ರಾಜ್ಯ

ಡೆಂಗ್ಯೂ ನಿಯಂತ್ರಣಕ್ಕೆ ಸರ್ಕಾರಿ ಆಸ್ಪತ್ರೆಗಳ ಸಿದ್ಧತೆ

ಬೆಂಗಳೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತಿದ್ದು, ಕಳೆದ ೨೪ ಗಂಟೆ ಅವಧಿಯಲ್ಲಿ ೪೮೬ ಪಾಸಿಟಿವ್‌ ಪ್ರಕರಣಗಳು ದಾಖಲಾಗಿದೆ. ಅಲ್ಲದೆ ಕ್ಯಾನ್ಸರ್‌, ಹೃದಯ ಸಮಸ್ಯೆ, ಥೈರಾಯ್ಡ್‌ , ಹೈಪರ್‌ ಟೆನ್ಷನ್‌ , ಬಿಪಿ, ಹಾಗೂ ಶುಗರ್‌ ಸಮಸ್ಯೆಯಿಂದ ಬಳಲುತ್ತಿರುವವರ ಜೀವ ನುಂಗಲು ಹೆಮ್ಮಾರಿ ಹೊಂಚು ಹಾಕುತ್ತಿದೆ. ಈಗಾಗಲೇ ಡೆಂಗ್ಯೂ ಜ್ವರ ಬಂದಿರುವವರಿಗೆ ಮತ್ತೆ ಸೊಳ್ಳೆ ಕಚ್ಚಿದರೆ ಅದರ ತೀವ್ರತೆ ಹೆಚ್ಚಾಗುವ ಸಾಧ್ಯತೆ ಇರುತ್ತದೆ. ಹೀಗಾಗಿ ಡೆಂಗ್ಯೂ ನಿಯಂತ್ರಣಕ್ಕೆ  ಸರ್ಕಾರಿ  ಆಸ್ಪತ್ರೆಗಳಲ್ಲಿ ಹೊಸ ಪ್ಲಾನ್‌ ಮಾಡಿಕೊಳ್ಳಲಾಗಿದೆ.

ಡೆಂಗ್ಯೂ ನಿಯಂತ್ರಣಕ್ಕೆ ಸರ್ಕಾರಿ ಆಸ್ಪತ್ರೆಗಳು ಸೊಳ್ಳೆ ಪರದೆಯ ಮೊರೆ ಹೋಗಿದ್ದು, ಡೆಂಗ್ಯೂ ರೋಗಿಗಳ ಸೋಂಕಿನ ತೀವ್ರತೆ ತಡೆಯಲು ಸೊಳ್ಳೆ ಪರದೆ ಬಳಕೆ ಮಾಡುತ್ತಿವೆ. ಡೆಂಗ್ಯೂ ಜ್ವರದಿಂದ ಬಳಲುತ್ತಿರುವವರಿಗೆ ಗುಣಮುಖರಾಗುವ ಹೊತ್ತಿನಲ್ಲಿ ಮತ್ತೆ ಡೆಂಗ್ಯೂ ಸೊಳ್ಳೆ ಕಚ್ಚಿದರೆ ಸೋಂಕು ತೀವ್ರಗೊಳ್ಳುವ ಸಾಧ್ಯತೆ ಇದ್ದು, ಅಪಾಯಕ್ಕೆ ತುತ್ತಾಗುವ ಸಾಧ್ಯತೆ ಇದೆ. ಈಗಾಗಿ ಈ ಮಾಸ್ಟರ್‌ ಪ್ಲಾನ್‌ ಅನ್ನು ಮಾಡಿಕೊಂಡಿವೆ.

ಬೆಂಗಳೂರಿನ ಜಯನಗರ ಸಾರ್ವಜನಿಕ ಆಸ್ಪತ್ರೆಯಲ್ಲಿ ಡೆಂಗ್ಯೂ ಆಸ್ಪತ್ರೆಗಳಿಂದ ಹರಡದಂತೆ ಹಾಗೂ ಸೊಳ್ಳೆಗಳು ಬರದಂತೆ ತಡೆಯಲು  ವಾರ್ಡ್‌ಗಳಿಗೆ ಹಾಗೂ ಜ್ವರದ ಪ್ರಕರಣಗಳಿಂದ ದಾಖಲಾದ ರೋಗಿಗಳಿಗೆ ಬಡ್‌ ಜೊತೆಗೆ ಸೊಳ್ಳೆ ಪರದೆ ಹಾಕಲಾಗಿದೆ. ಅಲ್ಲದೆ ಆಸ್ಪತ್ರೆಗೆ ಬರುವ ಇತರೆ ರೋಗಿಗಳು ಹಾಗೂ ಜನರಿಗೂ ಡೆಂಗ್ಯೂ ಹರಡದಂತೆ ರಕ್ಷಣೆ ನೀಡಲು ಸೊಳ್ಳೆ ಔಷಧ ನಿಯಂತ್ರಕ ರಿಪ್ಲೀಕೆಂಟ್‌ ಅಳವಡಿಸಿದೆ.

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

ಸೇವೆ, ಶಿಕ್ಷಣ, ಸಂಸ್ಕಾರದ ಸಂಗಮವಾಗಿದ್ದ ರಾಜೇಂದ್ರ ಶ್ರೀ

ಡಾ.ಕೆ.ಪಿ.ಸಿದ್ಧಲಿಂಗಸ್ವಾಮಿ ಇಂದು ಶ್ರೀ ಶಿವರಾತ್ರಿ ರಾಜೇಂದ್ರ ಸ್ವಾಮೀಜಿ ೧೧೧ನೇ ಜಯಂತಿ ಕೆಲವರು ತಮ್ಮ ಕಾಲದಲ್ಲಿ ಬದುಕುತ್ತಾರೆ; ಕೆಲವರು ತಮ್ಮ ಕಾಲವನ್ನೇ…

1 hour ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಆತ್ಮಬಲ ಅಸ್ತ್ರದಿಂದ ಬ್ರಿಟಿಷರ ಮಣಿಸಿದ ಗಾಂಧಿ ಗಾಂಧಿಜಿ ಕಲ್ಪನೆಯ ಸರ್ವೋದಯ ಸಮಾಜದಲ್ಲಿ ಎಲ್ಲರೂ ಸ್ವತಂತ್ರವಾಗಿರುತ್ತಾರೆ. ಇಲ್ಲಿ ಜಾತಿ, ವರ್ಗ, ಶೋಷಣೆ…

1 hour ago

ಗಾಂಧಿವಾದಕ್ಕೆ ಮರುಳಾಗಿದ್ದ ಮೈಸೂರಿನ ಯಶೋಧರಾ ದಾಸಪ್ಪ

ರೋಹಿಣಿ ಸಂಗಪ್ಪ ದಳವಾಯಿ ಮೈಸೂರು ರಾಜ್ಯ ಕಂಡ ಅಪ್ರತಿಮ ಹೋರಾಟಗಾರ್ತಿ ಮತ್ತು ಜನಸೇವಕಿ ಯಶೋಧರಾ ದಾಸಪ್ಪ. ತಮ್ಮ ದಿಟ್ಟ ನಿಲುವು,…

1 hour ago

ಅಸತ್ಯ ಎಂಬುದು ಕೆಟ್ಟ ವ್ರಣದ ಹಾಗೆ

ನಲವತ್ತು ವರುಷಗಳ ಕೆಳಗೆ ಇಂಗ್ಲೆಂಡಿನಲ್ಲಿ ಭಾರತೀಯ ವಿದ್ಯಾರ್ಥಿಗಳ ಸಂಖ್ಯೆ ಈಗ ಇರುವುದಕ್ಕಿಂತ ಬಹಳ ಕಡಿಮೆಯಾಗಿತ್ತು. ತಾವು ಮದುವೆಯಾದವರಾಗಿದ್ದರೂ, ಬ್ರಹ್ಮಚಾರಿಗಳೆಂದು ನಟಿಸುವುದು…

1 hour ago

ಮಳೆ ಕೊರತೆ; ಸಂಕಷ್ಟದಲ್ಲಿ ಅವಳಿ ತಾಲ್ಲೂಕುಗಳ ರೈತರು

ಭೇರ್ಯ ಮಹೇಶ್ ಮಳೆ ಅಭಾವದಿಂದ ಬಿತ್ತನೆ ಮಾಡಿದ್ದ ಬೆಳೆಗಳು ಒಣಗಿ, ರೈತರಿಗೆ ಸಾಕಷ್ಟು ನಷ್ಟ ಕೆ.ಆರ್.ನಗರ: ಕೆ.ಆರ್.ನಗರ ಮತ್ತು ಸಾಲಿಗ್ರಾಮ…

1 hour ago