ರಾಜ್ಯ

ಸಿಮ್‌ ಕಾರ್ಡ್‌ ಮಾರಾಟಕ್ಕೆ ಹೊಸ ನಿಯಮ: ಪಾಲಿಸದಿದ್ದರೆ 10 ಲಕ್ಷದವರೆಗೆ ದಂಡ

ಬೆಂಗಳೂರು: ನಕಲಿ ಸಿಮ್‌ ಕಾರ್ಡ್‌ಗಳನ್ನು ಬಳಸಿ ನಡೆಯುತ್ತಿರುವ ವಂಚನೆಗಳನ್ನು ತಡೆಗಟ್ಟಲು ದೂರಸಂಪರ್ಕ ಇಲಾಖೆ ಇಂದಿನಿಂದ ಹೊಸ ನಿಯಮಗಳನ್ನು ಜಾರಿಗೆ ತಂದಿದೆ. ಹೊಸ ನಿಯಮಗಳನ್ನು ಪಾಲನೆ ಮಾಡದಿದ್ದಲ್ಲಿ ಶಿಕ್ಷೆಗೆ ಒಳಪಡಬೇಕಾಗುತ್ತದೆ.

ಸಿಮ್‌ ಮಾರಾಟಗಾರರು ಸಿಮ್ ಕಾರ್ಡ್‌ಗಳನ್ನು ಮಾರಾಟ ಮಾಡುವಲ್ಲಿ ಅನೇಕ ನಿಯಮಗಳನ್ನು ಅನುಸರಿಸಬೇಕಾಗುತ್ತದೆ. ದೂರಸಂಪರ್ಕ(DOT) ಇಲಾಖೆಯ ಹೊಸ ನಿಯಮವನ್ನು ಪಾಲಿಸದಿದ್ದರೆ 10 ಲಕ್ಷ ರೂ.ವರೆಗೆ ದಂಡ ತೆರಬೇಕಾಗುತ್ತದೆ.

ಹೊಸ ನಿಯಮಗಳಲ್ಲಿ ಏನಿದೆ?
ಸಿಮ್ ಮಾರಾಟಗಾರರು ತಮ್ಮ ಅಂಗಡಿಯ ಸಿಬ್ಬಂದಿಯ ಎಲ್ಲಾ ಮಾಹಿತಿಯ ದಾಖಲೆಯನ್ನು ಇಟ್ಟುಕೊಳ್ಳಬೇಕು. ಅಂಗಡಿ ಸಿಬ್ಬಂದಿ ಕೂಡ ಪೊಲೀಸ್ ಪರಿಶೀಲನೆಗೆ ಹೋಗಬೇಕಾಗುತ್ತದೆ. ಹೊಸ ನಿಯಮಗಳ ಪ್ರಕಾರ, ಕಾರ್ಪೊರೇಟ್ ID ಸಂಖ್ಯೆ ಅಥವಾ CIN ಸಂಖ್ಯೆಯನ್ನು ಪ್ರತಿ ಸಿಮ್‌ ಕಾರ್ಡ್ ಅಂಗಡಿಗೆ ನೀಡಲಾಗುತ್ತದೆ. ಈ ತುರ್ತು ಸಂಖ್ಯೆ ಇಲ್ಲದೆ ಯಾರೂ ಸಿಮ್ ಕಾರ್ಡ್ ಮಾರಾಟ ಮಾಡುವಹಾಗಿಲ್ಲ.

ನೊಂದಣಿ ಇಲ್ಲದೆ ಸಿಮ್‌ ಮಾರುವಹಾಗಿಲ್ಲ:
DoT ಅಡಿಯಲ್ಲಿ ನೋಂದಾಯಿಸಲು ಚಿಲ್ಲರೆ ಅಂಗಡಿಯು ಆಧಾರ್, ಪ್ಯಾನ್‌ ಪಾಸ್‌ಪೋರ್ಟ್ ಮತ್ತು ಜಿಎಸ್‌ಟಿ ವಿವರಗಳನ್ನು ಒದಗಿಸಬೇಕು. ನೋಂದಣಿ ಇಲ್ಲದೆ ಅಂಗಡಿಯವರು ಸಿಮ್ ಕಾರ್ಡ್ ಮಾರಾಟ ಮಾಡಲು ಸಾಧ್ಯವಿಲ್ಲ. ನೋಂದಣಿ ಇಲ್ಲದೆ ಅಂಗಡಿಯಲ್ಲಿ ಸಿಮ್ ಕಾರ್ಡ್‌ ಮಾರಾಟ ಮಾಡಿದರೆ, ಅದರ ಐಡಿಯನ್ನು ನಿರ್ಬಂಧಿಸಲಾಗುತ್ತದೆ.

ಸಿಮ್‌ ಕಳೆದುಕೊಂಡರೆ ಏನು ಮಾಡಬೇಕು?
ಸಿಮ್ ಕಾರ್ಡ್ ಕಳೆದುಕೊಂಡರೆ ಸಂಬಂಧಪಟ್ಟ ವ್ಯಕ್ತಿ ಪರಿಶೀಲನೆ ಪ್ರಕ್ರಿಯೆಯ ಮೂಲಕವೇ ಹೊಸ ಸಿಮ್‌ ಪಡೆಯಬೇಕು. ಸಿಮ್ ಕಾರ್ಡ್‌ಗಳನ್ನು ಮಾರಾಟ ಮಾಡಲು ಈ ನಿಯಮಗಳನ್ನು ಕಟ್ಟುನಿಟ್ಟಾಗಿ ಅನುಸರಿಸಲು ಜಿಯೋ, ಏರ್ಟೆಲ್, ವಿ, ಬಿಎಸ್​ಎನ್​ಎಲ್​ಗೆ ನಿರ್ದೇಶನ ನೀಡಲಾಗಿದೆ.

andolanait

Recent Posts

ಯುಪಿಎಸ್‌ಸಿ ಪರೀಕ್ಷೆಗೆ ಕಠಿಣ ಪರಿಶ್ರಮ ಅಗತ್ಯ : ಕಿರಣ ಕಮತೆ

ಮೈಸೂರು : ಯುಪಿಎಸ್‌ ಪರೀಕ್ಷೆ ಭೇದಿಸುವುದು ಸುಲಭವಲ್ಲ. ಅದಕ್ಕೆ ಕಠಿಣ ಪರಿಶ್ರಮ, ಸ್ಥಿರತೆ ಮತ್ತು ಸ್ಮಾರ್ಟ್ ಓದು ಅಗತ್ಯ ಎಂದು…

17 mins ago

ನಾಗರಹೊಳೆ | ಅಕ್ರಮ ಉರುಳಿಗೆ ಸಿಲುಕಿ ಹುಲಿ ಬಲಿ

ಹುಣಸೂರು : ನಾಗರಹೊಳೆ ಹುಲಿ ಮೀಸಲು ಅರಣ್ಯದ ಮೆಟ್ಟಿಕುಪ್ಪೆ ಶ್ರೇಣಿಯ ಬಳಿ ಅಕ್ರಮ ಉರುಳಿಗೆ ಸಿಲುಕಿ ಮೂರು ವರ್ಷದ ಗಂಡು…

23 mins ago

ಗುಂಡ್ಲುಪೇಟೆ | ಬೇರಂಬಾಡಿ ಭಾಗದಲ್ಲಿ ಮತ್ತೊಂದು ಹುಲಿ ಸೆರೆ

ಗುಂಡ್ಲುಪೇಟೆ : ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಣೆ ಪ್ರದೇಶದ ಮದ್ದೂರು ವಲಯ ವ್ಯಾಪ್ತಿಯ ಚನ್ನಮಲ್ಲಿಪುರ-ಬೇರಂಬಾಟಿ ಕಗ್ಗಳಹುಂಡಿ ಭಾಗದಲ್ಲಿ ಉಪಟಳ ನೀಡುತ್ತಿದ್ದ…

1 hour ago

ರಾಮನವಮಿ | ಅಯೋಧ್ಯೆ ಬಾಲರಾಮನ ಹಣೆಯ ಮೇಲೆ ಮೂಡಿದ ಸೂರ್ಯ ತಿಲಕ

ಅಯೋಧ್ಯೆ : ಅಯೋಧ್ಯೆ ರಾಮಮಂದಿರದಲ್ಲಿ ರಾಮನವಮಿ ಸಂಭ್ರಮ ಮನೆ ಮಾಡಿದೆ. ಈ ಶುಭ ಸಂದರ್ಭದಲ್ಲಿ ಬಾಲರಾಮನ ಹಣೆಯ ಮೇಲೆ ಸೂರ್ಯ…

1 hour ago

ನೇಪಾಳ | ನೂತನ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ ಜೆನ್‌ಝೀಗಳ ಹೀರೋ ಬಾಲೇಂದ್ರ

ಕಠ್ಮಂಡು : ನೇಪಾಳದ ರಾಷ್ಟ್ರೀಯ ಸ್ವತಂತ್ರ ಪಕ್ಷದ ಹಿರಿಯ ನಾಯಕ ಬಾಲೇಂದ್ರ ಶಾ ಅವರು ದೇಶದ ನೂತನ ಪ್ರಧಾನಿಯಾಗಿ ಇಂದು(ಮಾರ್ಚ್‌.27)…

4 hours ago

ವೈರಮುಡಿ ಬ್ರಹ್ಮೋತ್ಸವಕ್ಕೆ 2 ಲಕ್ಷಕ್ಕೂ ಹೆಚ್ಚು ಭಕ್ತಾಧಿಗಳು ಭಾಗಿ : ಜಿಲ್ಲಾಧಿಕಾರಿ

ಮಂಡ್ಯ : ವೈರಮುಡಿ ಬ್ರಹ್ಮೋತ್ಸವಕ್ಕೆ ಆಗಮಿಸುವ ಭಕ್ತಾದಿಗಳ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಪಾಲನೆ ಹಾಗೂ ಭದ್ರತೆಗಾಗಿ ಸೂಕ್ತ ಕ್ರಮಗಳನ್ನು…

4 hours ago