ರಾಜ್ಯ

ಸಿಮ್‌ ಕಾರ್ಡ್‌ ಮಾರಾಟಕ್ಕೆ ಹೊಸ ನಿಯಮ: ಪಾಲಿಸದಿದ್ದರೆ 10 ಲಕ್ಷದವರೆಗೆ ದಂಡ

ಬೆಂಗಳೂರು: ನಕಲಿ ಸಿಮ್‌ ಕಾರ್ಡ್‌ಗಳನ್ನು ಬಳಸಿ ನಡೆಯುತ್ತಿರುವ ವಂಚನೆಗಳನ್ನು ತಡೆಗಟ್ಟಲು ದೂರಸಂಪರ್ಕ ಇಲಾಖೆ ಇಂದಿನಿಂದ ಹೊಸ ನಿಯಮಗಳನ್ನು ಜಾರಿಗೆ ತಂದಿದೆ. ಹೊಸ ನಿಯಮಗಳನ್ನು ಪಾಲನೆ ಮಾಡದಿದ್ದಲ್ಲಿ ಶಿಕ್ಷೆಗೆ ಒಳಪಡಬೇಕಾಗುತ್ತದೆ.

ಸಿಮ್‌ ಮಾರಾಟಗಾರರು ಸಿಮ್ ಕಾರ್ಡ್‌ಗಳನ್ನು ಮಾರಾಟ ಮಾಡುವಲ್ಲಿ ಅನೇಕ ನಿಯಮಗಳನ್ನು ಅನುಸರಿಸಬೇಕಾಗುತ್ತದೆ. ದೂರಸಂಪರ್ಕ(DOT) ಇಲಾಖೆಯ ಹೊಸ ನಿಯಮವನ್ನು ಪಾಲಿಸದಿದ್ದರೆ 10 ಲಕ್ಷ ರೂ.ವರೆಗೆ ದಂಡ ತೆರಬೇಕಾಗುತ್ತದೆ.

ಹೊಸ ನಿಯಮಗಳಲ್ಲಿ ಏನಿದೆ?
ಸಿಮ್ ಮಾರಾಟಗಾರರು ತಮ್ಮ ಅಂಗಡಿಯ ಸಿಬ್ಬಂದಿಯ ಎಲ್ಲಾ ಮಾಹಿತಿಯ ದಾಖಲೆಯನ್ನು ಇಟ್ಟುಕೊಳ್ಳಬೇಕು. ಅಂಗಡಿ ಸಿಬ್ಬಂದಿ ಕೂಡ ಪೊಲೀಸ್ ಪರಿಶೀಲನೆಗೆ ಹೋಗಬೇಕಾಗುತ್ತದೆ. ಹೊಸ ನಿಯಮಗಳ ಪ್ರಕಾರ, ಕಾರ್ಪೊರೇಟ್ ID ಸಂಖ್ಯೆ ಅಥವಾ CIN ಸಂಖ್ಯೆಯನ್ನು ಪ್ರತಿ ಸಿಮ್‌ ಕಾರ್ಡ್ ಅಂಗಡಿಗೆ ನೀಡಲಾಗುತ್ತದೆ. ಈ ತುರ್ತು ಸಂಖ್ಯೆ ಇಲ್ಲದೆ ಯಾರೂ ಸಿಮ್ ಕಾರ್ಡ್ ಮಾರಾಟ ಮಾಡುವಹಾಗಿಲ್ಲ.

ನೊಂದಣಿ ಇಲ್ಲದೆ ಸಿಮ್‌ ಮಾರುವಹಾಗಿಲ್ಲ:
DoT ಅಡಿಯಲ್ಲಿ ನೋಂದಾಯಿಸಲು ಚಿಲ್ಲರೆ ಅಂಗಡಿಯು ಆಧಾರ್, ಪ್ಯಾನ್‌ ಪಾಸ್‌ಪೋರ್ಟ್ ಮತ್ತು ಜಿಎಸ್‌ಟಿ ವಿವರಗಳನ್ನು ಒದಗಿಸಬೇಕು. ನೋಂದಣಿ ಇಲ್ಲದೆ ಅಂಗಡಿಯವರು ಸಿಮ್ ಕಾರ್ಡ್ ಮಾರಾಟ ಮಾಡಲು ಸಾಧ್ಯವಿಲ್ಲ. ನೋಂದಣಿ ಇಲ್ಲದೆ ಅಂಗಡಿಯಲ್ಲಿ ಸಿಮ್ ಕಾರ್ಡ್‌ ಮಾರಾಟ ಮಾಡಿದರೆ, ಅದರ ಐಡಿಯನ್ನು ನಿರ್ಬಂಧಿಸಲಾಗುತ್ತದೆ.

ಸಿಮ್‌ ಕಳೆದುಕೊಂಡರೆ ಏನು ಮಾಡಬೇಕು?
ಸಿಮ್ ಕಾರ್ಡ್ ಕಳೆದುಕೊಂಡರೆ ಸಂಬಂಧಪಟ್ಟ ವ್ಯಕ್ತಿ ಪರಿಶೀಲನೆ ಪ್ರಕ್ರಿಯೆಯ ಮೂಲಕವೇ ಹೊಸ ಸಿಮ್‌ ಪಡೆಯಬೇಕು. ಸಿಮ್ ಕಾರ್ಡ್‌ಗಳನ್ನು ಮಾರಾಟ ಮಾಡಲು ಈ ನಿಯಮಗಳನ್ನು ಕಟ್ಟುನಿಟ್ಟಾಗಿ ಅನುಸರಿಸಲು ಜಿಯೋ, ಏರ್ಟೆಲ್, ವಿ, ಬಿಎಸ್​ಎನ್​ಎಲ್​ಗೆ ನಿರ್ದೇಶನ ನೀಡಲಾಗಿದೆ.

andolanait

Recent Posts

ಹೋಟೆಲ್,ರೆಸ್ಟೋರೆಂಟ್‌ಗಳ ಮೇಲೆ ಮುಂದುವರೆದ ದಾಳಿ

ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…

5 hours ago

ನಂ.ಗೂಡು | ಮತ್ತೆ ಕಳಚಿ ಬೀಳುತ್ತಿರುವ ಸೇತುವೆಯ ಸೀಲಿಂಗ್ ಕಾಂಕ್ರೀಟ್

ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…

7 hours ago

ರಾವಣನ ಪಾತ್ರವನ್ನ ನನಗಿಂತ ಉತ್ತಮವಾಗಿ ಯಾರೂ ಮಾಡಲು ಸಾಧ್ಯವಿಲ್ಲ : ಯಶ್

ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…

8 hours ago

ರಾಜ್ಯಗಳಿಗೆ ನೀಡುವ ವಿಪತ್ತು ಪರಿಹಾರದಲ್ಲೂ ಕೇಂದ್ರದಿಂದ ವಂಚನೆ : ಸಿಎಜಿ ವರದಿ

ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…

8 hours ago

ಶಾಸಕರ ಭರವಸೆ ಬಳಿಕ ಪ್ರತಿಭಟನೆ ಹಿಂಪಡೆತ : ಮೃತರ ಕುಟುಂಬಕ್ಕೆ ತಲಾ ₹15 ಲಕ್ಷ ಪರಿಹಾರ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…

11 hours ago

ವಾರಣಾಸಿ ಏರ್‌ಫೋರ್ಟ್‌ | ಶಸ್ತ್ರಾಸ್ತ್ರ ತಪಾಸಣೆ ವೇಳೆ ಆಕಸ್ಮಿಕ ಗುಂಡಿನ ದಾಳಿ ; ಇಬ್ಬರಿಗೆ ಗಾಯ

ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…

12 hours ago