ರಾಜ್ಯ

ಜುಲೈ ೧ ರಿಂದ ದೇಶದಾದ್ಯಂತ ೩ ಹೊಸ ಕ್ರಿಮಿನಲ್ ಕಾನೂನು ಜಾರಿ

ಬೆಂಗಳೂರು : ಜುಲೈ ೧ ರಿಂದ ದೇಶಾದ್ಯಂತ ಮೂರು ಹೊಸ ಕ್ರಿಮಿನಲ್‌ ಕಾನೂನುಗಳು ಜಾರಿಯಾಗಲಿವೆ. ಭಾರತೀಯ ನ್ಯಾಯ ಸಂಹಿತಾ , ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ ಮತ್ತು ಭಾರತೀಯ ಸಾಕ್ಷಿ ಕಾಯ್ದೆಗಳು ಜಾರಿಗೆ ಬರುತ್ತಿವೆ. ಇದರ ಜೊತೆಗೆ ಹೊಸ ಕ್ರಿಮಿನಲ್‌ ಕಾನೂನುಗಳ ಪ್ರಮುಖ ಲಕ್ಷಣಗಳನ್ನ ಮಹಿಳೆಯರಿಗೆ, ಯುವಕರಿಗೆ, ವಿದ್ಯಾರ್ಥಿಗಳಿಗೆ ಜೊತೆಗೆ ಹಿರಿಯ ನಾಗರೀಕ ಮತ್ತು ಗಣ್ಯ ವ್ಯಕ್ತಿಗಳಿಗೆ ತಿಳಿಸಲು ವಿಶೇಷ ಕಾರ್ಯಕ್ರಮಗಳನ್ನ ಆಯೋಜಿಸಲಾಗಿದೆ.

ಇನ್ನು ಬ್ರಿಟಿಷರ ಕಾಲದ ಐಪಿಸಿ ಭಾರತೀಯ ನ್ಯಾಯ ಸಂಹಿತ, ಸಿಆರ್ ಪಿಸಿ ಭಾರತೀಯ ನಾಗರೀಕ ಸುರಕ್ಷಾ ಸಂಹಿತಾ, ಇಂಡಿಯನ್‌ ಎವಿಡೆನ್ಸ್‌ ಆಕ್ಟ್‌  -ಭಾರತೀಯ ಸಾಕ್ಷ್ಯ ಅಧಿನಿಯಮ ಅನ್ನು ಬದಲಿಸುತ್ತದೆ. ಈಗಿರುವ ಕಾಯಿದೆಗಳಿಗೆ ಹೋಲಿಸಿದರೆ ಈ ಮೂರು ಹೊಸ ಕಾನೂನುಗಳಲ್ಲಿ ಹಲವು ವಿನೂತ ಉದ್ದೇಶಗಳನ್ನ ಹೊಂದಿದೆ.

ಐಪಿಸಿ ಭಾರತೀಯ ನ್ಯಾಯ ಸಂಹಿತ, ಸಿಆರ್ ಪಿಸಿ ಭಾರತೀಯ ನಾಗರೀಕ ಸುರಕ್ಷಾ ಸಂಹಿತಾ, ಇಂಡಿಯನ್‌ ಎವಿಡೆನ್ಸ್‌ ಆಕ್ಟ್‌  -ಭಾರತೀಯ ಸಾಕ್ಷ್ಯ ಅಧಿನಿಯಮ ೨೦೨೩ ಬಿಎಸ್‌ ಎ ಕಾಲಮಿತಿಯೊಳಗೆ ತನಿಕೆ ಮತ್ತು ತ್ವರಿತ ನ್ಯಾಯ ಖಾತ್ರಿಪಡಿಸುವ ನಿಟ್ಟಿನಲ್ಲಿ ಪ್ರಮುಖ ಬದಲಾವಣೆ ಮಾಡಲಾಗಿದೆ.

ಇನ್ನು ಈ ಮೂರು ಕ್ರಿಮಿನಲ್‌ ಕಾನೂನುಗಳನ್ನ ಕಳೆದ ವರ್ಷವೇ ಸಂಸತ್ತು ಅಂಗೀಕಾರ ಮಾಡಿತ್ತು. ಮತ್ತು ಅದೇ ತಿಂಗಳು ರಾಷ್ಟ್ರಪತಿಗಳ ಒಪ್ಪಿಗೆಯೂ ಸಹ ಪಡೆಯಲಾಗಿತ್ತು. ಆದರೆ ಅವುಗಳು ಜಾರಿಗೆ ಬಂದಿರಲಿಲ್ಲ. ಈ ವರ್ಷ ಫೆಬ್ರವರಿ ೨೫ ರಂದು ಮೂರು ಕಾನೂನುಗಳು ಜುಲೈ ೧ ರಂದು ಜಾರಿಗೆ ಬರುತ್ತವೆ ಎಂದು ಸರ್ಕಾರವು ಅಧಿಸೂಚನೆಯನ್ನು ಹೊರಡಿಸಿತು.

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

2 mins ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

1 hour ago

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

5 hours ago

ಓದುಗರ ಪತ್ರ: ಸತ್ಪ್ರಜೆಗಳಾಗಿ ಜೀವಿಸುವುದೇ ಸ್ವಾತಂತ್ರ್ಯ ಹೋರಾಟಗಾರರಿಗೆ ನಾವು ನೀಡುವ ಗೌರವ

ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…

5 hours ago

ಓದುಗರ ಪತ್ರ: ಸೇತುವೆ ಅವ್ಯವಸ್ಥೆ; ಸಂಚಾರ ದುಸ್ತರ

ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…

5 hours ago

ಕಪ್ಪು ವರ್ಣೀಯರ ಕಣ್ಣೀರ ಕಥನ

ಗೋವಿಂದರಾಜು ಲಕ್ಷ್ಮೀಪುರ, ಇಂಗ್ಲಿಷ್ ಸಹಪ್ರಾಧ್ಯಾಪಕ, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಮೈಸೂರು ಐಪಿಎಸ್ ಅಧಿಕಾರಿ ಚೆನ್ನಬಸವಣ್ಣ ಅವರ ಅಲ್ಕೆಬುಲಾನದ ಹೃದಯದಿಂದ…

5 hours ago