ರಾಜ್ಯ

ಜನಜಂಗುಳಿ ನಿಯಂತ್ರಣಕ್ಕೆ ಹೊಸ ಮಾರ್ಗಸೂಚಿ

ಬೆಂಗಳೂರು : ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡದ ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಕಾಲ್ತುಳಿತ ದುರಂತ ಹಿನ್ನೆಲೆಯಲ್ಲಿ ಕರ್ನಾಟಕ ಪೊಲೀಸ್ ಇಲಾಖೆಯು ಸಾರ್ವಜನಿಕ ಸಮಾರಂಭಗಳಲ್ಲಿ ಜನಸಂದಣಿ ನಿಯಂತ್ರಣಕ್ಕಾಗಿ ಮಾರ್ಗಸೂಚಿ ಬಿಡುಗಡೆ ಮಾಡಿದೆ.

ಹೆಚ್ಚು ಜನ ಸೇರುವ ಕಾರ್ಯಕ್ರಮಗಳಲ್ಲಿ ಜನಜಂಗುಳಿ ನಿಯಂತ್ರಣಕ್ಕೆ ಈ ಮಾರ್ಗಸೂಚಿ ಜಾರಿಗೆ ತರಲಾಗಿದ್ದು, ಯಾವುದೇ ಬಹಳಷ್ಟು ಸಂಖ್ಯೆಯಲ್ಲಿ ಜನ ಸೇರುವ ಸಭೆ ಸಮಾರಂಭಗಳಿಗೆ ಈ ಮಾರ್ಗಸೂಚಿಗಳು ಅನ್ವಯವಾಗಲಿದೆ.
ಹಬ್ಬಗಳು, ಪ್ರತಿಭಟನೆಗಳು, ಮೆರವಣಿಗೆಗಳು ಮತ್ತು ಕ್ರೀಡಾ ಕೂಟಗಳಂತಹ ಬೃಹತ್ ಜನ ಸಮುದಾಯ ಸೇರುವ ಯಾವುದೇ ಕಾರ್ಯಕ್ರಮಗಳಲ್ಲಿ ಸಾರ್ವಜನಿಕ ಭದ್ರತೆ, ಕಾನೂನು-ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಈ ಮಾರ್ಗಸೂಚಿ ಜಾರಿಗೆ ತರಲಾಗಿದೆ.

ಮಾರ್ಗಸೂಚಿಯಲ್ಲೇನಿದೆ?: ಸಾರ್ವಜನಿಕ ಕಾರ್ಯಕ್ರಮಕ್ಕೂ ಮುನ್ನ ಸ್ಥಳದ ಸಂಪೂರ್ಣ ಪರಿಶೀಲನೆ ಮತ್ತು ಕಾರ್ಯಕ್ರಮ ಆಯೋಜಕರ ಸಹಯೋಗದೊಂದಿಗೆ ವಿವರವಾದ ಯೋಜನೆ ರಚಿಸುವುದು ಈಗ ಕಡ್ಡಾಯ. ಕಾರ್ಯಕ್ರಮ ನಡೆಯುವ ಸ್ಥಳದ ಸಾಮರ್ಥ್ಯ, ತುರ್ತು ನಿರ್ಗಮನ ಮಾರ್ಗಗಳ ಲಭ್ಯತೆ ಮತ್ತು ತಂತ್ರಜ್ಞಾನದ ಬಳಕೆಯ ಸಾಧ್ಯತೆಗಳನ್ನು ಪರಿಶೀಲಿಸಲೇಬೇಕು. ಜನಸಂದಣಿ ನಿರ್ವಹಣೆಗೆ ಪೊಲೀಸರ ಹೊಣೆಗಾರಿಕೆಗಳು, ಟ್ರಾಫಿಕ್ ನಿಯಂತ್ರಣ, ವೈದ್ಯಕೀಯ ನೆರವು ಮತ್ತು ಟಿಕೆಟ್ ವ್ಯವಸ್ಥೆಗಳನ್ನು ಮಾಡಲೇಬೇಕು ಎಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.

೧. ಸಾರ್ವಜನಿಕರ ಪ್ರವೇಶ ದ್ವಾರಗಳಲ್ಲಿ ತರಬೇತಿ ಪಡೆದ ಸಿಬ್ಬಂದಿಯನ್ನು ನಿಯೋಜಿಸಬೇಕು.
೨. ಜನಸಂದಣಿಯನ್ನು ಸುಗಮಗೊಳಿಸಲು ಕ್ಯೂ ಆರ್ ಕೋಡ್ ಅಥವಾ ಬಯೋಮೆಟ್ರಿಕ್ ತಂತ್ರಜ್ಞಾನದ ಬಳಕೆ ಮತ್ತು ವಿಭಿನ್ನ ವರ್ಗಗಳಿಗೆ ಪ್ರತ್ಯೇಕ ಪ್ರವೇಶ ದ್ವಾರಗಳನ್ನು ಒದಗಿಸಬೇಕು.
೩. ತುರ್ತು ನಿರ್ಗಮನ ಮಾರ್ಗಗಳನ್ನು ಸ್ಪಷ್ಟವಾಗಿ ಗುರುತಿಸಬೇಕು ಮತ್ತು ಯಾವುದೇ ಸಂದರ್ಭದಲ್ಲಿಯೂ ಲೌಡ್‌ಸ್ಪೀಕರ್‌ಗಳ ಮೂಲಕ ಸಾರ್ವಜನಿಕರಿಗೆ ಸೂಚನೆಗಳನ್ನು ನೀಡುವ ವ್ಯವಸ್ಥೆ ಇರಬೇಕು.
೪. ತುರ್ತು ವಾಹನಗಳಾದ ಅಂಬುಲೆನ್ಸ್‌ಗಳಿಗೆ ಪಾರ್ಕಿಂಗ್ ವ್ಯವಸ್ಥೆ ಸೇರಿದಂತೆ ವೈದ್ಯಕೀಯ ನೆರವಿನ ವ್ಯವಸ್ಥೆಗಳನ್ನು ಖಚಿತಪಡಿಸಿಕೊಳ್ಳಬೇಕು.
೫. ಪ್ರತಿಭಟನೆ ಅಥವಾ ಹವಾಮಾನ ದುರಂತಗಳಂತಹ ಅನಿರೀಕ್ಷಿತ ಪರಿಸ್ಥಿತಿಗಳಿಗೆ ತಯಾರಿ ನಡೆಸಲು ಸಿಮ್ಯುಲೇಷನ್ ಡ್ರಿಲ್‌ಗಳನ್ನು ನಡೆಸುವ ಮೂಲಕ ರಕ್ಷಣಾ ತಂಡಗಳ ಜವಾಬ್ದಾರಿಗಳನ್ನು ಮೊದಲೇ ಗುರುತಿಸಬೇಕು.

ಆಂದೋಲನ ಡೆಸ್ಕ್

Recent Posts

ಡಿಕೆಶಿ ಸಂಪುಟದಲ್ಲಿ ಡಾ.ಎಚ್‌ಸಿಎಂ ಕೈ ಬಿಟ್ಟಿದ್ದಕ್ಕೆ ದಸಂಸ ತೀವ್ರ ಅಸಮಾಧಾನ

ಮೈಸೂರು:  ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ   ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…

4 hours ago

ನನ್ನ ಗೆಲುವು ಜೆಡಿಎಸ್ ಭಿಕ್ಷೆ ಅಲ್ಲ, ನಾಗಮಂಗಲ ಜನರ ಭಿಕ್ಷೆ : ಸಚಿವ ಚಲುವರಾಯಸ್ವಾಮಿ

ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…

5 hours ago

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

16 hours ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

16 hours ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

16 hours ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

16 hours ago