ಬೆಂಗಳೂರು : ಜುಲೈ ೧ ರಿಂದ ದೇಶಾದ್ಯಂತ ಮೂರು ಹೊಸ ಕ್ರಿಮಿನಲ್ ಕಾನೂನುಗಳು ಜಾರಿಯಾಗಲಿವೆ. ಭಾರತೀಯ ನ್ಯಾಯ ಸಂಹಿತಾ , ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ ಮತ್ತು ಭಾರತೀಯ ಸಾಕ್ಷಿ ಕಾಯ್ದೆಗಳು ಜಾರಿಗೆ ಬರುತ್ತಿವೆ. ಇದರ ಜೊತೆಗೆ ಹೊಸ ಕ್ರಿಮಿನಲ್ ಕಾನೂನುಗಳ ಪ್ರಮುಖ ಲಕ್ಷಣಗಳನ್ನ ಮಹಿಳೆಯರಿಗೆ, ಯುವಕರಿಗೆ, ವಿದ್ಯಾರ್ಥಿಗಳಿಗೆ ಜೊತೆಗೆ ಹಿರಿಯ ನಾಗರೀಕ ಮತ್ತು ಗಣ್ಯ ವ್ಯಕ್ತಿಗಳಿಗೆ ತಿಳಿಸಲು ವಿಶೇಷ ಕಾರ್ಯಕ್ರಮಗಳನ್ನ ಆಯೋಜಿಸಲಾಗಿದೆ.
ಇನ್ನು ಬ್ರಿಟಿಷರ ಕಾಲದ ಐಪಿಸಿ ಭಾರತೀಯ ನ್ಯಾಯ ಸಂಹಿತ, ಸಿಆರ್ ಪಿಸಿ ಭಾರತೀಯ ನಾಗರೀಕ ಸುರಕ್ಷಾ ಸಂಹಿತಾ, ಇಂಡಿಯನ್ ಎವಿಡೆನ್ಸ್ ಆಕ್ಟ್ -ಭಾರತೀಯ ಸಾಕ್ಷ್ಯ ಅಧಿನಿಯಮ ಅನ್ನು ಬದಲಿಸುತ್ತದೆ. ಈಗಿರುವ ಕಾಯಿದೆಗಳಿಗೆ ಹೋಲಿಸಿದರೆ ಈ ಮೂರು ಹೊಸ ಕಾನೂನುಗಳಲ್ಲಿ ಹಲವು ವಿನೂತ ಉದ್ದೇಶಗಳನ್ನ ಹೊಂದಿದೆ.
ಐಪಿಸಿ ಭಾರತೀಯ ನ್ಯಾಯ ಸಂಹಿತ, ಸಿಆರ್ ಪಿಸಿ ಭಾರತೀಯ ನಾಗರೀಕ ಸುರಕ್ಷಾ ಸಂಹಿತಾ, ಇಂಡಿಯನ್ ಎವಿಡೆನ್ಸ್ ಆಕ್ಟ್ -ಭಾರತೀಯ ಸಾಕ್ಷ್ಯ ಅಧಿನಿಯಮ ೨೦೨೩ ಬಿಎಸ್ ಎ ಕಾಲಮಿತಿಯೊಳಗೆ ತನಿಕೆ ಮತ್ತು ತ್ವರಿತ ನ್ಯಾಯ ಖಾತ್ರಿಪಡಿಸುವ ನಿಟ್ಟಿನಲ್ಲಿ ಪ್ರಮುಖ ಬದಲಾವಣೆ ಮಾಡಲಾಗಿದೆ.
ಇನ್ನು ಈ ಮೂರು ಕ್ರಿಮಿನಲ್ ಕಾನೂನುಗಳನ್ನ ಕಳೆದ ವರ್ಷವೇ ಸಂಸತ್ತು ಅಂಗೀಕಾರ ಮಾಡಿತ್ತು. ಮತ್ತು ಅದೇ ತಿಂಗಳು ರಾಷ್ಟ್ರಪತಿಗಳ ಒಪ್ಪಿಗೆಯೂ ಸಹ ಪಡೆಯಲಾಗಿತ್ತು. ಆದರೆ ಅವುಗಳು ಜಾರಿಗೆ ಬಂದಿರಲಿಲ್ಲ. ಈ ವರ್ಷ ಫೆಬ್ರವರಿ ೨೫ ರಂದು ಮೂರು ಕಾನೂನುಗಳು ಜುಲೈ ೧ ರಂದು ಜಾರಿಗೆ ಬರುತ್ತವೆ ಎಂದು ಸರ್ಕಾರವು ಅಧಿಸೂಚನೆಯನ್ನು ಹೊರಡಿಸಿತು.
ಪ್ರೊ.ರವಿವರ್ಮಕುಮಾರ್, ಸಮಾಜವಾದಿ ಚಿಂತಕರು ಹಾಗೂ ಮಾಜಿ ಅಡ್ವೋಕೇಟ್ ಜನರಲ್ ಇಂದು ಕಿಶನ್ ಜನ್ಮದಿನ; ಅವರ ನೆನಪು ನಮ್ಮೊಡನೆ ಸದಾ ಹಸಿರಾಗಿರಲಿ.…
ನವೀನ್ ಡಿಸೋಜ ಮಡಿಕೇರಿಯಲ್ಲಿ ನಡೆದ ಸಾರಿಗೆ ಪ್ರಾಧಿಕಾರದ ಸಭೆಯಲ್ಲಿ ದರ ಹೆಚ್ಚಳಕ್ಕೆ ನಿರ್ಧಾರ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಆಟೋ ರಿಕ್ಷಾ…
ಎಚ್.ಎಸ್.ದಿನೇಶ್ಕುಮಾರ್ ಮೈಸೂರು: ಕುರಿ ಸಾಕಾಣಿಕೆ, ಹೈನುಗಾರಿಕೆ ಹೀಗೆ ರೈತರಿಗೆ ಉಪಯೋಗವಾಗುವಂತಹ ಹಲವಾರು ಯೋಜನೆಗಳನ್ನು ರಾಜ್ಯ ಸರ್ಕಾರ ಹಮ್ಮಿಕೊಂಡಿದೆ. ಇದೀಗ ರೈತರು…
ಕೆ.ಬಿ.ರಮೇಶನಾಯಕ ಮೈಸೂರು: ರಾಜ್ಯದಲ್ಲಿ ಜುಲೈ ೨೦ಕ್ಕೆ ತೆರವಾಗಲಿರುವ ವಿಧಾನಪರಿಷತ್ನ ಐದು ನಾಮನಿರ್ದೇಶಿತ ಸ್ಥಾನಗಳಿಗೆ ಸದಸ್ಯರನ್ನು ನೇಮಕ ಮಾಡುವುದಕ್ಕೆ ದಿನಗಣನೆ ಶುರುವಾಗಿದೆ.…
ಮೈಸೂರು : ಭಾನುವಾರವಷ್ಟೇ ಎರಡು ನಗರದ ಎರಡು ಹೋಟೆಲ್ಗಳಿಗೆ ಬಾಂಬ್ ಇಟ್ಟಿರುವುದಾಗಿ ಬೆದರಿಕೆಯ ಇ-ಮೇಲ್ ಬಂದಿತ್ತು. ಇದೀಗ ಚಾಮರಾಜನಗರ ನ್ಯಾಯಾಲಯಕ್ಕೆ…