santhosh lad
ಬೆಂಗಳೂರು/ವಿಜಯಪುರ : ಕಾರ್ಮಿಕ ಇಲಾಖೆಯ ಹೊಸ ಯೋಜನೆಗಳನ್ನು ಎಲ್ಲಾ ರೀತಿಯ ಕಾರ್ಮಿಕರಿಗೆ ಮುಟ್ಟಿಸುವ ಉದ್ದೇಶದಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕಾರ್ಯಕ್ರಮಗಳನ್ನು ಮಾಡಲಾಗುತ್ತಿದೆ ಎಂದು ರಾಜ್ಯ ಕಾರ್ಮಿಕ ಇಲಾಖೆ ಸಚಿವ ಸಂತೋಷ ಲಾಡ್ ಸ್ಪಷ್ಟಪಡಿಸಿದರು.
ಅವರಿಂದು ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಹಾಗೂ ಕಾರ್ಮಿಕ ಇಲಾಖೆ, ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರಾತಾ ಮಂಡಳಿ, ಸಾರಿಗೆ ಇಲಾಖೆ ಇವರ ಸಂಯುಕ್ತಆಶ್ರಯದಲ್ಲಿ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಇಲಾಖೆಯಡಿ ಸರ್ಕಾರ ಸಾಂಸ್ಕೃತಿಕ ಕಾರ್ಮಿಕರ ಕಾರ್ಯಕರ್ತರ ಕಾಯಿದೆಗೆ ಉದ್ದೇಶಿಸಿದ್ದು, ಅದಕ್ಕಾಗಿ ನಿಯಮಗಳನ್ನು ಸಿದ್ಧಪಡಿಸುವ ಕೆಲಸ ಇಲಾಖೆಯಡಿ ಮಾಡಲಾಗುತ್ತಿದೆ.ಆಶಾದೀಪ ಯೋಜನೆಯಡಿ
ಪರಿಶಿಷ್ಟ ಜಾತಿ ಮತ್ತು ಪಂಗಡದ ನಿರುದ್ಯೋಗಿ ಯುವಕರಿಗೆ ಸಂಸ್ಥೆಗಳು ಕೆಲಸ ನೀಡಿದಲ್ಲಿ ಅಥವ ಅಪ್ರೆಂಟೈಸರ್ ನೀಡದಲ್ಲಿ ತಿಂಗಳಿಗೆ ಒಬ್ಬ ಅಭ್ಯರ್ಥಿಗೆ ಸುಮಾರು 7ಸಾವಿರ ರೂಪಾಯಿವರೆಗೆ ಮ್ಯಾನೇಜ್ ಮೆಂಟಿಗೆ ರಿಅಂಬ್ರೈಸ್ ಮಾಡಲಾಗುವುದು ಎಂದು ಸಚಿವ ಲಾಡ್ ಮಾಹಿತಿ ನೀಡಿದರು.
ಈ ಕಾಂಗ್ರೆಸ್ ಸರ್ಕಾರ ಬಂದಮೇಲೆ ಕಾರ್ಮಿಕರಿಗೆ ಎಲ್ಲಾ ರೀತಿಯಲ್ಲಿ ಅನುಕೂಲ ಕಲ್ಪಿಸಲೆಂದು ತಾವು ಕಾರ್ಮಿಕ ಸಚಿವರಾದ ಬಳಿಕ ಹೊಸಹೊಸ ಯೋಜನೆಗಳನ್ನು ತರಲಾಗಿದೆ. ರಾಜ್ಯದಲ್ಲಿ ಪ್ರಸಕ್ತ 91 ವರ್ಗದ ಕಾರ್ಮಿಕರಿಗೆ ಸಹಾಯ ಮಾಡಲೆಂದು ಕಾರ್ಮಿಕರನ್ನು ಗುರುತಿಸಿ ಕಾರ್ಮಿಕರ ದತ್ತಾಂಶಗಳನ್ನು ಸಂಗ್ರಹಿಸುವ ಕೆಲಸ ಮಾಡಲಾಗುತ್ತಿದೆ.ಪ್ರಾರಂಭಿಕವಾಗಿ ಹೊಸಹೋಸ ಯೋಜನೆಗಳನ್ನು ಕಾರ್ಮಿಕರಿಗೆ ತರಲಾಗಿದ್ದು, ಮುಂದಿನ ದಿನಗಳಲ್ಲಿ ಇದು ಹೆಚ್ಚಾಗುವ ಸಾಧ್ಯತೆಯೂ ಇದೆ.
ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರಿಗೆ ಹೊಸ ಕಾರ್ಮಿಕ ಯೋಜನೆಗಳ ಕಾರ್ಮಿಕರಿಗೆ ಅಪಘಾತ ವಿಮೆ, ಆಸ್ಪತ್ರೆ ವೆಚ್ಚಕ್ಕೆ ಸಹಾಯ, ಅಪಘಾತ ಹಾಗೂ ಸಹಜ ಮರಣಕ್ಕೆ ಸಹಾಯ, ಮೃತ ಕಾರ್ಮಿಕ ಕುಟುಂಬಕ್ಕೆ ಸಹಾಯ ಮಾಡಲಾಗುತ್ತಿದೆ.ಸಾರಿಗೆ ಮತ್ತು ಅದಕ್ಕೆ ಸಂಬಂಧಿಸಿದ ಕಾಮಿಕರಿಗೆ ಯೋಜನೆ ಮತ್ತು ಮಂಡಳಿ ಜಾರಿಗೆ ತರಲಾಗಿದೆ.ಸುಮಾರು 25ಲಕ್ಷ ಮಂದಿ ಇದಕ್ಕೆ ಸಂಬತಂಧಿಸಿದ ಕಾರ್ಮಿಕರಿದ್ದಾರೆಂದು ಗುರುತಿಸಲಾಗಿದೆ. ಗಿಗ್ ವರ್ಕರ್ಸ್ಗಾಗಿ ಪ್ರತ್ಯೇಕ ಕಾಯಿದೆ ಜಾರಿಗೆ ತರಲಾಗಿದೆ ಎಂದರು .
ಆಡಳಿತರೂಢ ಕಾಂಗ್ರೆಸ್ ಸರ್ಕಾರ ನೀಡಿದ ಪಂಚಯೋಜನೆಗಳನ್ನು ಟೀಕಿಸುತ್ತಿರುವ ಬಿಜೆಪಿ ಕಾರ್ಮಿಕ ವರ್ಗಕ್ಕೇನೂ ಮಾಡದೆ ಇರೋದು ಬೇಸರದ ಸಂಗತಿ. ಕಾರ್ಮಿಕರ ಪರವಾಗಿ ಕಾಂಗ್ರೆಸ್ ಸರ್ಕಾರ ಸದಾ ಐದ್ಧಾವಿದೆ ಎಂದು ಸಂತೋಷ್ ಲಾಡ್ ಸ್ಪಷ್ಟಪಡಿಸಿದರು.
ಬೆಂಗಳೂರು : ಮುಂಗಾರು ಮಳೆ ಕೊರತೆ ಮತ್ತು ಕಾವೇರಿ ಜಲಾನಯನ ಪ್ರದೇಶದಲ್ಲಿ ಜಲಾಶಯಗಳಿಗೆ ನಿರೀಕ್ಷಿತ ಪ್ರಮಾಣದಲ್ಲಿ ನೀರು ಹರಿದುಬಾರದ ಹಿನ್ನೆಲೆಯಲ್ಲಿ,…
ಮೈಸೂರು: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಮುಖ್ಯಮಂತ್ರಿಯವರು ಯುವ ಶಕ್ತಿ ರಾಷ್ಟ್ರ ಶಕ್ತಿ ಎಂಬ ಶೀರ್ಷಿಕೆಯಡಿ ಭಾರತ್…
ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (MDA) ನಿಯಮಗಳನ್ನು ಉಲ್ಲಂಘಿಸಿ ಮಾಡಲಾಗಿರುವ 50:50 ಬದಲಿ ನಿವೇಶನಗಳ ಹಂಚಿಕೆಗೆ ಸಂಬಂಧಿಸಿದಂತೆ ಏಕಸದಸ್ಯ…
ಬೆಂಗಳೂರು : ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ…
ಬೆಂಗಳೂರು : ಆರು ಬಾರಿ ಚಿನ್ನದಂಬಾರಿ ಹೊತ್ತ 60 ವರ್ಷದ ಕ್ಯಾಪ್ಟನ್ ಅರ್ಜುನ ಆನೆಗೆ ಈ ಬಾರಿ ದಸರಾ ಜಂಬೂಸವಾರಿಯಲ್ಲಿ…
ಬೆಂಗಳೂರು: ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ ಡಿ…