ರಾಜ್ಯ

ಕಾರಣವಿಲ್ಲದೆ ರಸ್ತೆಯಲ್ಲಿ ವಾಹನ ತಡೆಯುವಂತಿಲ್ಲ : ಪೊಲೀಸ್‌ ಇಲಾಖೆ ಹೊಸ ಮಾರ್ಗಸೂಚಿ ಪ್ರಕಟ

ಬೆಂಗಳೂರು : ಮಂಡ್ಯದಲ್ಲಿ ಸಂಚಾರಿ ಪೊಲೀಸರ ವಾಹನ ತಪಾಸಣೆ ವೇಳೆ ಸಂಭವಿಸಿದ ಅಪಘಾತದಲ್ಲಿ 3 ವರ್ಷದ ಮಗು ಸಾವನ್ನಪ್ಪಿದ ಘಟನೆ ಬೆನ್ನಲ್ಲೇ ರಾಜ್ಯ ಪೊಲೀಸ್ ಇಲಾಖೆ ಎಚ್ಚೆತ್ತಿದೆ. ಸಕಾರಣವಿಲ್ಲದೆ ವಾಹನಗಳನ್ನು ತಡೆದು ತಪಾಸಣೆ ನಡೆಸಬಾರದೆಂಬ ಅಂಶವನ್ನೊಳಗೊಂಡ ಹೊಸ ಮಾರ್ಗಸೂಚಿ ಹೊರಡಿಸಿದೆ.

ವಾಹನ ತಪಾಸಣೆ ಸಂದರ್ಭದಲ್ಲಿ ಪೊಲೀಸ್ ಇಲಾಖೆ ಕೈಗೊಳ್ಳಬೇಕಾದ ಸುರಕ್ಷತಾ ಕ್ರಮಗಳನ್ನು ಉಲ್ಲೇಖಿಸಿದೆ. ಮಂಡ್ಯ ದುರ್ಘಟನೆ ಭವಿಷ್ಯದಲ್ಲಿ ಮರುಕಳಿಸದಂತೆ ತಡೆಯುವ ನಿಟ್ಟಿನಲ್ಲಿ ರಾಜ್ಯ ಪೊಲೀಸ್‌ ಮಹಾನಿರ್ದೇಶಕ ಡಾ. ಎಂ. ಎಸ್. ಸಲೀಂ ಮಾರ್ಗಸೂಚಿ ಹೊರಡಿಸಿದ್ದಾರೆ.

ವೇಗವಾಗಿ ಚಲಾಯಿಸಿಕೊಂಡು ಹಿಡಿಯಲು ಬರುವ ವಾಹನ ಸವಾರರನ್ನು ಬೆನ್ನಟ್ಟುವುದು ಬೇಡ, ಬದಲಾಗಿ ಆ ವಾಹನಗಳ ನೋಂದಣಿ ಸಂಖ್ಯೆ ಗುರುತಿಸಿ ಜಿಲ್ಲಾ ಪೊಲೀಸ್ ಠಾಣಾ ಸರಹದ್ದುಗಳ ವಿವಿಧ ನಿಯಂತ್ರಣ ಕೋಣೆಗಳಿಗೆ ಮಾಹಿತಿ ರವಾನಿಸುವ ಮೂಲಕ ವಾಹನ ಸವಾರರನ್ನು ಪತ್ತೆಹಚ್ಚಿ ಪ್ರಕರಣ ದಾಖಲಿಸಬೇಕು ಎಂದು ಸೂಚಿಸಿದೆ.

ಮಾರ್ಗಸೂಚಿ ವಿವರ

ಸಕಾರಣವಿಲ್ಲದೆ ದಾಖಲೆ ಪರೀಕ್ಷೆಗೆ ವಾಹನ ತಡೆಯಬಾರದು
• ಕಣ್ಣಿಗೆ ಕಾಣುವ ಸಂಚಾರ ನಿಯಮ ಉಲ್ಲಂಘನೆ ಗುರಿ ಇರಲಿ
• ಅಂತಹ ವಾಹನಗಳನ್ನು ತಡೆದು ಪ್ರಕರಣಗಳನ್ನು ದಾಖಲಿಸಿ
• ಈ ವೇಳೆ ಹೈವೇನಲ್ಲಿ ಜಿಗ್ ಜಾಗ್ ಮಾದರಿ ಬ್ಯಾರಿಕೇಡ್ ಬೇಡ
ರಸ್ತೆಯಲ್ಲಿ ದಿಢೀರ್ ಅಡ್ಡ ಹೋಗಿ ವಾಹನಗಳನ್ನು ನಿಲ್ಲಿಸದಿರಿ
• ದ್ವಿಚಕ್ರ ವಾಹನ ಹಿಂಬದಿ ಸವಾರನನ್ನು ಎಳೆಯಬಾರದು
• ಬೈಕ್, ಸ್ಕೂಟರ್‌ಗಳ ಕೀಲಿ ಕೈ ಕಿತ್ತುಕೊಂಡು ಹೋಗಬಾರದು

ಆಂದೋಲನ ಡೆಸ್ಕ್

Recent Posts

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

1 hour ago

ಸುಮ್ಮನಿದ್ದರೂ ಪರಿಣಮಿಸುವ ರಂಗಭೂಮಿಯ ಝೆನ್ ಗುರು – ಜಂಬೆ ಮೇಷ್ಟ್ರು

ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…

1 hour ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಪ್ರತಿ ಭಾರತೀಯರ ಎದೆ ಬಡಿತದ ಚೇತನ ಗಾಂಧೀಜಿ:  ಕೈಯಲ್ಲೊಂದು ಕೋಲು ಹಿಡಿದು, ದುಂಡು ಕನ್ನಡಕ ಧರಿಸಿ, ಸತ್ಯ, ಅಹಿಂಸೆಯ ಅಸದಿಂದ…

1 hour ago

ಸುಬ್ಬಮ್ಮ ಜೋಯಿಸ್ ಮೈಸೂರಿನಲ್ಲಿ ತ್ರಿವರ್ಣಧ್ವಜ ಹಾರಿಸಿದ್ದು

ಸೋನಿಯಾ ಎಮ್.ವಿ., ಉಪನ್ಯಾಸಕಿ, ಟೆರಿಷಿಯನ್ ಕಾಲೇಜ್ ಎಮ್. ಎನ್. ಜೋಯಿಸ್ ಮತ್ತು ಸುಬ್ಬಮ್ಮ ಜೋಯಿಸ್ ಮೈಸೂರಿನ ಸ್ವತಂತ್ರ ಹೋರಾಟಗಾರರಲ್ಲಿ ತಮ್ಮ…

2 hours ago

ಉರಿ ಉಂಡ ಕರ್ಪೂರ ಟಿ.ಎಸ್.ಸುಬ್ಬಣ್ಣ

ಪರಮಶಿವ ನಡುಬೆಟ್ಟ ಬ್ರಿಟಿಷರ ವಿರುದ್ಧ ಸ್ವಾತಂತ್ರ್ಯ ಹೋರಾಟಗಾರರು ಧ್ವಜ ಸತ್ಯಾಗ್ರಹ ಕಾರ್ಯ ಕ್ರಮವನ್ನು ಹಮ್ಮಿ ಕೊಂಡಿದ್ದರು. ಈ ಧ್ವಜ ಸತ್ಯಾಗ್ರಹವನ್ನು…

2 hours ago

ಬ್ಯಾರಿಸ್ಟರ್ ಏನೋ ಆದೆ ಆದರೆ ಆಮೇಲೆ?

ಗಾಂಧಿ ಮಹಾತ್ಮನ ಆತ್ಮಕಥೆಗೆ ಶತಮಾನೋತ್ಸವದ ಸಂದರ್ಭದಲ್ಲಿ ‘ಆಂದೋಲನ’ ದಿನಪತ್ರಿಕೆಯ ಗಾಂಧಿ ಅಭಿಯಾನ ನಾನು ಇಂಗ್ಲೆಂಡಿಗೆ ಹೋದ ಉದ್ದೇಶವನ್ನು ಬ್ಯಾರಿಸ್ಟರ್ ಆಗುವುದನ್ನು, ಕುರಿತು ನಾನು…

2 hours ago