ರಾಜ್ಯ

ಕಾರಣವಿಲ್ಲದೆ ರಸ್ತೆಯಲ್ಲಿ ವಾಹನ ತಡೆಯುವಂತಿಲ್ಲ : ಪೊಲೀಸ್‌ ಇಲಾಖೆ ಹೊಸ ಮಾರ್ಗಸೂಚಿ ಪ್ರಕಟ

ಬೆಂಗಳೂರು : ಮಂಡ್ಯದಲ್ಲಿ ಸಂಚಾರಿ ಪೊಲೀಸರ ವಾಹನ ತಪಾಸಣೆ ವೇಳೆ ಸಂಭವಿಸಿದ ಅಪಘಾತದಲ್ಲಿ 3 ವರ್ಷದ ಮಗು ಸಾವನ್ನಪ್ಪಿದ ಘಟನೆ ಬೆನ್ನಲ್ಲೇ ರಾಜ್ಯ ಪೊಲೀಸ್ ಇಲಾಖೆ ಎಚ್ಚೆತ್ತಿದೆ. ಸಕಾರಣವಿಲ್ಲದೆ ವಾಹನಗಳನ್ನು ತಡೆದು ತಪಾಸಣೆ ನಡೆಸಬಾರದೆಂಬ ಅಂಶವನ್ನೊಳಗೊಂಡ ಹೊಸ ಮಾರ್ಗಸೂಚಿ ಹೊರಡಿಸಿದೆ.

ವಾಹನ ತಪಾಸಣೆ ಸಂದರ್ಭದಲ್ಲಿ ಪೊಲೀಸ್ ಇಲಾಖೆ ಕೈಗೊಳ್ಳಬೇಕಾದ ಸುರಕ್ಷತಾ ಕ್ರಮಗಳನ್ನು ಉಲ್ಲೇಖಿಸಿದೆ. ಮಂಡ್ಯ ದುರ್ಘಟನೆ ಭವಿಷ್ಯದಲ್ಲಿ ಮರುಕಳಿಸದಂತೆ ತಡೆಯುವ ನಿಟ್ಟಿನಲ್ಲಿ ರಾಜ್ಯ ಪೊಲೀಸ್‌ ಮಹಾನಿರ್ದೇಶಕ ಡಾ. ಎಂ. ಎಸ್. ಸಲೀಂ ಮಾರ್ಗಸೂಚಿ ಹೊರಡಿಸಿದ್ದಾರೆ.

ವೇಗವಾಗಿ ಚಲಾಯಿಸಿಕೊಂಡು ಹಿಡಿಯಲು ಬರುವ ವಾಹನ ಸವಾರರನ್ನು ಬೆನ್ನಟ್ಟುವುದು ಬೇಡ, ಬದಲಾಗಿ ಆ ವಾಹನಗಳ ನೋಂದಣಿ ಸಂಖ್ಯೆ ಗುರುತಿಸಿ ಜಿಲ್ಲಾ ಪೊಲೀಸ್ ಠಾಣಾ ಸರಹದ್ದುಗಳ ವಿವಿಧ ನಿಯಂತ್ರಣ ಕೋಣೆಗಳಿಗೆ ಮಾಹಿತಿ ರವಾನಿಸುವ ಮೂಲಕ ವಾಹನ ಸವಾರರನ್ನು ಪತ್ತೆಹಚ್ಚಿ ಪ್ರಕರಣ ದಾಖಲಿಸಬೇಕು ಎಂದು ಸೂಚಿಸಿದೆ.

ಮಾರ್ಗಸೂಚಿ ವಿವರ

ಸಕಾರಣವಿಲ್ಲದೆ ದಾಖಲೆ ಪರೀಕ್ಷೆಗೆ ವಾಹನ ತಡೆಯಬಾರದು
• ಕಣ್ಣಿಗೆ ಕಾಣುವ ಸಂಚಾರ ನಿಯಮ ಉಲ್ಲಂಘನೆ ಗುರಿ ಇರಲಿ
• ಅಂತಹ ವಾಹನಗಳನ್ನು ತಡೆದು ಪ್ರಕರಣಗಳನ್ನು ದಾಖಲಿಸಿ
• ಈ ವೇಳೆ ಹೈವೇನಲ್ಲಿ ಜಿಗ್ ಜಾಗ್ ಮಾದರಿ ಬ್ಯಾರಿಕೇಡ್ ಬೇಡ
ರಸ್ತೆಯಲ್ಲಿ ದಿಢೀರ್ ಅಡ್ಡ ಹೋಗಿ ವಾಹನಗಳನ್ನು ನಿಲ್ಲಿಸದಿರಿ
• ದ್ವಿಚಕ್ರ ವಾಹನ ಹಿಂಬದಿ ಸವಾರನನ್ನು ಎಳೆಯಬಾರದು
• ಬೈಕ್, ಸ್ಕೂಟರ್‌ಗಳ ಕೀಲಿ ಕೈ ಕಿತ್ತುಕೊಂಡು ಹೋಗಬಾರದು

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮೇಕೆ.. ಡಿಕೆ !

ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…

11 hours ago

ಓದುಗರ ಪತ್ರ: ಮಂತ್ರಾಲಯ ಮಠದ ಕಾರ್ಯ ಜನಮೆಚ್ಚುವಂತಹದ್ದು

ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…

11 hours ago

ಓದುಗರ ಪತ್ರ: ಕಾವೇರಿ: ಶಾಶ್ವತ ಪರಿಹಾರ ಅಗತ್ಯ

ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…

11 hours ago

ಕಾಯಕಲ್ಪಕ್ಕೆ ಕಾದಿವೆ ನಿರ್ಲಕ್ಷಿತ ಸರ್ಕಾರಿ ಆಸ್ತಿಗಳು

ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…

12 hours ago

ಮೀಸಲಾತಿ ಸೌಲಭ್ಯಕ್ಕೆ ವಿರೋಧವೇಕೆ?

ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…

12 hours ago

ಬಿರುಕು ಬಿಡುತ್ತಿರುವ ಕೆರೆ ಕೋಡಿಯ ಗೋಡೆ

ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…

15 hours ago