ರಾಜ್ಯ

ಹೊಸ ವರ್ಷಾಚರಣೆಗೆ ಬೆಂಗಳೂರಿನಲ್ಲಿ ಹೊಸ ರೂಲ್ಸ್

ಬೆಂಗಳೂರು: ಈ ಬಾರಿ ಹೊಸ ವರ್ಷ ಸ್ವಾಗತಿಸಲು ಬೆಂಗಳೂರು ನಗರ ಸಜ್ಜಾಗಿದ್ದು, ಪೊಲೀಸ್‌ ಇಲಾಖೆ ಹೊಸ ಮಾರ್ಗಸೂಚಿ ಪ್ರಕಟಿಸಿದೆ.

1) ಕಾರ್ಯಕ್ರಮಗಳಿಗೆ ಸಂಬಂಧಪಟ್ಟ ಇಲಾಖೆಗಳಿಂದ ಅನುಮತಿ ಕಡ್ಡಾಯ ಹಾಗೂ ನಿಯಮ ಪಾಲಿಸಬೇಕು
2) ಹೊಸ ವರ್ಷಾಚರಣೆ ಸಂಬಂಧ ನಿಗದಿತ ಸಮಯವನ್ನು ಪಾಲಿಸಬೇಕು
3) ಕಡ್ಡಾಯವಾಗಿ ಧ್ವನಿವರ್ಧಕ ಪರವಾನಗಿ ಪಡೆದುಕೊಂಡ ನಂತರ ನಿಗದಿತ ಶಬ್ಧ ಮಿತಿ ಇರಬೇಕು
4) ಸ್ಥಳಾವಕಾಶಕ್ಕೆ ತಕ್ಕಂತೆ ಟಿಕೆಟ್/ಪಾಸ್‌ಗಳನ್ನು ವಿತರಿಸಬೇಕು ಹಾಗೂ ನೆಲಮಹಡಿ, ಪಾರ್ಕಿಂಗ್ ಸ್ಥಳಗಳು, ಟೆರೆಸ್‌ನಲ್ಲಿ ಕಾರ್ಯಕ್ರಮಗಳನ್ನು ಆಯೋಜಿಸುವಂತಿಲ್ಲ.
5) ಕಾರ್ಯಕ್ರಮದ ಸ್ಥಳಗಳಲ್ಲಿ ಸ್ಕ್ರೀನ್‌ಗಳನ್ನು ಸಾರ್ವಜನಿಕರಿಗೆ ಕಾಣುವಂತೆ ಸ್ಕ್ರೀನಿಂಗ್ ಮಾಡಬಾರದು.
6) ಅಗ್ನಿ ನಂದಿಸುವ ವಸ್ತುಗಳನ್ನು ಅಳವಡಿಸಿಕೊಳ್ಳಬೇಕು.
7) ಕಾರ್ಯಕ್ರಮದ ಸ್ಥಳದಲ್ಲಿ ಗಲಾಟೆ ನಡೆದಲ್ಲಿ ಕೂಡಲೇ ಪೊಲೀಸರಿಗೆ ಮಾಹಿತಿ ನೀಡಬೇಕು
8) ಕಾರ್ಯಕ್ರಮದ ವೇಳೆ ಪಟಾಕಿ ಸಿಡಿಸುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.
9) ಯಾವುದೇ ಅಹಿತಕರ ಘಟನೆ ನಡೆಯದಂತೆ ಕ್ರಮ ಕೈಗೊಳ್ಳಬೇಕು

ಇವೆಲ್ಲವುಗಳನ್ನು ಒಂದು ವೇಳೆ ಉಲ್ಲಂಘನೆ ಮಾಡಿದಲ್ಲಿ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಮಲೆನಾಡಿನಲ್ಲಿ ಮಳೆಯ ಅಬ್ಬರ: ಜೋಗ ಜಲಪಾತಕ್ಕೆ ಜೀವಕಳೆ

ಶಿವಮೊಗ್ಗ: ಮಲೆನಾಡಿನಲ್ಲಿ ಭಾರೀ ಮಳೆಯಾಗುತ್ತಿರುವ ಪರಿಣಾಮ ವಿಶ್ವವಿಖ್ಯಾತ ಜೋಗ ಜಲಪಾತ ಜೀವಕಳೆ ಪಡೆದುಕೊಂಡಿದೆ. ಕಳೆದ ನಾಲ್ಕೈದು ದಿನಗಳಿಂದ ಶಿವಮೊಗ್ಗದಲ್ಲಿ ಭಾರೀ…

5 hours ago

ಕೊಡಗು ಜಿಲ್ಲೆಯ ಮಳೆ ವಿವರ

ಕೊಡಗು: ಜಿಲ್ಲೆಯಲ್ಲಿ ಕಳೆದ ನಾಲ್ಕೈದು ದಿನಗಳಿಂದ ಧಾರಾಕಾರ ಮಳೆಯಾಗುತ್ತಿದ್ದು, ರೈತರ ಮೊಗದಲ್ಲಿ ಮಂದಹಾಸ ಮನೆಮಾಡಿದೆ. ಜಿಲ್ಲೆಯ ಮಳೆಯ ವಿವರ ಈ…

5 hours ago

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2026: ಗಜಪಡೆ ಆಯ್ಕೆ ಪ್ರಕ್ರಿಯೆಗೆ ಚಾಲನೆ

ಮಡಿಕೇರಿ: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಗಜಪಡೆಗೆ ಆಯ್ಕೆ ಪ್ರಕ್ರಿಯೆಗೆ ಅಧಿಕೃತ ಚಾಲನೆ ಸಿಕ್ಕಿದೆ. ಇದರ ಭಾಗವಾಗಿ…

6 hours ago

ವಯನಾಡಿನಲ್ಲಿ ಮೇಘಸ್ಫೋಟ: ಇಬ್ಬರು ಕಾರ್ಮಿಕರು ಜೀವಂತ ಸಮಾಧಿ: 30 ಮಂದಿ ನಾಪತ್ತೆ

ತಿರುವನಂತಪುರಂ: ವಯನಾಡಿನಲ್ಲಿ ಮತ್ತೊಂದು ದುರಂತ ಸಂಭವಿಸಿದ್ದು, ಮೆಪ್ಪಾಡಿಯಲ್ಲಿ ಭಾರೀ ಮಳೆಯಿಂದಾಗಿ ಭೂಕುಸಿತ ಉಂಟಾಗಿದೆ. ವಯನಾಡಿನ ಸುರಂಗ ನಿರ್ಮಾಣ ಪ್ರದೇಶದ ಮೀನಾಕ್ಷಿ…

6 hours ago

ಬ್ರಿಡ್ಜ್‌ ಮ್ಯಾನ್‌ ಖ್ಯಾತಿಯ ಪದ್ಮಶ್ರೀ ಡಾ.ಗಿರೀಶ್‌ ಭಾರದ್ವಾಜ್‌ ನಿಧನ

ಮಂಗಳೂರು: ತೂಗುಸೇತುವೆಗಳ ಸರದಾರ, ಸುಳ್ಯದ ವಿಶ್ವೇಶ್ವರಯ್ಯ ಎಂದೇ ಖ್ಯಾತರಾಗಿದ್ದ ಪದ್ಮಶ್ರೀ ಪುರಸ್ಕೃತ ಎಂಜಿನಿಯರ್‌ ಡಾ.ಗಿರೀಶ್‌ ಭಾರದ್ವಾಜ್‌ ಅವರು ಇಂದು ನಿಧನರಾಗಿದ್ದಾರೆ.…

7 hours ago

ಕೊಡಗು: ಕಾಫಿ ತೋಟದಲ್ಲಿ ಕಾಡಾನೆ ಮೃತದೇಹ ಪತ್ತೆ

ಕೊಡಗು: ಕಾಫಿ ತೋಟದಲ್ಲಿ ಕಾಡಾನೆ ಮೃತದೇಹ ಪತ್ತೆಯಾಗಿದೆ. ಕುಂಜಿಲ-ಕಕ್ಕಬೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಲಡಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಪರದಂಡ…

9 hours ago