ರಾಜ್ಯ

ಬಿಡದಿಯಲ್ಲಿ ನೂತನ ಐಟಿ ಸಿಟಿ ಸ್ಥಾಪನೆ: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಬೆಂಗಳೂರು ದಕ್ಷಿಣದ ಬಿಡದಿಯಲ್ಲಿ ನೂತನ ಐಟಿ ಸಿಟಿ ನಿರ್ಮಾಣ ಮಾಡಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಘೋಷಣೆ ಮಾಡಿದ್ದಾರೆ.

ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಡದಿಯಲ್ಲಿ ಐಟಿ ನಗರ ನಿರ್ಮಿಸುವ ಆಲೋಚನೆಯಿದ್ದು, ಬೆಂಗಳೂರಿನಲ್ಲಿ ಬಿಲಿಯನ್‌ ಡಾಲರ್‌ಗಟ್ಟಲೇ ಬಂಡವಾಳ ಹೂಡಿಕೆಗೆ ನಾನಾ ದೇಶದ ನಾಯಕರುಗಳು ಮುಂದೆ ಬಂದಿದ್ದಾರೆ ಎಂದು ಹೇಳಿದರು.

ಇದನ್ನು ಓದಿ: ಡಿಜಿಟಲ್‌ ಅರೆಸ್ಟ್‌ ವಂಚನೆ ಪ್ರಕರಣ: ಗೃಹ ಸಚಿವ ಪರಮೇಶ್ವರ್‌ ಹೇಳಿದ್ದಿಷ್ಟು.!

ಇನ್ನು ಬೆಂಗಳೂರಿನಲ್ಲಿ ಟೆಕ್‌ ಸಮ್ಮಿಟ್‌ ನಡೆಯುತ್ತಿದ್ದು, ಜಗತ್ತಿನ ನಾನಾ ದೇಶದ ನಾಯಕರುಗಳು ಪ್ರತಿದಿನ ನನ್ನನ್ನು ಭೇಟಿ ಮಾಡುತ್ತಿರುತ್ತಾರೆ. ಅನೇಕರು ಬೆಂಗಳೂರಿನಲ್ಲಿ ಉದ್ದಿಮೆ ಆರಂಭಕ್ಕೆ ಉತ್ಸುಕರಾಗಿದ್ದಾರೆ. ನಾವು ಎಷ್ಟು ಸಾಧ್ಯವೋ ಅಷ್ಟು ಅವರೆಲ್ಲರ ಬೆಂಬಲಕ್ಕೆ ನಿಂತಿದ್ದೇವೆ. 60 ದೇಶಗಳ ಪ್ರತಿನಿಧಿಗಳು, ದೇಶದ ಎಲ್ಲಾ ರಾಜ್ಯಗಳ ಪ್ರಮುಖರು ಸುಮಾರು 50 ಸಾವಿರ ಮಂದಿ ಇದರಲ್ಲಿ ಭಾಗವಹಿಸಲಿದ್ದಾರೆ. 1500 ದೊಡ್ಡ ಕಂಪನಿಗಳು ಭಾಗವಹಿಸುತ್ತಿವೆ. ಇವರುಗಳು ಉದ್ಯೋಗ ನೀಡಬೇಕು. ಸಂಪಾದನೆ ಮಾಡಬೇಕು. ಅದಕ್ಕೆ ನಮ್ಮ ಪ್ರೋತ್ಸಾಹ ಎಂದು ಹೇಳಿದರು.

ಪ್ರೋತ್ಸಾಹ ನೀಡಿದರೆ ಇಲ್ಲಿನ ಪ್ರತಿಭೆಗಳು, ಹೊಸ ಆವಿಷ್ಕಾರ, ತಂತ್ರಜ್ಞಾನ, ಸ್ಟಾರ್ಟ್‌ ಅಪ್‌ಗಳು ಕರ್ನಾಟಕವನ್ನು ಹೊಸ ದಿಕ್ಕಿನೆಡೆಗೆ ಕೊಂಡೊಯ್ಯಲಿವೆ. ಹೊಸ ಆಲೋಚನಗೆಳು ಬಂದರೆ ಸ್ಟಾರ್ಟ್‌ ಅಪ್‌ ಮೂಲಕ ಬೆಳೆಯಲು ಸರ್ಕಾರ ಅವಕಾಶ ಕಲ್ಪಿಸಿ ನಿಮ್ಮ ಜೊತೆಗಿದೆ ಎಂದು ಹೇಳುತ್ತಿರುತ್ತೇನೆ ಎಂದು ಅಭಿಪ್ರಾಯ ಪಟ್ಟರು.

ಆಂದೋಲನ ಡೆಸ್ಕ್

Recent Posts

ನೂತನ ಸಚಿವರಿಗೆ ಖಾತೆ ಹಂಚಿಕೆ : ಯಾರಿಗೆ ಯಾವ ಹೊಣೆ? ಇಲ್ಲಿದೆ ಮಾಹಿತಿ

ಬೆಂಗಳೂರು : ಹಲವು ಸುತ್ತಿನ ಸಭೆಯ ಬಳಿಕ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಖಾತೆ…

6 hours ago

ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ ಸಾಗಾಟ : ಇಬ್ಬರ ಬಂಧನ

ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್‌ಪೋಸ್ಟ್‌ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…

8 hours ago

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

17 hours ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

17 hours ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

17 hours ago

ಕಣ್ಮನ ಸೆಳೆಯುತ್ತಿದೆ ಮಲ್ಲಳ್ಳಿ ಜಲಪಾತ!

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…

17 hours ago