ರಾಮನಗರ: ಚನ್ನಪಟ್ಟಣದ ಅಭಿವೃದ್ಧಿಗಾಗಿ ವಿವಿಧ ಇಲಾಖೆಯಡಿ ಸುಮಾರು 300 ಕೋಟಿ ರೂ.ಹಣವನ್ನು ಮಂಜೂರು ಮಾಡಿಸಿದ್ದೇವೆ. ಇಂದು ಮಾಕಳಿಯಲ್ಲಿ ಅಭಿವೃದ್ಧಿ ಕಾಮಗಾರಿಗಾಗಿ 2.16 ಕೋಟಿ ರೂ. ಅನುದಾನವನ್ನು ಬಿಡುಗಡೆಗೊಳಿಸಲಾಗಿದೆ. ಈ ಮೂಲಕ ಚನ್ನಪಟ್ಟಣ ಕ್ಷೇತ್ರಕ್ಕೆ ಹೊಸ ರೂಪ ನೀಡುತ್ತೇನೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಚನ್ನಪಟ್ಟಣದ ಮಾಕಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಇಂದು ಪಿ.ಆರ್.ಇ ಮತ್ತು ಬೃಹತ್ ಹಾಗೂ ಮಧ್ಯಮ ನೀರಾವರಿ ಇಲಾಖೆಯ ಅನುದಾನದ ಅಡಿಯಲ್ಲಿ ಸಿ.ಸಿ ರಸ್ತೆ ಹಾಗೂ ಚರಂಡಿ ಅಭಿವೃದ್ಧಿ ಕಾಮಗಾರಿಗೆ ಶಂಕು ಸ್ಥಾಪನೆಯನ್ನು ನೆರವೇರಿಸಿದ ಸಂದರ್ಭದಲ್ಲಿ ಮಾತನಾಡಿದರು.
ಸರ್ಕಾರದ ವತಿಯಿಂದ 78 ಮನೆಗಳನ್ನ ಮಂಜೂರು ಮಾಡಿದ್ದೇವೆ. ಈ ಕೆಲಸವನ್ನು ಮಾಡಿಸುವ ಜವಾಬ್ದಾರಿಯನ್ನು ಮಾಕಳಿ ಗ್ರಾಮ ಪಂಚಾಯಿತಿಗೆ ವಹಿಸಿದ್ದೇವೆ. ಅಲ್ಲದೇ ಮಾಕಳಿ ಗ್ರಾಮದಲ್ಲಿ ಸಿಎಸ್ಆರ್ ಅನುದಾನದಡಿ ಗುಣಮಟ್ಟದ ಶಿಕ್ಷಣ ನೀಡುವ ಶಾಲೆಯನ್ನು ನಿರ್ಮಿಸಲು ಜಾಗವನ್ನು ಸಹ ಗುರುತಿಸಲಾಗಿದೆ. ನಮ್ಮ ಸರ್ಕಾರ ನಿಮ್ಮ ಸೇವೆಗೆ ಸದಾ ಸಿದ್ಧವಾಗಿದ್ದು, ಚನ್ನಪಟ್ಟಣ ತಾಲೂಕಿಗೆ ಹೊಸ ರೂಪ ನೀಡಲು ನಾವು ಬದ್ಧರಿದ್ದೇವೆ, ನೀವೆಲ್ಲಾ ಸಹಕಾರ ಕೊಡಬೇಕು ಎಂದು ಹೇಳಿದರು.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…