ರಾಜ್ಯ

ಈಶ್ವರ್ ಖಂಡ್ರೆಯಿಂದ ಅರಣ್ಯ ಇಲಾಖೆಗೆ ಹೊಸ ಶಕ್ತಿ : ಸಚಿವರ ಬೆನ್ನು ತಟ್ಟಿದ ಕಾಂಗ್ರೆಸ್

ಬೆಂಗಳೂರು : ರಾಜ್ಯದಲ್ಲಿ ಕಳೆದೆರಡು ದಿನಗಳಿಂದ ಭಾರೀ ಸದ್ದು ಮಾಡುತ್ತಿರುವ ಹುಲಿ ಉಗುರಿನ ವಿವಾದದ ಬೆನ್ನಲ್ಲೆ ಅರಣ್ಯ ಇಲಾಖೆಯ ಅಧಿಕಾರಿಗಳು ಅಲರ್ಟ್ ಆಗಿದ್ದಾರೆ. ಆರೋಪ ಕೇಳಿ ಬಂದವರ ಮನೆಗಳಿಗೆ ತೆರಳಿ ಪರಿಶೀಲನೆ ನಡೆಸಿ ಎಂದು ಸೂಚಿಸಿರುವ ಸಚಿವ ಈಶ್ವರ್ ಖಂಡ್ರೆಯವರನ್ನು ರಾಜ್ಯ ಕಾಂಗ್ರೆಸ್ ಶ್ಲಾಘಿಸಿದೆ.

ಈ ಕುರಿತು ಟ್ವಿಟ್ ಮಾಡಿರುವ ಕಾಂಗ್ರೆಸ್, ಸಚಿವ ಈಶ್ವರ್ ಖಂಡ್ರೆ ಅವರು ಅರಣ್ಯ ಇಲಾಖೆಗೆ ಹೊಸ ಶಕ್ತಿ ನೀಡುತ್ತಿದ್ದಾರೆ, ಮನುಕುಲದ ಉಳಿವಿಗಾಗಿ ನಿಸರ್ಗವನ್ನು ಉಳಿಸುವುದು ಬಹುಮುಖ್ಯ ಎಂಬ ನಿಟ್ಟಿನಲ್ಲಿ ಹಲವು ಕ್ರಮ ಕೈಗೊಳ್ಳುತ್ತಿದ್ದಾರೆ ಎನ್ನುವ ಮೂಲಕ ತಮ್ಮ ಸಚಿವರ ಬೆನ್ನು ತಟ್ಟುವ ಕಾರ್ಯ ಮಾಡಿದೆ.

ವಿವಿಧ ಸಂಘ ಸಂಸ್ಥೆಗಳು ಹಾಗೂ ಅರಣ್ಯ ಇಲಾಖೆಯ ಸಹಯೋಗದೊಂದಿಗೆ 5 ಕೋಟಿ ಸಸಿ ನೆಡುವ ಮಹತ್ತರ ಯೋಜನೆ ರೂಪಿಸಿದ್ದಾರೆ. ಅನ್ಯ ಉದ್ದೇಶಕ್ಕಾಗಿ ಪರಿವರ್ತಿಸಲಾಗಿದ್ದ 5 ಸಾವಿರಕ್ಕೂ, ಹೆಚ್ಚು ಎಕರೆ ಅರಣ್ಯ ಭೂಮಿಯನ್ನು ಮರಳಿಸುವ ಮೂಲಕ ಪುನಃ ಅರಣ್ಯ ಭೂಮಿಯಾಗಿ ಪರಿವರ್ತಿಸುವ ಐತಿಹಾಸಿಕ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿಸಿದೆ.

ಈಗ ವನ್ಯ ಜೀವಿಗಳನ್ನು ಸಂರಕ್ಷಿಸುವ ಹಾಗೂ ಆ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ದಿಟ್ಟ ಕ್ರಮ ಕೈಗೊಳ್ಳಲಾಗುತ್ತಿದೆ. ಸಮಾಜದಲ್ಲಿ ಅದೆಷ್ಟೇ ದೊಡ್ಡವರಾಗಿರಲಿ, ಗಣ್ಯರಾಗಿರಲಿ, ವನ್ಯ ಜೀವಿಗಳ ಉತ್ಪನ್ನಗಳನ್ನು ಹೊಂದಿದವರ ವಿರುದ್ಧ ಕ್ರಮ ಜರುಗಿಸಲಾಗುತ್ತಿದೆ ಎಂದು ಹೇಳಿದೆ.

ಅಲ್ಲದೆ ವನ್ಯ ಜಿವಿಗಳಿಂದ ತಯಾರಾದ ಉತ್ಪನ್ನಗಳನ್ನು ವಶಪಡಿಸಿಕೊಳ್ಳುವ ಮೂಲಕ ವನ್ಯಜೀವಿಗಳನ್ನು ಸಂರಕ್ಷಿಸುವ ಸ್ಪಷ್ಟ ಸಂದೇಶ ನೀಡಲಾಗುತ್ತಿದೆ. ಕರ್ನಾಟಕದ ಪರಿಸರ ಸಂಪತ್ತನ್ನು ಉಳಿಸುವ ಹಾಗೂ ಬೆಳೆಸುವಲ್ಲಿ ಕಾಂಗ್ರೆಸ್ ಸರ್ಕಾರ ಬದ್ಧವಾಗಿದೆ ಎಂದು ಸ್ವಪ್ರಶಂಸೆ ಮಾಡಿಕೊಂಡಿದೆ.

https://x.com/INCKarnataka/status/1717790837051171313?s=20

lokesh

Recent Posts

IND vs SA | ಹರಿಣಗಳ ಬೌಲಿಂಗ್‌ ದಾಳಿಗೆ ತತ್ತರಿಸಿದ ಇಂಡಿಯಾ ; 76 ರನ್‌ಗಳ ಸೋಲು

ಕೋಲ್ಕತ್ತಾ : ಟಿ20 ವಿಶ್ವಕಪ್​​ನ ಸೂಪರ್​ 8 ಪಂದ್ಯದಲ್ಲಿ ಭಾರತ ತಂಡ ಹೀನಾಯ ಸೋಲು ಕಂಡಿದೆ. ದಕ್ಷಿಣ ಆಫ್ರಿಕಾ ನೀಡಿದ್ದ…

3 hours ago

ಈ ಭಾರಿ ವಾಡಿಕೆಗಿಂತ ಹೆಚ್ಚು ಬಿಸಿಲು ; ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು : ಈ ವರ್ಷ ರಾಜ್ಯದಲ್ಲಿ ಬೇಸಿಗೆಯ ಬಿಸಿಲು ಸಾಮಾನ್ಯಕ್ಕಿಂತ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD)…

6 hours ago

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ಅರ್ಜಿ ವಜಾ

ಬೆಂಗಳೂರು : ಐಪಿಎಸ್ ಅಧಿಕಾರಿ ಡಿ.ರೂಪಾ ಮೌದ್ಗಿಲ್ ಅವರು ಹೂಡಿರುವ ಮಾನಹಾನಿ ಪ್ರಕರಣವನ್ನು ರದ್ದುಗೊಳಿಸುವಂತೆ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ…

6 hours ago

HPCLನಲ್ಲಿ 608 ಅಪ್ರೆಂಟಿಸ್ ಟ್ರೈನಿ ನೇಮಕಾತಿ

ಬೆಂಗಳೂರು : ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (HPCL) 608 ಗ್ರಾಜುಯೇಟ್ ಅಪ್ರೆಂಟಿಸ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಇದು…

6 hours ago

ಬಾಯಿ ಮುಚ್ಚಿಕೊಂಡಿದ್ದರೆ ಒಳ್ಳೆದು ; ಮೂವರು ಶಾಸಕರಿಗೆ ಡಿಸಿಎಂ ಡಿ.ಕೆ.ಶಿ ಎಚ್ಚರಿಕೆ

ಬೆಂಗಳೂರು : ಸಿಎಂ ಸ್ಥಾನ ಬದಲಾವಣೆ, ಡಿಸಿಎಂ ದಿಲ್ಲಿ ಪ್ರವಾಸ, ಹೈಕಮಾಂಡ್ ಭೇಟಿ ಹೀಗೆ ಹೇಳಿಕೆಗಳನ್ನು ನೀಡುತ್ತಿರುವ ಕಾಂಗ್ರೆಸ್ ಶಾಸಕರು…

6 hours ago

ದಿಲ್ಲಿಯಲ್ಲಿ ದಾಳಿಗೆ ಸಂಚು : 8 ಮಂದಿ ಬಂಧನ

ಹೊಸದಿಲ್ಲಿ : ದೆಹಲಿಯನ್ನು ಗುರಿಯಾಗಿಸಿಕೊಂಡು ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಭಯೋತ್ಪಾದಕ ಗುಂಪುಗಳ ಬೆಂಬಲದೊಂದಿಗೆ ಭಯೋತ್ಪಾದಕ ಪಿತೂರಿ ನಡೆಸುತ್ತಿದ್ದ…

8 hours ago