ರಾಜ್ಯ

ಜುಲೈ ೧ ರಿಂದ ದೇಶದಾದ್ಯಂತ ೩ ಹೊಸ ಕ್ರಿಮಿನಲ್ ಕಾನೂನು ಜಾರಿ

ಬೆಂಗಳೂರು : ಜುಲೈ ೧ ರಿಂದ ದೇಶಾದ್ಯಂತ ಮೂರು ಹೊಸ ಕ್ರಿಮಿನಲ್‌ ಕಾನೂನುಗಳು ಜಾರಿಯಾಗಲಿವೆ. ಭಾರತೀಯ ನ್ಯಾಯ ಸಂಹಿತಾ , ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ ಮತ್ತು ಭಾರತೀಯ ಸಾಕ್ಷಿ ಕಾಯ್ದೆಗಳು ಜಾರಿಗೆ ಬರುತ್ತಿವೆ. ಇದರ ಜೊತೆಗೆ ಹೊಸ ಕ್ರಿಮಿನಲ್‌ ಕಾನೂನುಗಳ ಪ್ರಮುಖ ಲಕ್ಷಣಗಳನ್ನ ಮಹಿಳೆಯರಿಗೆ, ಯುವಕರಿಗೆ, ವಿದ್ಯಾರ್ಥಿಗಳಿಗೆ ಜೊತೆಗೆ ಹಿರಿಯ ನಾಗರೀಕ ಮತ್ತು ಗಣ್ಯ ವ್ಯಕ್ತಿಗಳಿಗೆ ತಿಳಿಸಲು ವಿಶೇಷ ಕಾರ್ಯಕ್ರಮಗಳನ್ನ ಆಯೋಜಿಸಲಾಗಿದೆ.

ಇನ್ನು ಬ್ರಿಟಿಷರ ಕಾಲದ ಐಪಿಸಿ ಭಾರತೀಯ ನ್ಯಾಯ ಸಂಹಿತ, ಸಿಆರ್ ಪಿಸಿ ಭಾರತೀಯ ನಾಗರೀಕ ಸುರಕ್ಷಾ ಸಂಹಿತಾ, ಇಂಡಿಯನ್‌ ಎವಿಡೆನ್ಸ್‌ ಆಕ್ಟ್‌  -ಭಾರತೀಯ ಸಾಕ್ಷ್ಯ ಅಧಿನಿಯಮ ಅನ್ನು ಬದಲಿಸುತ್ತದೆ. ಈಗಿರುವ ಕಾಯಿದೆಗಳಿಗೆ ಹೋಲಿಸಿದರೆ ಈ ಮೂರು ಹೊಸ ಕಾನೂನುಗಳಲ್ಲಿ ಹಲವು ವಿನೂತ ಉದ್ದೇಶಗಳನ್ನ ಹೊಂದಿದೆ.

ಐಪಿಸಿ ಭಾರತೀಯ ನ್ಯಾಯ ಸಂಹಿತ, ಸಿಆರ್ ಪಿಸಿ ಭಾರತೀಯ ನಾಗರೀಕ ಸುರಕ್ಷಾ ಸಂಹಿತಾ, ಇಂಡಿಯನ್‌ ಎವಿಡೆನ್ಸ್‌ ಆಕ್ಟ್‌  -ಭಾರತೀಯ ಸಾಕ್ಷ್ಯ ಅಧಿನಿಯಮ ೨೦೨೩ ಬಿಎಸ್‌ ಎ ಕಾಲಮಿತಿಯೊಳಗೆ ತನಿಕೆ ಮತ್ತು ತ್ವರಿತ ನ್ಯಾಯ ಖಾತ್ರಿಪಡಿಸುವ ನಿಟ್ಟಿನಲ್ಲಿ ಪ್ರಮುಖ ಬದಲಾವಣೆ ಮಾಡಲಾಗಿದೆ.

ಇನ್ನು ಈ ಮೂರು ಕ್ರಿಮಿನಲ್‌ ಕಾನೂನುಗಳನ್ನ ಕಳೆದ ವರ್ಷವೇ ಸಂಸತ್ತು ಅಂಗೀಕಾರ ಮಾಡಿತ್ತು. ಮತ್ತು ಅದೇ ತಿಂಗಳು ರಾಷ್ಟ್ರಪತಿಗಳ ಒಪ್ಪಿಗೆಯೂ ಸಹ ಪಡೆಯಲಾಗಿತ್ತು. ಆದರೆ ಅವುಗಳು ಜಾರಿಗೆ ಬಂದಿರಲಿಲ್ಲ. ಈ ವರ್ಷ ಫೆಬ್ರವರಿ ೨೫ ರಂದು ಮೂರು ಕಾನೂನುಗಳು ಜುಲೈ ೧ ರಂದು ಜಾರಿಗೆ ಬರುತ್ತವೆ ಎಂದು ಸರ್ಕಾರವು ಅಧಿಸೂಚನೆಯನ್ನು ಹೊರಡಿಸಿತು.

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ತುಟ್ಟಿ ಭತ್ಯೆ ಹೆಚ್ಚಳ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ(ಡಿಎ)ಯನ್ನು ಶೇ.1.50ರಷ್ಟು ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 2026 ಜನವರಿ 1ರಿಂದ ಅನ್ವಯವಾಗುವಂತೆ…

7 hours ago

ಮೇ.13ರಂದು ಬೆಂಗಳೂರು ಜನತೆಗೆ ಬಿಗ್‌ ಗಿಫ್ಟ್:‌ ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಮೇ.13ಕ್ಕೆ ಬೆಂಗಳೂರು ಜನತೆಗೆ ಬಿಗ್‌ ಗಿಫ್ಟ್‌ ನೀಡಲಿದ್ದೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ತಿಳಿಸಿದ್ದಾರೆ. ಈ ಬಗ್ಗೆ ಮಾಧ್ಯಮದವರೊಂದಿಗೆ…

7 hours ago

ದೇವರಾಜ ಮಾರುಕಟ್ಟೆಗೆ ಸಂಸದ ಯದುವೀರ್‌ ಒಡೆಯರ್‌ ಭೇಟಿ

ಮೈಸೂರು: ಮೈಸೂರಿನ ಪಾರಂಪರಿಕ ಕಟ್ಟಡದಲ್ಲಿ ಒಂದಾಗಿರುವ ದೇವರಾಜ ಮಾರುಕಟ್ಟೆಗೆ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರಿಂದು ಭೇಟಿ ನೀಡಿ…

8 hours ago

ಪಂಚಭೂತಗಳಲ್ಲಿ ಲೀನರಾದ ಸಚಿವ ಡಿ.ಸುಧಾಕರ್‌

ಚಿತ್ರದುರ್ಗ: ಸಕಲ ಸರ್ಕಾರಿ ಗೌರವಗಳೊಂದಿಗೆ ಚಳ್ಳಕೆರೆಯ ಚಿತಾಗಾರದಲ್ಲಿ ಹಿರಿಯೂರು ಶಾಸಕ ಡಿ.ಸುಧಾಕರ್‌ ಅವರ ಅಂತ್ಯಕ್ರಿಯೆ ನೆರವೇರಿತು. ಬೆಳಿಗ್ಗೆಯಿಂದ ಸುಧಾಕರ್‌ ಅವರ…

8 hours ago

ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತನ ಮೇಲೆ ಕಾಡಾನೆ ದಾಳಿ: ಗಂಭೀರ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಜಮೀನಿನಲ್ಲಿದ್ದ ರೈತನೋರ್ವನ ಮೇಲೆ ಕಾಡಾನೆ ದಾಳಿ ಮಾಡಿದ ಪರಿಣಾಮ ತೀವ್ರ…

8 hours ago

ಎಂ.ಕೆ.ಸ್ಟಾಲಿನ್‌ ಭೇಟಿಯಾದ ತಮಿಳುನಾಡು ನೂತನ ಸಿಎಂ ವಿಜಯ್‌

ಚೆನ್ನೈ: ತಮಿಳುನಾಡಿನ ನೂತನ ಸಿಎಂ ವಿಜಯ್‌ ಅವರಿಂದು ಮಾಜಿ ಸಿಎಂ ಎಂ.ಕೆ.ಸ್ಟಾಲಿನ್‌ ಅವರನ್ನು ಭೇಟಿಯಾದರು. ಸದ್ಯ ಇಂದಿನ ಸಭೆಯಲ್ಲಿ ಇಬ್ಬರು…

10 hours ago