ಬೆಂಗಳೂರು: ರಾಜ್ಯ ಚಲನಚಿತ್ರ ಅಕಾಡೆಮಿಯ ಸಾಮಾನ್ಯ ಸಭೆಗೆ ನೂತನ ಸದಸ್ಯರನ್ನು ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಸಾಮಾನ್ಯ ಸಮಿತಿಗೆ ಪತ್ರಿಕೋದ್ಯಮ ಸೇರಿದಂತೆ ಸಿನಿಮಾ ಕ್ಷೇತ್ರದ 7 ಮಂದಿಯನ್ನು ಸದಸ್ಯರನ್ನಾಗಿ ನೇಮಿಸಲಾಗಿದೆ.
ಪತ್ರಕರ್ತರಾದ ಕೊಪ್ಪಳದ ಸಾವಿತ್ರಿ ಮಜುಂದಾರ್, ಬೆಂಗಳೂರಿನ ಚಿದಾನಂದ ಪಟೇಲ್, ಶಿವಮೊಗ್ಗದ ದೇಶಾದ್ರಿ ಹೊಸ್ಮನೆ, ಸಿನಿಮಾ ಕ್ಷೇತ್ರದ ಎಸ್.ನಿಖಿತಾಸ್ವಾಮಿ, ಡಿ.ಜಿ.ವೆಂಕಟೇಶ್, ಎಸ್.ವಿಷ್ಣುಕುಮಾರ್, ಐವಾನ್ ಡಿಸಿಲ್ವ ಅವರನ್ನು ನೇಮಿಸಲಾಗಿದೆ.
ಮುಂದಿನ ಆದೇಶದವರೆಗೂ ನೂತನ ಸದಸ್ಯರು ಚಲನಚಿತ್ರ ಆಕಾಡೆಮಿಯ ಸದಸ್ಯರಾಗಿ ಕಾರ್ಯ ನಿರ್ವಹಿಸಲಿದ್ದಾರೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ತನ್ನ ಆದೇಶದಲ್ಲಿ ವಿವರಿಸಿದೆ.
ಈ ಹಿಂದೆ ಅಕಾಡೆಮಿಗೆ ಅಧ್ಯಕ್ಷರನ್ನಾಗಿ ಸಾಧು ಕೋಕಿಲ ಅವರನ್ನು ಸರ್ಕಾರ ನೇಮಿಸಿತ್ತು.
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ಗಾಳಿ ಮಳೆಗೆ ಜಗಲಿ ಕಟ್ಟೆಯ ಬುಗರಿ ಮರ ಬಿದ್ದು ಮನೆ ಜಖಂಗೊಂಡಿರುವ…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮದ್ದೂರು ವಲಯದ ಮಾರಿಗುಡಿ ಬೀಟ್…
ನವದೆಹಲಿ: ದೇಶದಲ್ಲಿ ಕಚ್ಚಾ ತೈಲ ಸಾಕಷ್ಟು ಲಭ್ಯವಿದೆ. ಭಾರತವು ಕಚ್ಚಾ ತೈಲಕ್ಕಾಗಿ ಸಾಕಷ್ಟು ಸಂಗ್ರಹಣಾ ಸೌಲಭ್ಯಗಳು ಮತ್ತು ವಿಶ್ವಾಸಾರ್ಹ ಪೂರೈಕೆ…
ಮೈಸೂರು: ರಸ್ತೆ ಅಪಘಾತದಿಂದ ಹಲವರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಆದ್ದರಿಂದ ರಸ್ತೆ ಅಪಘಾತಗಳನ್ನು ತಡೆಗಟ್ಟಲು ಕ್ರಮ ಕೈಗೊಳ್ಳಿ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ…
ಬೆಂಗಳೂರು: ಮೈಸೂರು ನಗರ ಸೇರಿದಂತೆ ರಾಜ್ಯದಲ್ಲಿರುವ ಪಾರಂಪರಿಕ ಕಟ್ಟಡಗಳ ಸಂರಕ್ಷಣೆಗೆ ಹೆಚ್ಚಿನ ಅನುದಾನ ಒದಗಿಸಬೇಕೆಂದು ಎಂಎಲ್ಸಿ ಕೆ.ಶಿವಕುಮಾರ್ ಒತ್ತಾಯಿಸಿದ್ದಾರೆ. ಈ…
ಬೆಂಗಳೂರು: ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಮಾಡಿ ಹೊರಡಿಸಿದ್ದ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ. ತಿಮರೋಡಿ ಅವರನ್ನು ದಕ್ಷಿಣ…