ರಾಜ್ಯ

ಕಾರಣವಿಲ್ಲದೆ ರಸ್ತೆಯಲ್ಲಿ ವಾಹನ ತಡೆಯುವಂತಿಲ್ಲ : ಪೊಲೀಸ್‌ ಇಲಾಖೆ ಹೊಸ ಮಾರ್ಗಸೂಚಿ ಪ್ರಕಟ

ಬೆಂಗಳೂರು : ಮಂಡ್ಯದಲ್ಲಿ ಸಂಚಾರಿ ಪೊಲೀಸರ ವಾಹನ ತಪಾಸಣೆ ವೇಳೆ ಸಂಭವಿಸಿದ ಅಪಘಾತದಲ್ಲಿ 3 ವರ್ಷದ ಮಗು ಸಾವನ್ನಪ್ಪಿದ ಘಟನೆ ಬೆನ್ನಲ್ಲೇ ರಾಜ್ಯ ಪೊಲೀಸ್ ಇಲಾಖೆ ಎಚ್ಚೆತ್ತಿದೆ. ಸಕಾರಣವಿಲ್ಲದೆ ವಾಹನಗಳನ್ನು ತಡೆದು ತಪಾಸಣೆ ನಡೆಸಬಾರದೆಂಬ ಅಂಶವನ್ನೊಳಗೊಂಡ ಹೊಸ ಮಾರ್ಗಸೂಚಿ ಹೊರಡಿಸಿದೆ.

ವಾಹನ ತಪಾಸಣೆ ಸಂದರ್ಭದಲ್ಲಿ ಪೊಲೀಸ್ ಇಲಾಖೆ ಕೈಗೊಳ್ಳಬೇಕಾದ ಸುರಕ್ಷತಾ ಕ್ರಮಗಳನ್ನು ಉಲ್ಲೇಖಿಸಿದೆ. ಮಂಡ್ಯ ದುರ್ಘಟನೆ ಭವಿಷ್ಯದಲ್ಲಿ ಮರುಕಳಿಸದಂತೆ ತಡೆಯುವ ನಿಟ್ಟಿನಲ್ಲಿ ರಾಜ್ಯ ಪೊಲೀಸ್‌ ಮಹಾನಿರ್ದೇಶಕ ಡಾ. ಎಂ. ಎಸ್. ಸಲೀಂ ಮಾರ್ಗಸೂಚಿ ಹೊರಡಿಸಿದ್ದಾರೆ.

ವೇಗವಾಗಿ ಚಲಾಯಿಸಿಕೊಂಡು ಹಿಡಿಯಲು ಬರುವ ವಾಹನ ಸವಾರರನ್ನು ಬೆನ್ನಟ್ಟುವುದು ಬೇಡ, ಬದಲಾಗಿ ಆ ವಾಹನಗಳ ನೋಂದಣಿ ಸಂಖ್ಯೆ ಗುರುತಿಸಿ ಜಿಲ್ಲಾ ಪೊಲೀಸ್ ಠಾಣಾ ಸರಹದ್ದುಗಳ ವಿವಿಧ ನಿಯಂತ್ರಣ ಕೋಣೆಗಳಿಗೆ ಮಾಹಿತಿ ರವಾನಿಸುವ ಮೂಲಕ ವಾಹನ ಸವಾರರನ್ನು ಪತ್ತೆಹಚ್ಚಿ ಪ್ರಕರಣ ದಾಖಲಿಸಬೇಕು ಎಂದು ಸೂಚಿಸಿದೆ.

ಮಾರ್ಗಸೂಚಿ ವಿವರ

ಸಕಾರಣವಿಲ್ಲದೆ ದಾಖಲೆ ಪರೀಕ್ಷೆಗೆ ವಾಹನ ತಡೆಯಬಾರದು
• ಕಣ್ಣಿಗೆ ಕಾಣುವ ಸಂಚಾರ ನಿಯಮ ಉಲ್ಲಂಘನೆ ಗುರಿ ಇರಲಿ
• ಅಂತಹ ವಾಹನಗಳನ್ನು ತಡೆದು ಪ್ರಕರಣಗಳನ್ನು ದಾಖಲಿಸಿ
• ಈ ವೇಳೆ ಹೈವೇನಲ್ಲಿ ಜಿಗ್ ಜಾಗ್ ಮಾದರಿ ಬ್ಯಾರಿಕೇಡ್ ಬೇಡ
ರಸ್ತೆಯಲ್ಲಿ ದಿಢೀರ್ ಅಡ್ಡ ಹೋಗಿ ವಾಹನಗಳನ್ನು ನಿಲ್ಲಿಸದಿರಿ
• ದ್ವಿಚಕ್ರ ವಾಹನ ಹಿಂಬದಿ ಸವಾರನನ್ನು ಎಳೆಯಬಾರದು
• ಬೈಕ್, ಸ್ಕೂಟರ್‌ಗಳ ಕೀಲಿ ಕೈ ಕಿತ್ತುಕೊಂಡು ಹೋಗಬಾರದು

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಸಾಂಘಿಕ ಪ್ರದರ್ಶನದಿಂದ ಭಾರತದ ಮುಡಿಗೆ ಟಿ-೨೦ ವಿಶ್ವಕಪ್

ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಟಿ-೨೦ ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಭಾರತ ತಂಡದ ಸಾಂಘಿಕ ಪ್ರದರ್ಶನದಿಂದ ನ್ಯೂಜಿಲೆಂಡ್…

3 hours ago

ಓದುಗರ ಪತ್ರ: ಅನುಭವಿ ಮೌಲ್ಯಮಾಪಕರಿಗೆ ಆದ್ಯತೆ ನೀಡಿ

ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳ ಜೀವನದ ಪ್ರಮುಖ ಘಟ್ಟವಾಗಿದೆ. ವಿದ್ಯಾರ್ಥಿಗಳು ವರ್ಷವಿಡೀ ಶ್ರದ್ಧೆಯಿಂದ ಓದಿ ಪರೀಕ್ಷೆ ಬರೆದರೂ ಪ್ರತಿ ವರ್ಷವೂ…

4 hours ago

ಓದುಗರ ಪತ್ರ: ಆಟೋ ಚಾಲಕರಿಂದ ಅರವಟ್ಟಿಗೆ ಸೌಲಭ್ಯ

ಬೇಸಿಗೆ ಆರಂಭವಾಗುತ್ತಿದ್ದಂತೆಯೇ ಬಿಸಿಲಿನ ತಾಪ ಹೆಚ್ಚಾಗಿ ಜನರು ಕುಡಿಯುವ ನೀರಿಗಾಗಿ ಪರದಾಡುವ ಪರಿಸ್ಥಿತಿ ಉಂಟಾಗುತ್ತದೆ. ಇಂತಹ ಸಂದರ್ಭದಲ್ಲಿ ಮೈಸೂರಿನ ರಾಮಸ್ವಾಮಿ…

4 hours ago

ಓದುಗರ ಪತ್ರ: ಯುದ್ಧ: ಎಂಎಲ್‌ಸಿಗೆ ಸ್ಪಂದಿಸದ ಕೇಂದ್ರ ಸರ್ಕಾರ?

ಇಸ್ರೇಲ್- ಅಮೆರಿಕ ಹಾಗೂ ಇರಾನ್ ನಡುವಿನ ಯುದ್ಧ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದೆ. ಭಾರತದಿಂದ ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಿಂದ ಕಾರ್ಯನಿಮಿತ್ತ…

4 hours ago

ಪಂಜುಗಂಗೊಳ್ಳಿ ಅವರ ವಾರದ ಅಂಕಣ: ಸ್ಲಮ್ ವಾಸಿಗಳಿಗೆ ಬದುಕು ಕಟ್ಟಿ ಕೊಟ್ಟ ಆರ್ಕಿಟೆಕ್ಟ್‌

ಕೊಳೆಗೇರಿಗಳ ೨೭,೦೦೦ ಮನೆಗಳಿಗೆ ಶೌಚಾಲಯ ಸೌಲಭ್ಯ ಪೂನಾದ ಇಂದಿರಾ ವಸಾಹತ್ ಎಂಬ ಪ್ರದೇಶದ ಒಂದು ಸ್ಲಮ್ಮಿನಲ್ಲಿ ವಾಸಿಸುವ ಲತಾ ರತನ್…

4 hours ago

ಮರಿಗಳೊಂದಿಗೆ ಹುಲಿ ಕಂಡು ಪುಳಕಿತರಾದ ಪ್ರವಾಸಿಗರು

ಮಹೇಂದ್ರ ಹಸಗೂಲಿ ತಾಯಿ ಹುಲಿ ನಾಪತ್ತೆಯಾಗಿದ್ದರಿಂದ ಮರಿಗಳನ್ನು ಪಾಲನೆ ಮಾಡಿದ್ದ ಅರಣ್ಯ ಇಲಾಖೆ  ಗುಂಡ್ಲುಪೇಟೆ: ಬಂಡೀಪುರದ ಸಫಾರಿಗೆ ಹೋಗಿದ್ದ ಪ್ರವಾಸಿಗರು…

4 hours ago