ರಾಜ್ಯ

ಕೃಷಿ ಕ್ಷೇತ್ರದಲ್ಲಿನ ಹೊಸ ಬದಲಾವಣೆಗಳು ಪ್ರತಿ ರೈತರನ್ನೂ ತಲುಪಬೇಕು: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕೃಷಿ ಕ್ಷೇತ್ರದಲ್ಲಿನ ಹೊಸ ಬದಲಾವಣೆಗಳು ಪ್ರತಿ ರೈತರನ್ನೂ ತಲುಪಬೇಕು. ಈ ದಿಸೆಯಲ್ಲಿ ಎಫ್‌ಕೆಸಿಸಿಐನ ಪ್ರಯತ್ನ ಉತ್ತಮವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ ಆಯೋಜಿಸಿದ್ದ “ಗ್ಲೋಬಲ್ ಅಗ್ರಿಟೆಕ್ ಸಮ್ಮಿಟ್-2026″ನ್ನು ಉದ್ಘಾಟಿಸಿ ಮಾತನಾಡಿದರು.

ಎಫ್‌ಕೆಸಿಸಿಐನ ಅಧ್ಯಕ್ಷರಾದ ಉಮಾರೆಡ್ಡಿ ಅವರು ಉತ್ತಮ ವಾಣಿಜ್ಯೋದ್ಯಮಿಯಾಗಿ ನನಗೆ ಚಿರಪರಿಚಿತರು. ಕೃಷಿ ವಿವಿ ಹಾಗೂ ಎಫ್‌ಕೆಸಿಸಿಐನ ಸಹಭಾಗಿತ್ವದಲ್ಲಿ ಏರ್ಪಡಿಸಲಾದ ಆಯೋಜಿಸಿದ್ದ “ಗ್ಲೋಬಲ್ ಅಗ್ರಿಟೆಕ್ ಸಮ್ಮಿಟ್-2026 ರೈತರಿಗೆ ಸಹಕಾರಿಯಾಗಿದೆ. ರೈತರಿಗೆ ಉಪಯುಕ್ತವಾದ ಈ ಕಾರ್ಯಕ್ರಮದಲ್ಲಿ ಸಾವಯವ ಕೃಷಿ ಹಾಗೂ ಯಂತ್ರೋಪಕರಣಗಳ ವಸ್ತುಪ್ರದರ್ಶನ ಏರ್ಪಡಿಸಿರುವುದು ಉತ್ತಮವಾಗಿದೆ. ಆದರೆ ವಸ್ತುಪ್ರದರ್ಶನವನ್ನು ಪ್ರತ್ಯೇಕವಾಗಿ ಆಯೋಜಿಸುವುದು ಉತ್ತಮವಾಗಿದೆ. ಇಂತಹ ಕಾರ್ಯಕ್ರಮಗಳಲ್ಲಿ ರೈತರು ಹೆಚ್ಚು ಸಂಖ್ಯೆಯಲ್ಲಿ ಭಾಗವಹಿಸುವಂತಾಗಬೇಕು ಎಂದರು.

ಭಾರತ ದೇಶ ಕೃಷಿ ಪ್ರಧಾನ ದೇಶ. ಕೃಷಿಯನ್ನು ಸುಸ್ಥಿರಗೊಳಿಸುವುದು ಹಾಗೂ ಲಾಭದಾಯಕಗೊಳಿಸುವುದೇ ಈ ಕಾರ್ಯಕ್ರಮದ ಉದ್ದೇಶವಾಗಿದೆ. ಇಂದಿನ ಯುವಜನತೆ ಕೃಷಿಯಿಂದ ವಿಮುಖರಾಗುತ್ತಿದ್ದಾರೆ. ಕೃಷಿ ಲಾಭದಾಯಕವಾದರೆ ಯುವಜನತೆ ಸಹಜವಾಗಿ ಕೃಷಿಯತ್ತ ಮುಖಮಾಡುತ್ತಾರೆ. ಸರ್ಕಾರ ಕೃಷಿಯನ್ನು ಲಾಭದಾಯಕಗೊಳಿಸಲು ಹಲವು ಯೋಜನೆಗಳನ್ನು ರೂಪಿಸಿ, ಈ ಉದ್ದೇಶಕ್ಕೆ ಕೈಗಾರಿಕೆಗಳೂ ಕೈಜೋಡಿಸಬೇಕು ಎಂದರು.

ಮಾಹಿತಿ ತಂತ್ರಜ್ಞಾನದಲ್ಲಿ ಬೆಂಗಳೂರು ರಾಜಧಾನಿಯಾದಂತೆ, ಕೃಷಿ ತಂತ್ರಜ್ಞಾನದಲ್ಲಿಯೂ ಬೆಂಗಳೂರು ರಾಜಧಾನಿಯಾಗಬೇಕು. ರಾಜ್ಯದ ಸಮಗ್ರ ಅಭಿವೃದ್ಧಿಗಾಗಿ ಕೃತಕ ಬುದ್ದಿಮತ್ತೆ ಸೇರಿದಂತೆ ಎಲ್ಲ ಕ್ಷೇತ್ರಗಳ ತಂತ್ರಜ್ಞಾನವನ್ನು ಬಳಸಿಕೊಳ್ಳಬೇಕು ಎಂದರು.

ರಾಜ್ಯದಲ್ಲಿ ಒಣಭೂಮಿಯ ಪ್ರಮಾಣ ಹೆಚ್ಚಿದ್ದು, ಸಣ್ಣಹಿಡುವಳಿದಾರರಿಗೆ ಕೃಷಿಯನ್ನು ಲಾಭದಾಯಕಗೊಳಿಸಬೇಕಿದೆ. ಆದ್ದರಿಂದ ನಮ್ಮ ಸರ್ಕಾರ ಕೃಷಿಭಾಗ್ಯ ಯೋಜನೆಯನ್ನು ಜಾರಿಗೆ ತಂದಿತು. ಹೆಚ್ಚು ಒಣಭೂಮಿಯಿರುವ ರಾಜ್ಯಗಳಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದೆ. ಬಿಜೆಪಿಯವರು ಅಧಿಕಾರಕ್ಕೆ ಬಂದಾಗ ಕೃಷಿಭಾಗ್ಯವನ್ನು ಸ್ಥಗಿತಗೊಳಿಸಿದ್ದು, ನಮ್ಮ ಸರ್ಕಾರ ಈ ಯೋಜನೆಗೆ ಮರುಜಾರಿಗೊಳಿಸಿದೆ. ಸುಮಾರು 83 ಲಕ್ಷ ರೈತರಿಗೆ 70 ಸಾವಿರ ಕೋಟಿ ರೂ.ಗಳ ಕೃಷಿಸಾಲವನ್ನು ನೀಡಲಾಗಿದೆ. ಕಳೆದ ವರ್ಷ 8 ಸಾವಿರ ಕೋಟಿ ಗಳನ್ನು ಮುಖ್ಯಮಂತ್ರಿಗಳ ಮೂಲಭೂತ ಸೌಕರ್ಯಗಳಿಗೆ ಇಡಲಾಗಿತ್ತು. ಬಂಡವಾಳ ಹೂಡಿಕೆ ಅಧಿಕಗೊಳ್ಳಬೇಕು. ಕೈಗಾರಿಕೆ, ಗ್ರಾಮೀಣಾಭಿವೃದ್ಧಿಯಲ್ಲಿ ಕರ್ನಾಟಕ ಮೊದಲನೇ ಸ್ಥಾನದಲ್ಲಿದ್ದು, ಕೃಷಿ ಕ್ಷೇತ್ರದಲ್ಲಿಯೂ ಹೂಡಿಕೆಗಳು ಹೆಚ್ಚಾಗಬೇಕು. ಆಗ ಮಾತ್ರ ಕೃಷಿ ಲಾಭದಾಯಕವಾಗಲಿದೆ ಎಂದರು.

ಆಂದೋಲನ ಡೆಸ್ಕ್

Recent Posts

ಸೋಮವಾರಪೇಟೆ: ತೋಳೂರುಶೆಟ್ಟಳ್ಳಿ ಗ್ರಾಮದಲ್ಲಿ ಶ್ರೀ ಸಬ್ಬಮ್ಮ ದೇವಿಯ ಸುಗ್ಗಿ ಉತ್ಸವ

ಸೋಮವಾರಪೇಟೆ: ತಾಲೂಕಿನ ತೋಳೂರುಶೆಟ್ಟಳ್ಳಿ ಗ್ರಾಮದಲ್ಲಿನ ಶ್ರೀ ಸಬ್ಬಮ್ಮ ದೇವಿಯ ಸುಗ್ಗಿ ಉತ್ಸವ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿ ಶುಕ್ರವಾರ ವಿಜೃಂಭಣೆಯಿಂದ ನಡೆಯಿತು.…

36 mins ago

ಎಎಪಿ ತೊರೆದು ಬಿಜೆಪಿ ಸೇರಿದ 7 ರಾಜ್ಯಸಭಾ ಸದಸ್ಯರು

ನವದೆಹಲಿ: ಆಮ್‌ ಆದ್ಮಿ ಪಕ್ಷಕ್ಕೆ ಬಿಗ್‌ ಶಾಕ್‌ ಎದುರಾಗಿದ್ದು, ರಾಘವ್‌ ಚಡ್ಡಾ ಸೇರಿದಂತೆ ಏಳು ರಾಜ್ಯಸಭಾ ಸಂಸದರು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.…

45 mins ago

ಮೈಸೂರು| ಚಲುವಾಂಬ ಆಸ್ಪತ್ರೆಗೆ ಸಂಸದ ಯದುವೀರ್‌ ಒಡೆಯರ್‌ ದಿಢೀರ್‌ ಭೇಟಿ

ಮೈಸೂರು: ಇಲ್ಲಿನ ಚಲುವಾಂಬ ಆಸ್ಪತ್ರೆಗೆ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು ದಿಢೀರ್‌ ಭೇಟಿ ನೀಡಿ ಪರಿಶೀಲನೆ ನಡೆಸಿದರು.…

1 hour ago

ಸಿಇಟಿ ಪರೀಕ್ಷೆ| ಜನಿವಾರ ತೆಗೆಸಿದ ಬೆಂಗಳೂರು ಕಾಲೇಜು: ಪೋಷಕರಿಂದ ಆಕ್ರೋಶ

ಬೆಂಗಳೂರು: ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ) ಬರೆಯುವ ವೇಳೆ ವಿದ್ಯಾರ್ಥಿನಿ ಮೂಗಿಗೆ ಟೇಪ್ ಹಾಕಿದ ಪ್ರಕರಣ ಮಾಸುವ ಮುನ್ನವೇ ಐವರು ವಿದ್ಯಾರ್ಥಿಗಳ…

2 hours ago

ಹಾಸನ: ವೇದಿಕೆ ಮೇಲೆಯೇ ಗಳಗಳನೆ ಕಣ್ಣೀರು ಹಾಕಿದ ಎಚ್.ಡಿ.ರೇವಣ್ಣ

ಹಾಸನ: ಜಿಲ್ಲೆಯ ಹೊಳೆನರಸೀಪುರ ವ್ಯಾಪ್ತಿಯಲ್ಲಿ ನಡೆದ ದೇವಾಲಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರು ಭಾವುಕರಾಗಿ ಕಣ್ಣೀರು…

2 hours ago

ಮೇ.20ರೊಳಗೆ ಸಚಿವ ಸಂಪುಟ ವಿಸ್ತರಣೆ ಸಾಧ್ಯತೆ: ಸಲೀಂ ಅಹಮ್ಮದ್‌

ಹುಬ್ಬಳ್ಳಿ: ಮೇ.20ರೊಳಗೆ ರಾಜ್ಯ ಸಚಿವ ಸಂಪುಟ ವಿಸ್ತರಣೆ ಆಗಬಹುದು ಎಂದು ವಿಧಾನಪರಿಷತ್‌ ಕಾಂಗ್ರೆಸ್‌ ಮುಖ್ಯ ಸಚೇತಕ ಸಲೀಂ ಅಹಮ್ಮದ್‌ ತಿಳಿಸಿದ್ದಾರೆ.…

3 hours ago