ಬೆಂಗಳೂರು: ಬೆಂಗಳೂರು ದಕ್ಷಿಣದ ಬಿಡದಿಯಲ್ಲಿ ನೂತನ ಐಟಿ ಸಿಟಿ ನಿರ್ಮಾಣ ಮಾಡಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಘೋಷಣೆ ಮಾಡಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಡದಿಯಲ್ಲಿ ಐಟಿ ನಗರ ನಿರ್ಮಿಸುವ ಆಲೋಚನೆಯಿದ್ದು, ಬೆಂಗಳೂರಿನಲ್ಲಿ ಬಿಲಿಯನ್ ಡಾಲರ್ಗಟ್ಟಲೇ ಬಂಡವಾಳ ಹೂಡಿಕೆಗೆ ನಾನಾ ದೇಶದ ನಾಯಕರುಗಳು ಮುಂದೆ ಬಂದಿದ್ದಾರೆ ಎಂದು ಹೇಳಿದರು.
ಇದನ್ನು ಓದಿ: ಡಿಜಿಟಲ್ ಅರೆಸ್ಟ್ ವಂಚನೆ ಪ್ರಕರಣ: ಗೃಹ ಸಚಿವ ಪರಮೇಶ್ವರ್ ಹೇಳಿದ್ದಿಷ್ಟು.!
ಇನ್ನು ಬೆಂಗಳೂರಿನಲ್ಲಿ ಟೆಕ್ ಸಮ್ಮಿಟ್ ನಡೆಯುತ್ತಿದ್ದು, ಜಗತ್ತಿನ ನಾನಾ ದೇಶದ ನಾಯಕರುಗಳು ಪ್ರತಿದಿನ ನನ್ನನ್ನು ಭೇಟಿ ಮಾಡುತ್ತಿರುತ್ತಾರೆ. ಅನೇಕರು ಬೆಂಗಳೂರಿನಲ್ಲಿ ಉದ್ದಿಮೆ ಆರಂಭಕ್ಕೆ ಉತ್ಸುಕರಾಗಿದ್ದಾರೆ. ನಾವು ಎಷ್ಟು ಸಾಧ್ಯವೋ ಅಷ್ಟು ಅವರೆಲ್ಲರ ಬೆಂಬಲಕ್ಕೆ ನಿಂತಿದ್ದೇವೆ. 60 ದೇಶಗಳ ಪ್ರತಿನಿಧಿಗಳು, ದೇಶದ ಎಲ್ಲಾ ರಾಜ್ಯಗಳ ಪ್ರಮುಖರು ಸುಮಾರು 50 ಸಾವಿರ ಮಂದಿ ಇದರಲ್ಲಿ ಭಾಗವಹಿಸಲಿದ್ದಾರೆ. 1500 ದೊಡ್ಡ ಕಂಪನಿಗಳು ಭಾಗವಹಿಸುತ್ತಿವೆ. ಇವರುಗಳು ಉದ್ಯೋಗ ನೀಡಬೇಕು. ಸಂಪಾದನೆ ಮಾಡಬೇಕು. ಅದಕ್ಕೆ ನಮ್ಮ ಪ್ರೋತ್ಸಾಹ ಎಂದು ಹೇಳಿದರು.
ಪ್ರೋತ್ಸಾಹ ನೀಡಿದರೆ ಇಲ್ಲಿನ ಪ್ರತಿಭೆಗಳು, ಹೊಸ ಆವಿಷ್ಕಾರ, ತಂತ್ರಜ್ಞಾನ, ಸ್ಟಾರ್ಟ್ ಅಪ್ಗಳು ಕರ್ನಾಟಕವನ್ನು ಹೊಸ ದಿಕ್ಕಿನೆಡೆಗೆ ಕೊಂಡೊಯ್ಯಲಿವೆ. ಹೊಸ ಆಲೋಚನಗೆಳು ಬಂದರೆ ಸ್ಟಾರ್ಟ್ ಅಪ್ ಮೂಲಕ ಬೆಳೆಯಲು ಸರ್ಕಾರ ಅವಕಾಶ ಕಲ್ಪಿಸಿ ನಿಮ್ಮ ಜೊತೆಗಿದೆ ಎಂದು ಹೇಳುತ್ತಿರುತ್ತೇನೆ ಎಂದು ಅಭಿಪ್ರಾಯ ಪಟ್ಟರು.
ಪಿರಿಯಾಪಟ್ಟಣ : ಪಿರಿಯಾಪಟ್ಟಣದಲ್ಲಿ ಸರ್ವರ್ ಸಮಸ್ಯೆಯಿಂದಾಗಿ ಜನರು ಪಡಿತರ ಪಡೆಯಲು ಪರದಾಟ ನಡೆಸುವ ಪರಿಸ್ಥಿತಿ ಎದುರಾಗಿದೆ. ಜನಸಾಮಾನ್ಯರು ಎಂದಿನಂತೆ ಪ್ರತಿ…
ಮೈಸೂರು : ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಸಿದ್ದರಾಮಯ್ಯನವರ ಮುಂದಿನ ಜೀವನ ಚೆನ್ನಾಗಿರಲಿ. ನೂತನ ಸಿಎಂ ಆಗಲಿರುವ ಡಿ.ಕೆ.ಶಿವಕುಮಾರ್ ಉತ್ತಮ…
ಹೊಸದಿಲ್ಲಿ : ಕಳೆದ ಎರಡ್ಮೂರು ದಿನಗಳಿಂದ ಮೌನಕ್ಕೆ ಶರಣಾಗಿದ್ದ ಡಿಕೆ ಶಿವಕುಮಾರ್ ಕೊನೆಗೂ ತುಟಿ ಬಿಚ್ಚಿ ಮಾತನಾಡಿದ್ದಾರೆ. ಸಿದ್ದರಾಮಯ್ಯ ಮುಖ್ಯಮಂತ್ರಿ…
ಮೈಸೂರು: ನಾನು ಸಹ ಹೊಸ ಸಚಿವ ಸಂಪುಟದಲ್ಲಿ ಸೇರುವ ಬಯಕೆ ಇದೆ ಎಂದು ಶಾಸಕ ತನ್ವೀರ್ ಸೇಠ್ ಹೇಳಿದ್ದಾರೆ. ಈ…
ಬೆಂಗಳೂರು: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ನೀಡಿದ್ದ ರಾಜೀನಾಮೆಯನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಅಂಗೀಕರಿಸಿದ್ದಾರೆ. ರಾಜೀನಾಮೆ ಅಂಗೀಕಾರವಾದ ಬೆನ್ನಲ್ಲೇ…
ಬೆಂಗಳೂರು: ದೇವರು ವರನೂ ಕೊಡಲ್ಲ. ಶಾಪನೂ ಕೊಡಲ್ಲ. ಅವಕಾಶ ಮಾತ್ರ ಕೊಡುತ್ತಾನೆ. ಆ ಕೊಟ್ಟಿರುವ ಅವಕಾಶದಲ್ಲಿ ನಾವು ಏನು ಸಾಧನೆ…