ರಾಜ್ಯ

ಜನಜಂಗುಳಿ ನಿಯಂತ್ರಣಕ್ಕೆ ಹೊಸ ಮಾರ್ಗಸೂಚಿ

ಬೆಂಗಳೂರು : ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡದ ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಕಾಲ್ತುಳಿತ ದುರಂತ ಹಿನ್ನೆಲೆಯಲ್ಲಿ ಕರ್ನಾಟಕ ಪೊಲೀಸ್ ಇಲಾಖೆಯು ಸಾರ್ವಜನಿಕ ಸಮಾರಂಭಗಳಲ್ಲಿ ಜನಸಂದಣಿ ನಿಯಂತ್ರಣಕ್ಕಾಗಿ ಮಾರ್ಗಸೂಚಿ ಬಿಡುಗಡೆ ಮಾಡಿದೆ.

ಹೆಚ್ಚು ಜನ ಸೇರುವ ಕಾರ್ಯಕ್ರಮಗಳಲ್ಲಿ ಜನಜಂಗುಳಿ ನಿಯಂತ್ರಣಕ್ಕೆ ಈ ಮಾರ್ಗಸೂಚಿ ಜಾರಿಗೆ ತರಲಾಗಿದ್ದು, ಯಾವುದೇ ಬಹಳಷ್ಟು ಸಂಖ್ಯೆಯಲ್ಲಿ ಜನ ಸೇರುವ ಸಭೆ ಸಮಾರಂಭಗಳಿಗೆ ಈ ಮಾರ್ಗಸೂಚಿಗಳು ಅನ್ವಯವಾಗಲಿದೆ.
ಹಬ್ಬಗಳು, ಪ್ರತಿಭಟನೆಗಳು, ಮೆರವಣಿಗೆಗಳು ಮತ್ತು ಕ್ರೀಡಾ ಕೂಟಗಳಂತಹ ಬೃಹತ್ ಜನ ಸಮುದಾಯ ಸೇರುವ ಯಾವುದೇ ಕಾರ್ಯಕ್ರಮಗಳಲ್ಲಿ ಸಾರ್ವಜನಿಕ ಭದ್ರತೆ, ಕಾನೂನು-ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಈ ಮಾರ್ಗಸೂಚಿ ಜಾರಿಗೆ ತರಲಾಗಿದೆ.

ಮಾರ್ಗಸೂಚಿಯಲ್ಲೇನಿದೆ?: ಸಾರ್ವಜನಿಕ ಕಾರ್ಯಕ್ರಮಕ್ಕೂ ಮುನ್ನ ಸ್ಥಳದ ಸಂಪೂರ್ಣ ಪರಿಶೀಲನೆ ಮತ್ತು ಕಾರ್ಯಕ್ರಮ ಆಯೋಜಕರ ಸಹಯೋಗದೊಂದಿಗೆ ವಿವರವಾದ ಯೋಜನೆ ರಚಿಸುವುದು ಈಗ ಕಡ್ಡಾಯ. ಕಾರ್ಯಕ್ರಮ ನಡೆಯುವ ಸ್ಥಳದ ಸಾಮರ್ಥ್ಯ, ತುರ್ತು ನಿರ್ಗಮನ ಮಾರ್ಗಗಳ ಲಭ್ಯತೆ ಮತ್ತು ತಂತ್ರಜ್ಞಾನದ ಬಳಕೆಯ ಸಾಧ್ಯತೆಗಳನ್ನು ಪರಿಶೀಲಿಸಲೇಬೇಕು. ಜನಸಂದಣಿ ನಿರ್ವಹಣೆಗೆ ಪೊಲೀಸರ ಹೊಣೆಗಾರಿಕೆಗಳು, ಟ್ರಾಫಿಕ್ ನಿಯಂತ್ರಣ, ವೈದ್ಯಕೀಯ ನೆರವು ಮತ್ತು ಟಿಕೆಟ್ ವ್ಯವಸ್ಥೆಗಳನ್ನು ಮಾಡಲೇಬೇಕು ಎಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.

೧. ಸಾರ್ವಜನಿಕರ ಪ್ರವೇಶ ದ್ವಾರಗಳಲ್ಲಿ ತರಬೇತಿ ಪಡೆದ ಸಿಬ್ಬಂದಿಯನ್ನು ನಿಯೋಜಿಸಬೇಕು.
೨. ಜನಸಂದಣಿಯನ್ನು ಸುಗಮಗೊಳಿಸಲು ಕ್ಯೂ ಆರ್ ಕೋಡ್ ಅಥವಾ ಬಯೋಮೆಟ್ರಿಕ್ ತಂತ್ರಜ್ಞಾನದ ಬಳಕೆ ಮತ್ತು ವಿಭಿನ್ನ ವರ್ಗಗಳಿಗೆ ಪ್ರತ್ಯೇಕ ಪ್ರವೇಶ ದ್ವಾರಗಳನ್ನು ಒದಗಿಸಬೇಕು.
೩. ತುರ್ತು ನಿರ್ಗಮನ ಮಾರ್ಗಗಳನ್ನು ಸ್ಪಷ್ಟವಾಗಿ ಗುರುತಿಸಬೇಕು ಮತ್ತು ಯಾವುದೇ ಸಂದರ್ಭದಲ್ಲಿಯೂ ಲೌಡ್‌ಸ್ಪೀಕರ್‌ಗಳ ಮೂಲಕ ಸಾರ್ವಜನಿಕರಿಗೆ ಸೂಚನೆಗಳನ್ನು ನೀಡುವ ವ್ಯವಸ್ಥೆ ಇರಬೇಕು.
೪. ತುರ್ತು ವಾಹನಗಳಾದ ಅಂಬುಲೆನ್ಸ್‌ಗಳಿಗೆ ಪಾರ್ಕಿಂಗ್ ವ್ಯವಸ್ಥೆ ಸೇರಿದಂತೆ ವೈದ್ಯಕೀಯ ನೆರವಿನ ವ್ಯವಸ್ಥೆಗಳನ್ನು ಖಚಿತಪಡಿಸಿಕೊಳ್ಳಬೇಕು.
೫. ಪ್ರತಿಭಟನೆ ಅಥವಾ ಹವಾಮಾನ ದುರಂತಗಳಂತಹ ಅನಿರೀಕ್ಷಿತ ಪರಿಸ್ಥಿತಿಗಳಿಗೆ ತಯಾರಿ ನಡೆಸಲು ಸಿಮ್ಯುಲೇಷನ್ ಡ್ರಿಲ್‌ಗಳನ್ನು ನಡೆಸುವ ಮೂಲಕ ರಕ್ಷಣಾ ತಂಡಗಳ ಜವಾಬ್ದಾರಿಗಳನ್ನು ಮೊದಲೇ ಗುರುತಿಸಬೇಕು.

ಆಂದೋಲನ ಡೆಸ್ಕ್

Recent Posts

ರಾಮನಗರದ ರೈಲ್ವೆ ಪ್ರಯಾಣಿಕರಿಗೆ ಶುಭ ಸಮಾಚಾರ: ಏನದು ಗೊತ್ತಾ.?

ರಾಮನಗರ: ಬೆಂಗಳೂರು ಮತ್ತು ಮೈಸೂರು ನಡುವೆ ನಿತ್ಯ ಸಂಚರಿಸುವ ಒಡೆಯರ್‌ ಎಕ್ಸ್‌ಪ್ರೆಸ್‌ ರೈಲಿಗೆ ಈಗ ರಾಮನಗರ ರೈಲ್ವೆ ನಿಲ್ದಾಣದಲ್ಲಿ ನಿಲುಗಡೆ…

6 hours ago

ಟಿವಿಕೆ ಶಾಸಕಾಂಗ ಪಕ್ಷದ ನಾಯಕನಾಗಿ ನಟ ವಿಜಯ್‌ ಆಯ್ಕೆ

ಚೆನ್ನೈ: ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿರುವ ಟಿವಿಕೆ ಪಕ್ಷವು ಇದೀಗ ಸರ್ಕಾರ ರಚನೆ ಮಾಡಲು ಮುಂದಾಗಿದೆ. ಚೆನ್ನೈನ ಪಣಿಯೂರಿನಲ್ಲಿರುವ…

6 hours ago

ತಮಿಳುನಾಡು ಫಲಿತಾಂಶ ತುಂಬಾ ಆಶ್ವರ್ಯಕರವಾಗಿದೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ತಮಿಳುನಾಡಿನ ಮತದಾರರು ಬದಲಾವಣೆ ಬಯಸಿದ್ದರು. ಅದರಂತೆ ಬದಲಾವಣೆಗೆ ಮತ ಹಾಕಿದ್ದಾರೆ. ಈ ಫಲಿತಾಂಶ ತುಂಬಾ ಆಶ್ಚರ್ಯಕರವಾಗಿದೆ ಎಂದು ಸಿಎಂ…

7 hours ago

ತಮಿಳುನಾಡು ಸಿಎಂ ಎಂ ಕೆ ಸ್ಟಾಲಿನ್‌ ರಾಜೀನಾಮೆ

ಚೆನ್ನೈ: ಡಿಎಂಕೆ ಅಧ್ಯಕ್ಷ ಎಂ ಕೆ ಸ್ಟಾಲಿನ್‌ ಅವರಿಂದು ತಮಿಳುನಾಡು ಸಿಎಂ ಹುದ್ದಗೆ ರಾಜೀನಾಮೆ ನೀಡಿದ್ದಾರೆ. ರಾಜೀನಾಮೆ ಪತ್ರವನ್ನು ಲೋಕಭವನದಲ್ಲಿರುವ…

7 hours ago

ಮೈಸೂರು: ಸೂರ್ಯ ಉದಯಿಸುವ ಮುನ್ನವೇ ಯುವಕನ ಕೊಲೆ

ಮೈಸೂರು: ಸೂರ್ಯ ಉದಯಿಸುವ ಮುನ್ನವೇ ಮೈಸೂರಿನ ಉದಯಗಿರಿಯಲ್ಲಿ ಯುವಕನನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ನಡೆದಿದೆ. ಉದಯಗಿರಿ ಪೊಲೀಸ್‌ ಠಾಣೆಯಿಂದ ಕೇವಲ…

8 hours ago

ಹನೂರು: ಪಂಪ್‌ಸೆಟ್‌ ಮೋಟಾರ್‌ ಕಳ್ಳತನ ಮಾಡುತ್ತಿದ್ದ ಆರೋಪಿಗಳ ಬಂಧನ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಾಮಾಪುರ ವ್ಯಾಪ್ತಿಯಲ್ಲಿ ಜಮೀನುಗಳಲ್ಲಿ ಇರುತ್ತಿದ್ದ ನೀರೆತ್ತುವ ಪಂಪ್ ಸೆಟ್ ಮೋಟಾರ್‌ಗಳನ್ನು…

9 hours ago