ರಾಮನಗರ: ಚನ್ನಪಟ್ಟಣದ ಅಭಿವೃದ್ಧಿಗಾಗಿ ವಿವಿಧ ಇಲಾಖೆಯಡಿ ಸುಮಾರು 300 ಕೋಟಿ ರೂ.ಹಣವನ್ನು ಮಂಜೂರು ಮಾಡಿಸಿದ್ದೇವೆ. ಇಂದು ಮಾಕಳಿಯಲ್ಲಿ ಅಭಿವೃದ್ಧಿ ಕಾಮಗಾರಿಗಾಗಿ 2.16 ಕೋಟಿ ರೂ. ಅನುದಾನವನ್ನು ಬಿಡುಗಡೆಗೊಳಿಸಲಾಗಿದೆ. ಈ ಮೂಲಕ ಚನ್ನಪಟ್ಟಣ ಕ್ಷೇತ್ರಕ್ಕೆ ಹೊಸ ರೂಪ ನೀಡುತ್ತೇನೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಚನ್ನಪಟ್ಟಣದ ಮಾಕಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಇಂದು ಪಿ.ಆರ್.ಇ ಮತ್ತು ಬೃಹತ್ ಹಾಗೂ ಮಧ್ಯಮ ನೀರಾವರಿ ಇಲಾಖೆಯ ಅನುದಾನದ ಅಡಿಯಲ್ಲಿ ಸಿ.ಸಿ ರಸ್ತೆ ಹಾಗೂ ಚರಂಡಿ ಅಭಿವೃದ್ಧಿ ಕಾಮಗಾರಿಗೆ ಶಂಕು ಸ್ಥಾಪನೆಯನ್ನು ನೆರವೇರಿಸಿದ ಸಂದರ್ಭದಲ್ಲಿ ಮಾತನಾಡಿದರು.
ಸರ್ಕಾರದ ವತಿಯಿಂದ 78 ಮನೆಗಳನ್ನ ಮಂಜೂರು ಮಾಡಿದ್ದೇವೆ. ಈ ಕೆಲಸವನ್ನು ಮಾಡಿಸುವ ಜವಾಬ್ದಾರಿಯನ್ನು ಮಾಕಳಿ ಗ್ರಾಮ ಪಂಚಾಯಿತಿಗೆ ವಹಿಸಿದ್ದೇವೆ. ಅಲ್ಲದೇ ಮಾಕಳಿ ಗ್ರಾಮದಲ್ಲಿ ಸಿಎಸ್ಆರ್ ಅನುದಾನದಡಿ ಗುಣಮಟ್ಟದ ಶಿಕ್ಷಣ ನೀಡುವ ಶಾಲೆಯನ್ನು ನಿರ್ಮಿಸಲು ಜಾಗವನ್ನು ಸಹ ಗುರುತಿಸಲಾಗಿದೆ. ನಮ್ಮ ಸರ್ಕಾರ ನಿಮ್ಮ ಸೇವೆಗೆ ಸದಾ ಸಿದ್ಧವಾಗಿದ್ದು, ಚನ್ನಪಟ್ಟಣ ತಾಲೂಕಿಗೆ ಹೊಸ ರೂಪ ನೀಡಲು ನಾವು ಬದ್ಧರಿದ್ದೇವೆ, ನೀವೆಲ್ಲಾ ಸಹಕಾರ ಕೊಡಬೇಕು ಎಂದು ಹೇಳಿದರು.
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…