ಬೆಂಗಳೂರು : ಜುಲೈ ೧ ರಿಂದ ದೇಶಾದ್ಯಂತ ಮೂರು ಹೊಸ ಕ್ರಿಮಿನಲ್ ಕಾನೂನುಗಳು ಜಾರಿಯಾಗಲಿವೆ. ಭಾರತೀಯ ನ್ಯಾಯ ಸಂಹಿತಾ , ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ ಮತ್ತು ಭಾರತೀಯ ಸಾಕ್ಷಿ ಕಾಯ್ದೆಗಳು ಜಾರಿಗೆ ಬರುತ್ತಿವೆ. ಇದರ ಜೊತೆಗೆ ಹೊಸ ಕ್ರಿಮಿನಲ್ ಕಾನೂನುಗಳ ಪ್ರಮುಖ ಲಕ್ಷಣಗಳನ್ನ ಮಹಿಳೆಯರಿಗೆ, ಯುವಕರಿಗೆ, ವಿದ್ಯಾರ್ಥಿಗಳಿಗೆ ಜೊತೆಗೆ ಹಿರಿಯ ನಾಗರೀಕ ಮತ್ತು ಗಣ್ಯ ವ್ಯಕ್ತಿಗಳಿಗೆ ತಿಳಿಸಲು ವಿಶೇಷ ಕಾರ್ಯಕ್ರಮಗಳನ್ನ ಆಯೋಜಿಸಲಾಗಿದೆ.
ಇನ್ನು ಬ್ರಿಟಿಷರ ಕಾಲದ ಐಪಿಸಿ ಭಾರತೀಯ ನ್ಯಾಯ ಸಂಹಿತ, ಸಿಆರ್ ಪಿಸಿ ಭಾರತೀಯ ನಾಗರೀಕ ಸುರಕ್ಷಾ ಸಂಹಿತಾ, ಇಂಡಿಯನ್ ಎವಿಡೆನ್ಸ್ ಆಕ್ಟ್ -ಭಾರತೀಯ ಸಾಕ್ಷ್ಯ ಅಧಿನಿಯಮ ಅನ್ನು ಬದಲಿಸುತ್ತದೆ. ಈಗಿರುವ ಕಾಯಿದೆಗಳಿಗೆ ಹೋಲಿಸಿದರೆ ಈ ಮೂರು ಹೊಸ ಕಾನೂನುಗಳಲ್ಲಿ ಹಲವು ವಿನೂತ ಉದ್ದೇಶಗಳನ್ನ ಹೊಂದಿದೆ.
ಐಪಿಸಿ ಭಾರತೀಯ ನ್ಯಾಯ ಸಂಹಿತ, ಸಿಆರ್ ಪಿಸಿ ಭಾರತೀಯ ನಾಗರೀಕ ಸುರಕ್ಷಾ ಸಂಹಿತಾ, ಇಂಡಿಯನ್ ಎವಿಡೆನ್ಸ್ ಆಕ್ಟ್ -ಭಾರತೀಯ ಸಾಕ್ಷ್ಯ ಅಧಿನಿಯಮ ೨೦೨೩ ಬಿಎಸ್ ಎ ಕಾಲಮಿತಿಯೊಳಗೆ ತನಿಕೆ ಮತ್ತು ತ್ವರಿತ ನ್ಯಾಯ ಖಾತ್ರಿಪಡಿಸುವ ನಿಟ್ಟಿನಲ್ಲಿ ಪ್ರಮುಖ ಬದಲಾವಣೆ ಮಾಡಲಾಗಿದೆ.
ಇನ್ನು ಈ ಮೂರು ಕ್ರಿಮಿನಲ್ ಕಾನೂನುಗಳನ್ನ ಕಳೆದ ವರ್ಷವೇ ಸಂಸತ್ತು ಅಂಗೀಕಾರ ಮಾಡಿತ್ತು. ಮತ್ತು ಅದೇ ತಿಂಗಳು ರಾಷ್ಟ್ರಪತಿಗಳ ಒಪ್ಪಿಗೆಯೂ ಸಹ ಪಡೆಯಲಾಗಿತ್ತು. ಆದರೆ ಅವುಗಳು ಜಾರಿಗೆ ಬಂದಿರಲಿಲ್ಲ. ಈ ವರ್ಷ ಫೆಬ್ರವರಿ ೨೫ ರಂದು ಮೂರು ಕಾನೂನುಗಳು ಜುಲೈ ೧ ರಂದು ಜಾರಿಗೆ ಬರುತ್ತವೆ ಎಂದು ಸರ್ಕಾರವು ಅಧಿಸೂಚನೆಯನ್ನು ಹೊರಡಿಸಿತು.
ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…
ಅಮರಾವತಿ: ಜಗತ್ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…
ಮುಂಬೈ: ಬಾಲಿವುಡ್ನ ಭಾಯಿಜಾನ್ ಸಲ್ಮಾನ್ ಖಾನ್ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…
ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…
ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…
ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…