ಮಂಡ್ಯ : ಅನ್ನ ಕೊಡಿ ಅಂದರೆ ಕಂಡ ಕಂಡಲ್ಲಿ ಕನ್ನ ಹಾಕಲಾಗುತ್ತಿದೆ. ಹೌಸಿಂಗ್ ಬೋರ್ಡ್ ಕಮಿಷನ್ ಬೋರ್ಡ್ ಆಗಿದೆ. ಮನಿ ಕೊಟ್ಟರೆ ಮನೆ ಎಂಬುದು ಹೌಸಿಂಗ್ ಬೋರ್ಡ್ನ ಹೊಸ ಸ್ಲೋಗನ್ ಆಗಿದೆ ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್.ಅಶೋಕ್ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ವಿಪಕ್ಷ ನಾಯಕ ಆರ್ ಅಶೋಕ್, ಈ ಕಾಂಗ್ರೆಸ್ ಸರ್ಕಾರ ಬಡವರಿಗೆ ಅನ್ನ ಕೊಡಿ ಅಂದ್ರೆ ಬಡವರ ಮನೆಗೆ ಕನ್ನ ಹಾಕಿದೆ . ಈ ಸರ್ಕಾರದಲ್ಲಿ ಹೌಸಿಂಗ್ ಬೋರ್ಡ್ ಕಲೆಕ್ಷನ್ ಬೋರ್ಡ್ ಆಗಿದೆ. ಮನಿ ಕೊಟ್ರೆ ಮನೆ ಎಂಬ ಹೊಸ ಸ್ಲೋಗನ್ ಬಿಟ್ಟಿದ್ದಾರೆ. ವಸತಿ ಇಲಾಖೆಯಲ್ಲಿ ರಕ್ತ ಹೀರುವ ಜಿಗಣೆಗಳು ಸೇರಿಕೊಂಡಿದೆ. ಬಡವರಿಗೆ ಮನೆ ನೀಡುವ ಬದಲು ಸೇಲ್ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
ಇದನ್ನೂ ಓದಿ: ಹೈಕಮಾಂಡ್ಗೆ ಕಪ್ಪ ಸಲ್ಲಿಸಲು ರಾಜ್ಯ ಸರ್ಕಾರ ಲೂಟಿಗೆ ಇಳಿದಿದೆ: ಪ್ರತಿಪಕ್ಷ ನಾಯಕ ಆರ್.ಅಶೋಕ್
ಅಬಕಾರಿ, ವಾಲ್ಮೀಕಿ ನಿಗಮದ ಬಳಿಕ ವಸತಿ ಇಲಾಖೆಯ ಭ್ರಷ್ಟಾಚಾರ ಬಯಲಿಗೆ ಬಂದಿದೆ. “ಮನೆಗಾಗಿ ಕಾಸು” ವಿಷಯ ಬಹಳ ಚರ್ಚಿತವಾಗುತ್ತಿದೆ. ಕಾಂಗ್ರೆಸ್ನವರೇ ಆದ ಶಾಸಕ ಬಿ.ಆರ್.ಪಾಟೀಲ್ ಅವರೇ ವಸತಿ ಇಲಾಖೆಯ ಭ್ರಷ್ಟಾಚಾರದ ಬಗ್ಗೆ ಗಂಭೀರ ಆರೋಪ ಮಾಡಿದ್ದಾರೆ. ವೈರಲ್ ಆಗಿರುವ ಆಡಿಯೋದಲ್ಲಿನ ಮಾತುಗಳು ತಮ್ಮದೇ ಎಂದು ಅವರೇ ಒಪ್ಪಿಕೊಂಡಿದ್ದಾರೆ. ಜತೆಗೆ, ಭ್ರಷ್ಟಾಚಾರದ ತನಿಖೆಗೂ ಒತ್ತಾಯಿಸಿದ್ದಾರೆ. ಹೀಗಾಗಿ ಇದರ ಸತ್ಯಾಸತ್ಯತೆ ಹೊರಬೀಳಬೇಕೆಂದು ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಆಗ್ರಹಿಸಿದರು.
ವಸತಿ ಇಲಾಖೆಯು ಉಳ್ಳವರು, ಸಾಹುಕಾರರಿಗೆ ಸೈಟ್ ಹಂಚಲು ಇರುವುದಲ್ಲ. ಬದಲಿಗೆ ಬಡವರು, ಮನೆ ಇಲ್ಲದವರು, ನಿರಾಶ್ರಿತರಿಗೆ ಸೂರು ಕೊಡುವುದು ಹೌಸಿಂಗ್ ಬೋರ್ಡ್ ಕೆಲಸ. ಹಿಂದುಳಿದವರಿಗೆ ಮನೆ ಸಿಗಬೇಕು. ಆದರೆ, ವಸತಿ ಇಲಾಖೆಯಲ್ಲಿ ರಕ್ತ ಹೀರುವ ಜಿಗಣೆಗಳು ಸೇರಿಕೊಂಡಿವೆ. ಬಡವರಿಗೆ ಮನೆಗಳನ್ನು ಕೊಡುವ ಬದಲು ಮಾರಾಟ ಮಾಡಲಾಗುತ್ತಿದೆ ಎಂದು ಭಾನುವಾರ ಸುದ್ದಿಗೋಷ್ಠಿಯಲ್ಲಿ ರಾಜ್ಯ ಸರಕಾರದ ವಿರುದ್ಧ ಹರಿಹಾಯ್ದರು.
ಟಿಪ್ಪು ವಂಶಜರಿಗೆ ಶೇ.15 ರಷ್ಟು ಮೀಸಲಾತಿ
ಬಳ್ಳಾರಿಯಲ್ಲಿ ಸಂಕಲ್ಪ ಸಮಾವೇಶ ಮಾಡಿದರು. ಆದರದು ಅಭಿವೃದ್ಧಿ ಸಂಕಲ್ಪ ಸಮಾವೇಶವಲ್ಲ. ಬಡವರನ್ನು ನಾಶ ಮಾಡುವ ಸಂಕಲ್ಪ ಸಮಾವೇಶವಾಗಿದೆ. ಮನೆ ಪಡೆಯಲು ಅರ್ಜಿ ಬೇಡ, ಮುಖ್ಯಮಂತ್ರಿ ಮರ್ಜಿ ಇದ್ದರಷ್ಟೇ ಸಾಕು. ಇದು ಶೇ.60ರಷ್ಟು ಕಮೀಷನ್ ಸರಕಾರ. ಬೇಕಿದ್ದರೆ ದಾಖಲೆಗಳನ್ನು ಕೊಡುತ್ತೇನೆ. ವಸತಿ ಇಲಾಖೆಯಲ್ಲೂ ಮುಸ್ಲಿಂರಿಗೆ ಶೇ.15 ರಷ್ಟು ಮೀಸಲು ತರಲಾಗಿದೆ. ಟಿಪ್ಪು ವಂಶಜರಿಗೆ ಶೇ.15 ರಷ್ಟು ಮೀಸಲಾತಿ. ನಮ್ಮವರಿಂದ ಶೇ. 60 ರಷ್ಟು ಕಮೀಷನ್. ಇದೇ ಸರಕಾರದ ಸಾಧನೆ ಎಂದು ಟೀಕಿಸಿದರು.
“ನಾನು ಬಾಯಿ ಬಿಟ್ಟರೆ ಈ ಸರಕಾರ 3 ದಿನ ಉಳಿಯೋದಿಲ್ಲ” ಎಂದು ಶಾಸಕ ಬಿ.ಆರ್.ಪಾಟೀಲ್ ಹೇಳಿದ್ದಾರೆ. ಸರಕಾರಕ್ಕೆ ಇದಕ್ಕಿಂತಲೂ ಛೀಮಾರಿ ಬೇಕೆ? ಸರಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ. ಇವರಿಗೆ ಸರಕಾರ ನಡೆಸುವ ನೈತಿಕತೆ ಎಲ್ಲಿದೆ? ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಗೆ ತಾಕತ್ತಿದ್ದರೆ ಸರಕಾರದ ವಿರುದ್ಧ ಗಂಭೀರ ಆರೋಪ ಮಾಡಿರುವ ಪಾಟೀಲರ ವಿರುದ್ಧ ಕ್ರಮ ಕೈಗೊಳ್ಳಲಿ. ಇಲ್ಲವೇ ತಾವೇ ರಾಜೀನಾಮೆ ನೀಡಲಿ ಎಂದು ಸವಾಲು ಹಾಕಿದರು. ನಮ್ಮ ಸರಕಾರದ ಬಗ್ಗೆ 40% ಕಮೀಷನ್ ಸರಕಾರ ಎಂದು ಆರೋಪಿಸಿದ್ದ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ 3 ತಿಂಗಳಲ್ಲಿ ನಮ್ಮನ್ನೆಲ್ಲಾ ಜೈಲಿಗೆ ಹಾಕುತ್ತೇನೆ ಎಂದಿದ್ದರು. ಈಗ ಸರಕಾರ ಬಂದು 2 ವರ್ಷವಾಗಿದೆ. ಏನು ಮಾಡಿದ್ದಾರೆ? ಶೇ.60 ರಷ್ಟು ಕಮಿಷನ್ ದಂಧೆಯಲ್ಲಿ ಮುಳುಗಿದ್ದಾರೆ ಎಂದು ಆರೋಪಿಸಿದರು.
ಬಿಹಾರ ಚುನಾವಣೆಗಾಗಿ ಕರ್ನಾಟಕದಲ್ಲಿ ಕಲೆಕ್ಷನ್ ಮಾಡಲಾಗುತ್ತದೆ. ದೊಡ್ಡ ಮಟ್ಟದ ಭ್ರಷ್ಟಾಚಾರಕ್ಕೆ ರಾಜ್ಯದ ಕಾಂಗ್ರೆಸ್ ಸರಕಾರ ಮುಂದಾಗಿದೆ. ಗ್ಯಾರಂಟಿಗಳಿಗೂ ಗ್ಯಾರಂಟಿ ಇಲ್ಲ. ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಬೆಲೆ ಏರಿಕೆ ಮಾಡಲಾಗುತ್ತಿದೆ. 6 ತಿಂಗಳಿಂದ ಹಾಲಿನ ಪ್ರೋತ್ಸಾಹಧನ ನೀಡಿಲ್ಲ. ಈ ಬಗ್ಗೆ ವಿಧಾನಸಭೆ ಅಧಿವೇಶನದಲ್ಲಿ ನಿಲುವಳಿ ಮಂಡಿಸಿ ಚರ್ಚಿಸಲಾಗುವುದು ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್.ಅಶೋಕ್ ತಿಳಿಸಿದರು.
ವಸತಿ ಯೋಜನೆ ಭ್ರಷ್ಟಾಚಾರದ ಬಗ್ಗೆ ರಾಜ್ಯ ಸರಕಾರ ಸಿಬಿಐ ತನಿಖೆ ನಡೆಸಬೇಕು. ಇಲ್ಲದಿದ್ದರೆ ಹೈಕೋರ್ಟ್ ನ್ಯಾಯಾಧೀಶರ ಅಧ್ಯಕ್ಷತೆಯಲ್ಲಿ ತನಿಖಾ ತಂಡ ರಚಿಸಬೇಕು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೂಕರಾಗಿರದೆ ಬಾಯಿ ಬಿಟ್ಟು ಮಾತನಾಡಬೇಕು. ಮಾತೆತ್ತಿದರೆ ಮೋದಿ ವಿರುದ್ಧ ಮಾತನಾಡುವವರು ಈಗ ತಮ್ಮದೇ ಸರಕಾರದ ಹುಳುಕಿನ ಬಗ್ಗೆಯೂ ಮಾತನಾಡಲಿ ಎಂದು ಆಗ್ರಹಿಸಿದರು.
ಮಂಡ್ಯದ ಬೀಡಿ ಕಾರ್ಮಿಕರ ಕಾಲನಿಯಲ್ಲಿ ತಮಿಳುಕಾಲನಿ ನಿವಾಸಿಗಳಿಗೆ ನಿರ್ಮಿಸಿದ ಮನೆಗಳಿಗೆ ಏಕಾಏಕಿ ಅಲ್ಪಸಂಖ್ಯಾತರನ್ನು ಕಳುಹಿಸಲಾಗಿದೆ. ಮನೆ ಖಾಲಿ ಇವೆ ಎಂದ ಮಾತ್ರಕ್ಕೆ ಯಾರು ಬೇಕಾದರೂ ಹೋಗಿ ಇರಬಹುದಾ? ಇದೆಲ್ಲವೂ ಜಿಲ್ಲೆಯ ಕಾಂಗ್ರೆಸ್ ಸಚಿವರು, ಶಾಸಕರ ಕುತಂತ್ರ. ಅವರ ಪ್ರೇರಣೆಯಿಂದಲೇ ಮುಸ್ಲಿಂರು ಖಾಲಿ ಮನೆಗಳನ್ನು ವಶಕ್ಕೆ ತೆಗೆದುಕೊಳ್ಳಲು ಮುಂದಾಗಿದ್ದಾರೆ ಎಂದು ಆರ್.ಅಶೋಕ್ ಆರೋಪಿಸಿದರು.
ಶಾಸಕರ ಅನುಮತಿ ಇಲ್ಲದೆ ಹೇಗೆ ಮುಸ್ಲಿಂರು ಖಾಲಿ ಮನೆಗಳಿಗೆ ಹೋಗಲು ಸಾಧ್ಯ? ಅಧಿಕಾರಿಗಳು, ಜಿಲ್ಲಾಡಳಿತ ಕತ್ತೆ ಕಾಯುತ್ತಿದೆಯೇ? ಈ ಘಟನೆಯನ್ನು ಜಿಲ್ಲಾಡಳಿತ, ರಾಜ್ಯ ಸರಕಾರ ಗಂಭೀರವಾಗಿ ಪರಿಗಣಿಸಿ, ಕ್ರಮ ವಹಿಸಬೇಕು. ಆಸ್ಪತ್ರೆಗೆ ಸೇರಿದ ತಮಿಳುಕಾಲನಿ ಜಾಗದ ಒತ್ತುವರಿಯನ್ನು ತೆರವುಗೊಳಿಸಬೇಕು. ಯಾವುದೇ ಪಕ್ಷದವರಾದರೂ ಇರಲಿ, ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.
ಕೆಆರ್ಎಸ್ನಲ್ಲಿ ರಾಜ್ಯ ಸರ್ಕಾರದಿಂದ ಕಾವೇರಿ ಆರತಿ ನಡೆಸುವ ವಿಚಾರವಾಗಿ ಮಾತನಾಡಿದ ಅವರು, ಕಾವೇರಿ ಆರತಿ ಹೆಸರಲ್ಲಿ ಇವರು ಕೀರ್ತಿ ಪಡೆಯೋಕೆ ಹೋಗುತ್ತಿದ್ದಾರೆ. ಸರ್ಕಾರ ಅಲ್ಲಿನ ಜನರ ಜೀವನ ಕಿತ್ತುಕೊಳ್ಳುವ ಕೆಲಸ ಮಾಡುತ್ತಿದೆ. ಅಲ್ಲಿ ಆರತಿಗೆ ನೂರು ಕೋಟಿ ಖರ್ಚು ಮಾಡ್ತಿರೋದು ಯಾಕೆ? ಇದರಲ್ಲಿ ಕಾಂಗ್ರೆಸ್ ಖರ್ಚು ಮಾಡುವುದು 30 ರಿಂದ 40 ಕೋಟಿ ರೂ. ಅಷ್ಟೇ. ಇನ್ನುಳಿದ ಹಣ ತಮ್ಮ ಜೇಬಿಗೆ ಹಾಕಿಕೊಳ್ಳುತ್ತಾರೆ. ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರ ವಿರುದ್ಧ ಕಾನೂನಾತ್ಮಕ ಹೋರಾಟ ಮಾಡುತ್ತೇವೆ. ಜೊತೆಗೆ ಸದನದೊಳಗೆ ಹಾಗೂ ಹೊರಗೆ ಹೋರಾಟ ಮಾಡುತ್ತಿದ್ದೇವೆ ಎಂದರು.
ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಹಾಗೂ ಪ್ರವಾಸಿಗರಿಗೆ ಉಪಯುಕ್ತವಾದ ಮಾಹಿತಿ ಕೊಡಲು ದಸರಾ-೨೦೨೬ರ…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್ ನೀರನ್ನು 3 ಸಾವಿರ…
ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…
ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…
ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…
ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…