ರಾಜ್ಯ

ಈಶ್ವರ್ ಖಂಡ್ರೆಯಿಂದ ಅರಣ್ಯ ಇಲಾಖೆಗೆ ಹೊಸ ಶಕ್ತಿ : ಸಚಿವರ ಬೆನ್ನು ತಟ್ಟಿದ ಕಾಂಗ್ರೆಸ್

ಬೆಂಗಳೂರು : ರಾಜ್ಯದಲ್ಲಿ ಕಳೆದೆರಡು ದಿನಗಳಿಂದ ಭಾರೀ ಸದ್ದು ಮಾಡುತ್ತಿರುವ ಹುಲಿ ಉಗುರಿನ ವಿವಾದದ ಬೆನ್ನಲ್ಲೆ ಅರಣ್ಯ ಇಲಾಖೆಯ ಅಧಿಕಾರಿಗಳು ಅಲರ್ಟ್ ಆಗಿದ್ದಾರೆ. ಆರೋಪ ಕೇಳಿ ಬಂದವರ ಮನೆಗಳಿಗೆ ತೆರಳಿ ಪರಿಶೀಲನೆ ನಡೆಸಿ ಎಂದು ಸೂಚಿಸಿರುವ ಸಚಿವ ಈಶ್ವರ್ ಖಂಡ್ರೆಯವರನ್ನು ರಾಜ್ಯ ಕಾಂಗ್ರೆಸ್ ಶ್ಲಾಘಿಸಿದೆ.

ಈ ಕುರಿತು ಟ್ವಿಟ್ ಮಾಡಿರುವ ಕಾಂಗ್ರೆಸ್, ಸಚಿವ ಈಶ್ವರ್ ಖಂಡ್ರೆ ಅವರು ಅರಣ್ಯ ಇಲಾಖೆಗೆ ಹೊಸ ಶಕ್ತಿ ನೀಡುತ್ತಿದ್ದಾರೆ, ಮನುಕುಲದ ಉಳಿವಿಗಾಗಿ ನಿಸರ್ಗವನ್ನು ಉಳಿಸುವುದು ಬಹುಮುಖ್ಯ ಎಂಬ ನಿಟ್ಟಿನಲ್ಲಿ ಹಲವು ಕ್ರಮ ಕೈಗೊಳ್ಳುತ್ತಿದ್ದಾರೆ ಎನ್ನುವ ಮೂಲಕ ತಮ್ಮ ಸಚಿವರ ಬೆನ್ನು ತಟ್ಟುವ ಕಾರ್ಯ ಮಾಡಿದೆ.

ವಿವಿಧ ಸಂಘ ಸಂಸ್ಥೆಗಳು ಹಾಗೂ ಅರಣ್ಯ ಇಲಾಖೆಯ ಸಹಯೋಗದೊಂದಿಗೆ 5 ಕೋಟಿ ಸಸಿ ನೆಡುವ ಮಹತ್ತರ ಯೋಜನೆ ರೂಪಿಸಿದ್ದಾರೆ. ಅನ್ಯ ಉದ್ದೇಶಕ್ಕಾಗಿ ಪರಿವರ್ತಿಸಲಾಗಿದ್ದ 5 ಸಾವಿರಕ್ಕೂ, ಹೆಚ್ಚು ಎಕರೆ ಅರಣ್ಯ ಭೂಮಿಯನ್ನು ಮರಳಿಸುವ ಮೂಲಕ ಪುನಃ ಅರಣ್ಯ ಭೂಮಿಯಾಗಿ ಪರಿವರ್ತಿಸುವ ಐತಿಹಾಸಿಕ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿಸಿದೆ.

ಈಗ ವನ್ಯ ಜೀವಿಗಳನ್ನು ಸಂರಕ್ಷಿಸುವ ಹಾಗೂ ಆ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ದಿಟ್ಟ ಕ್ರಮ ಕೈಗೊಳ್ಳಲಾಗುತ್ತಿದೆ. ಸಮಾಜದಲ್ಲಿ ಅದೆಷ್ಟೇ ದೊಡ್ಡವರಾಗಿರಲಿ, ಗಣ್ಯರಾಗಿರಲಿ, ವನ್ಯ ಜೀವಿಗಳ ಉತ್ಪನ್ನಗಳನ್ನು ಹೊಂದಿದವರ ವಿರುದ್ಧ ಕ್ರಮ ಜರುಗಿಸಲಾಗುತ್ತಿದೆ ಎಂದು ಹೇಳಿದೆ.

ಅಲ್ಲದೆ ವನ್ಯ ಜಿವಿಗಳಿಂದ ತಯಾರಾದ ಉತ್ಪನ್ನಗಳನ್ನು ವಶಪಡಿಸಿಕೊಳ್ಳುವ ಮೂಲಕ ವನ್ಯಜೀವಿಗಳನ್ನು ಸಂರಕ್ಷಿಸುವ ಸ್ಪಷ್ಟ ಸಂದೇಶ ನೀಡಲಾಗುತ್ತಿದೆ. ಕರ್ನಾಟಕದ ಪರಿಸರ ಸಂಪತ್ತನ್ನು ಉಳಿಸುವ ಹಾಗೂ ಬೆಳೆಸುವಲ್ಲಿ ಕಾಂಗ್ರೆಸ್ ಸರ್ಕಾರ ಬದ್ಧವಾಗಿದೆ ಎಂದು ಸ್ವಪ್ರಶಂಸೆ ಮಾಡಿಕೊಂಡಿದೆ.

https://x.com/INCKarnataka/status/1717790837051171313?s=20

lokesh

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

11 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

11 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

11 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

11 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

11 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

12 hours ago