಕೃಷಿಯನ್ನು ಸುಸ್ಥಿರಗೊಳಿಸುವುದು ಹಾಗೂ ಲಾಭದಾಯಕಗೊಳಿಸುವುದೇ ಈ ಕಾರ್ಯಕ್ರಮದ ಉದ್ದೇಶವಾಗಿದೆ. ಇಂದಿನ ಯುವಜನತೆ ಕೃಷಿಯಿಂದ ವಿಮುಖರಾಗುತ್ತಿದ್ದಾರೆ. ಕೃಷಿ ಲಾಭದಾಯಕವಾದರೆ ಯುವಜನತೆ ಸಹಜವಾಗಿ ಕೃಷಿಯತ್ತ ಮುಖಮಾಡುತ್ತಾರೆ. ಸರ್ಕಾರ ಕೃಷಿಯನ್ನು ಲಾಭದಾಯಕಗೊಳಿಸಲು ಹಲವು ಯೋಜನೆಗಳನ್ನು ರೂಪಿಸಿ, ಈ ಉದ್ದೇಶಕ್ಕೆ ಕೈಗಾರಿಕೆಗಳೂ ಕೈಜೋಡಿಸಬೇಕು ಎಂದರು.

ಮಾಹಿತಿ ತಂತ್ರಜ್ಞಾನದಲ್ಲಿ ಬೆಂಗಳೂರು ರಾಜಧಾನಿಯಾದಂತೆ, ಕೃಷಿ ತಂತ್ರಜ್ಞಾನದಲ್ಲಿಯೂ ಬೆಂಗಳೂರು ರಾಜಧಾನಿಯಾಗಬೇಕು. ರಾಜ್ಯದ ಸಮಗ್ರ ಅಭಿವೃದ್ಧಿಗಾಗಿ ಕೃತಕ ಬುದ್ದಿಮತ್ತೆ ಸೇರಿದಂತೆ ಎಲ್ಲ ಕ್ಷೇತ್ರಗಳ ತಂತ್ರಜ್ಞಾನವನ್ನು ಬಳಸಿಕೊಳ್ಳಬೇಕು ಎಂದರು.

ರಾಜ್ಯದಲ್ಲಿ ಒಣಭೂಮಿಯ ಪ್ರಮಾಣ ಹೆಚ್ಚಿದ್ದು, ಸಣ್ಣಹಿಡುವಳಿದಾರರಿಗೆ ಕೃಷಿಯನ್ನು ಲಾಭದಾಯಕಗೊಳಿಸಬೇಕಿದೆ. ಆದ್ದರಿಂದ ನಮ್ಮ ಸರ್ಕಾರ ಕೃಷಿಭಾಗ್ಯ ಯೋಜನೆಯನ್ನು ಜಾರಿಗೆ ತಂದಿತು. ಹೆಚ್ಚು ಒಣಭೂಮಿಯಿರುವ ರಾಜ್ಯಗಳಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದೆ. ಬಿಜೆಪಿಯವರು ಅಧಿಕಾರಕ್ಕೆ ಬಂದಾಗ ಕೃಷಿಭಾಗ್ಯವನ್ನು ಸ್ಥಗಿತಗೊಳಿಸಿದ್ದು, ನಮ್ಮ ಸರ್ಕಾರ ಈ ಯೋಜನೆಗೆ ಮರುಜಾರಿಗೊಳಿಸಿದೆ. ಸುಮಾರು 83 ಲಕ್ಷ ರೈತರಿಗೆ 70 ಸಾವಿರ ಕೋಟಿ ರೂ.ಗಳ ಕೃಷಿಸಾಲವನ್ನು ನೀಡಲಾಗಿದೆ. ಕಳೆದ ವರ್ಷ 8 ಸಾವಿರ ಕೋಟಿ ಗಳನ್ನು ಮುಖ್ಯಮಂತ್ರಿಗಳ ಮೂಲಭೂತ ಸೌಕರ್ಯಗಳಿಗೆ ಇಡಲಾಗಿತ್ತು. ಬಂಡವಾಳ ಹೂಡಿಕೆ ಅಧಿಕಗೊಳ್ಳಬೇಕು. ಕೈಗಾರಿಕೆ, ಗ್ರಾಮೀಣಾಭಿವೃದ್ಧಿಯಲ್ಲಿ ಕರ್ನಾಟಕ ಮೊದಲನೇ ಸ್ಥಾನದಲ್ಲಿದ್ದು, ಕೃಷಿ ಕ್ಷೇತ್ರದಲ್ಲಿಯೂ ಹೂಡಿಕೆಗಳು ಹೆಚ್ಚಾಗಬೇಕು. ಆಗ ಮಾತ್ರ ಕೃಷಿ ಲಾಭದಾಯಕವಾಗಲಿದೆ ಎಂದರು.

ಆಂದೋಲನ ಡೆಸ್ಕ್

Recent Posts

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

11 hours ago

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

19 hours ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

19 hours ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

19 hours ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

22 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

22 hours ago