ರಾಜ್ಯ

ಈಶ್ವರ್ ಖಂಡ್ರೆಯಿಂದ ಅರಣ್ಯ ಇಲಾಖೆಗೆ ಹೊಸ ಶಕ್ತಿ : ಸಚಿವರ ಬೆನ್ನು ತಟ್ಟಿದ ಕಾಂಗ್ರೆಸ್

ಬೆಂಗಳೂರು : ರಾಜ್ಯದಲ್ಲಿ ಕಳೆದೆರಡು ದಿನಗಳಿಂದ ಭಾರೀ ಸದ್ದು ಮಾಡುತ್ತಿರುವ ಹುಲಿ ಉಗುರಿನ ವಿವಾದದ ಬೆನ್ನಲ್ಲೆ ಅರಣ್ಯ ಇಲಾಖೆಯ ಅಧಿಕಾರಿಗಳು ಅಲರ್ಟ್ ಆಗಿದ್ದಾರೆ. ಆರೋಪ ಕೇಳಿ ಬಂದವರ ಮನೆಗಳಿಗೆ ತೆರಳಿ ಪರಿಶೀಲನೆ ನಡೆಸಿ ಎಂದು ಸೂಚಿಸಿರುವ ಸಚಿವ ಈಶ್ವರ್ ಖಂಡ್ರೆಯವರನ್ನು ರಾಜ್ಯ ಕಾಂಗ್ರೆಸ್ ಶ್ಲಾಘಿಸಿದೆ.

ಈ ಕುರಿತು ಟ್ವಿಟ್ ಮಾಡಿರುವ ಕಾಂಗ್ರೆಸ್, ಸಚಿವ ಈಶ್ವರ್ ಖಂಡ್ರೆ ಅವರು ಅರಣ್ಯ ಇಲಾಖೆಗೆ ಹೊಸ ಶಕ್ತಿ ನೀಡುತ್ತಿದ್ದಾರೆ, ಮನುಕುಲದ ಉಳಿವಿಗಾಗಿ ನಿಸರ್ಗವನ್ನು ಉಳಿಸುವುದು ಬಹುಮುಖ್ಯ ಎಂಬ ನಿಟ್ಟಿನಲ್ಲಿ ಹಲವು ಕ್ರಮ ಕೈಗೊಳ್ಳುತ್ತಿದ್ದಾರೆ ಎನ್ನುವ ಮೂಲಕ ತಮ್ಮ ಸಚಿವರ ಬೆನ್ನು ತಟ್ಟುವ ಕಾರ್ಯ ಮಾಡಿದೆ.

ವಿವಿಧ ಸಂಘ ಸಂಸ್ಥೆಗಳು ಹಾಗೂ ಅರಣ್ಯ ಇಲಾಖೆಯ ಸಹಯೋಗದೊಂದಿಗೆ 5 ಕೋಟಿ ಸಸಿ ನೆಡುವ ಮಹತ್ತರ ಯೋಜನೆ ರೂಪಿಸಿದ್ದಾರೆ. ಅನ್ಯ ಉದ್ದೇಶಕ್ಕಾಗಿ ಪರಿವರ್ತಿಸಲಾಗಿದ್ದ 5 ಸಾವಿರಕ್ಕೂ, ಹೆಚ್ಚು ಎಕರೆ ಅರಣ್ಯ ಭೂಮಿಯನ್ನು ಮರಳಿಸುವ ಮೂಲಕ ಪುನಃ ಅರಣ್ಯ ಭೂಮಿಯಾಗಿ ಪರಿವರ್ತಿಸುವ ಐತಿಹಾಸಿಕ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿಸಿದೆ.

ಈಗ ವನ್ಯ ಜೀವಿಗಳನ್ನು ಸಂರಕ್ಷಿಸುವ ಹಾಗೂ ಆ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ದಿಟ್ಟ ಕ್ರಮ ಕೈಗೊಳ್ಳಲಾಗುತ್ತಿದೆ. ಸಮಾಜದಲ್ಲಿ ಅದೆಷ್ಟೇ ದೊಡ್ಡವರಾಗಿರಲಿ, ಗಣ್ಯರಾಗಿರಲಿ, ವನ್ಯ ಜೀವಿಗಳ ಉತ್ಪನ್ನಗಳನ್ನು ಹೊಂದಿದವರ ವಿರುದ್ಧ ಕ್ರಮ ಜರುಗಿಸಲಾಗುತ್ತಿದೆ ಎಂದು ಹೇಳಿದೆ.

ಅಲ್ಲದೆ ವನ್ಯ ಜಿವಿಗಳಿಂದ ತಯಾರಾದ ಉತ್ಪನ್ನಗಳನ್ನು ವಶಪಡಿಸಿಕೊಳ್ಳುವ ಮೂಲಕ ವನ್ಯಜೀವಿಗಳನ್ನು ಸಂರಕ್ಷಿಸುವ ಸ್ಪಷ್ಟ ಸಂದೇಶ ನೀಡಲಾಗುತ್ತಿದೆ. ಕರ್ನಾಟಕದ ಪರಿಸರ ಸಂಪತ್ತನ್ನು ಉಳಿಸುವ ಹಾಗೂ ಬೆಳೆಸುವಲ್ಲಿ ಕಾಂಗ್ರೆಸ್ ಸರ್ಕಾರ ಬದ್ಧವಾಗಿದೆ ಎಂದು ಸ್ವಪ್ರಶಂಸೆ ಮಾಡಿಕೊಂಡಿದೆ.

https://x.com/INCKarnataka/status/1717790837051171313?s=20

lokesh

Recent Posts

ಚಾ.ನಗರ | ಮನುಸ್ಮೃತಿ ಪ್ರತಿ ಹರಿದು ಪ್ರತಿಭಟನೆ

ಚಾಮರಾಜನಗರ : ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರು ಮನುಸ್ಮೃತಿಯನ್ನು ಸುಟ್ಟ ಹಾಕಿದ ದಿನದ ಅಂಗವಾಗಿ ವಿವಿಧ ಸಂಘಟನೆಗಳ ಮುಖಂಡರು…

10 mins ago

ಕರ್ನಾಟಕದಲ್ಲಿ ಉದ್ಯೋಗ ಸೃಷ್ಠಿ | ರಾಹುಲ್‌ ಗಾಂಧಿ ಹಾಗೂ ಅಶ್ವಿನ್‌ ವೈಷ್ಣವ್‌ ನಡುವೆ ಟ್ವಿಟ್‌ ವಾರ್…

ಹೊಸದಿಲ್ಲಿ : ಕೇಂದ್ರ ಸಚಿವರಾದ ಅಶ್ವಿನ್ ವೈಷ್ಣವ್ ಮತ್ತು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರ ನಡುವೆ ಕರ್ನಾಟಕದಲ್ಲಿ ಉದ್ಯೋಗ…

1 hour ago

ಚಿತ್ರದುರ್ಗ ಬಸ್‌ ದುರಂತ | ಶಾಲಾ ಮಕ್ಕಳಿದ್ದ ಮತ್ತೊಂದು ಬಸ್ಸಿಗೂ ಬೆಂಕಿ : ಕೂದಲೆಳೆ ಅಂತರದಲ್ಲಿ ಪವಾಡಸದೃಶ ಪಾರು!

ಬೆಂಗಳೂರು : ಚಿತ್ರದುರ್ಗದ ಹಿರಿಯೂರು ಬಳಿ ಇಂದು ಬೆಳಗಿನ ಜಾವ ಸಂಭವಿಸಿದ ರಸ್ತೆ ಅಪಘಾತದ ಮಾರ್ಗದಲ್ಲಿ ಶಾಲಾ ಮಕ್ಕಳು ಪ್ರಯಾಣಿಸುತ್ತಿದ್ದ…

1 hour ago

ಪಕ್ಷದ ಅಧ್ಯಕ್ಷನಾಗಿ ಬಾವುಟ ಕಟ್ಟಿದ್ದೇನೆ, ಕಸ ಗುಡಿಸಿದ್ದೇನೆ: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ನಾನು ಪಕ್ಷದ ಅಧ್ಯಕ್ಷನಾಗಿ ಬಾವುಟ ಕಟ್ಟಿದ್ದೇನೆ, ಕಸ ಗುಡಿಸಿದ್ದೇನೆ. ಪಕ್ಷಕ್ಕಾಗಿ ಎಲ್ಲವನ್ನೂ ಮಾಡಿದ್ದೇನೆ. ನಾನು ಸ್ಟೇಜ್ ಮೇಲೆ ಕೂತು…

2 hours ago

ನಾಳೆ ದೆಹಲಿಗೆ ತೆರಳಲಿದ್ದಾರೆ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕಾಂಗ್ರೆಸ್‌ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಭಾಗಿಯಾಗಲು ಸಿಎಂ ಸಿದ್ದರಾಮಯ್ಯ ಅವರು ನಾಳೆ ದೆಹಲಿಗೆ ತೆರಳಲಿದ್ದಾರೆ. ಡಿಸೆಂಬರ್‌.27ರಂದು ದೆಹಲಿಯ ಇಂದಿರಾ…

3 hours ago

ಚಾಮರಾಜನಗರದಲ್ಲಿ ಬೋನಿಗೆ ಬಿದ್ದ ಹುಲಿ

ಚಾಮರಾಜನಗರ: ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಹುಲಿಗಳ ಉಪಟಳ ಹೆಚ್ಚಾಗಿದ್ದು, ದೇಪಾಪುರ ಗ್ರಾಮದ ಹೊರವಲಯದಲ್ಲಿ ಹುಲಿಯೊಂದು ಬೋನಿಗೆ ಬಿದ್ದಿದೆ. ಹುಲಿಯನ್ನು ನೋಡಲು…

4 hours ago