ತುಮಕೂರು: ತುಮಕೂರು ರೈಲು ನಿಲ್ದಾಣದಿಂದ ಮುಂದಿನ ಹದಿನೈದು ದಿನಗಳಲ್ಲಿ ಹೊಸದಾಗಿ ಮೆಮು ರೈಲು ಸಂಚಾರ ಆರಂಭವಾಗಲಿದೆ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ತಿಳಿಸಿದ್ದಾರೆ.
ಈ ಮೂಲಕ ರೈಲ್ವೆ ಪ್ರಯಾಣಿಕರಿಗೆ ಕೇಂದ್ರ ಸಚಿವ ವಿ.ಸೋಮಣ್ಣ ಸಿಹಿ ಸುದ್ದಿ ನೀಡಿದ್ದು, ಮೆಮು ರೈಲು ಸಂಚಾರ ಆರಂಭದ ಬಗ್ಗೆ ವಿವರ ನೀಡಿದ್ದಾರೆ.
ಈ ಬಗ್ಗೆ ಮಾತನಾಡಿದ ವಿ.ಸೋಮಣ್ಣ ಅವರು, ರಾಜ್ಯದಲ್ಲಿ ಹೊಸದಾಗಿ ಮೂರು ಮೆಮು ರೈಲು ಆರಂಭವಾಗಲಿದ್ದು, ಇದರಲ್ಲಿ ಒಂದು ತುಮಕೂರು ನಿಲ್ದಾಣದಿಂದ ಶುರುವಾಗಲಿದೆ. ತುಮಕೂರಿನಿಂದ ಬೆಳಿಗ್ಗೆ 9 ಗಂಟೆಗೆ ಹೊರಟು 10ಕ್ಕೆ ಬೆಂಗಳೂರಿನ ಯಶವಂತಪುರ ನಿಲ್ದಾಣ ತಲುಪಲಿದೆ. ಬಳಿಕ ಸಂಜೆ 6 ಗಂಟೆಗೆ ಯಶವಂತಪುರದಿಂದ ಹೊರಟು ಸಂಜೆ 7 ಗಂಟೆಗೆ ತುಮಕೂರಿಗೆ ಬರಲಿದೆ. ಇದರಲ್ಲಿ 1500 ಜನ ಪ್ರಯಾಣಿಸಬಹುದು ಎಂದು ಮಾಹಿತಿ ನೀಡಿದರು.
ಮುಂದಿನ 30 ವರ್ಷಗಳ ಬೆಳವಣಿಗೆ ದೃಷ್ಟಿಯಲ್ಲಿ ಇಟ್ಟುಕೊಂಡು ಈ ಯೋಜನೆ ರೂಪಿಸಲಾಗಿದೆ. ಇದರಿಂದ ರೈಲುಗಳ ಓಡಾಟ ಸುಲಭವಾಗುತ್ತದೆ ಎಂದು ವಿವರ ನೀಡಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಅಮೃತ್ ಭಾರತ್ ಯೋಜನೆಯಡಿ ರಾಜ್ಯದ 61 ರೈಲ್ವೆ ನಿಲ್ದಾಣಗಳನ್ನು ಮೇಲ್ದರ್ಜೆಗೆ ಏರಿಸಲಾಗುತ್ತಿದೆ. ಎಲ್ಲಾ ನಿಲ್ದಾಣಗಳಿಗೂ ಹಣ ಬಿಡುಗಡೆ ಮಾಡಿ ಮತ್ತಷ್ಟು ಅಭಿವೃದ್ಧಿ ಮಾಡಲಾಗುತ್ತದೆ. ಪ್ರಯಾಣಿಕರಿಗೆ ಎಲ್ಲಾ ರೀತಿಯ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ತಿಳಿಸಿದರು.
ದೇಶದ ಬಹುತೇಕ ರೈಲು ನಿಲ್ದಾಣದ ಫ್ಲಾಟ್ ಫಾರ್ಮ್ಗಳಲ್ಲಿ ಸಾರ್ವಜನಿಕರು ಕುಡಿಯುವ ವಾಟರ್ ಕೂಲರ್ಗಳಲ್ಲಿ, ಇ-ಕೊಲಿ ಬ್ಯಾಕ್ಟೀರಿಯಾ ಪತ್ತೆಯಾಗಿದೆ ಎಂದು ಕಂಟ್ರೋಲರ್…
ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಉನ್ನತ ಹುದ್ದೆಗಳಿಗೆ ತಜ್ಞರನ್ನು ಬಿಟ್ಟು ರಾಜಕೀಯ ವ್ಯಕ್ತಿಗಳನ್ನು ನೇಮಿಸುತ್ತಿರುವುದು ರಾಜ್ಯದ ಪರಿಸರ ಆಡಳಿತಕ್ಕೆ…
ದೇಶದ ೮೦ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದ ಕ್ಷಣಗಳಲ್ಲಿ, ವಿಶ್ವದ ಅತಿ ಎತ್ತರದ ಕಟ್ಟಡವಾದ ದುಬೈನ ‘ಬುರ್ಜ್ ಖಲೀಫಾ’ದಲ್ಲಿ ಭಾರತದ ತ್ರಿವರ್ಣ…
ದೆಹಲಿ ಕಣ್ಣೋಟ ಶಿವಾಜಿ ಗಣೇಶನ್ ಅವರ ವಾರದ ಅಂಕಣ ಸಂಸತ್ ಎಂದರೆ ಪ್ರಜಪ್ರಭುತ್ವದ ಮೌಲ್ಯಗಳನ್ನು ರಕ್ಷಿಸಿಕೊಂಡು ದೇಶದ ಸಮಸ್ಯೆಗಳು ಮತ್ತು…
5,54,32,314 ಎನ್ಯುಮರೇಷನ್ ಫಾರಂ ಹಂಚಿಕೆ ; ಶೇ.100 ರಷ್ಟು ಡಿಜಿಟಲೀಕರಣ ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್)…