ರಾಜ್ಯ

ಬೆಂಗಳೂರು-ಮುಂಬೈ ನಡುವೆ ಹೊಸ ಸೂಪರ್‌ಫಾಸ್ಟ್‌ ರೈಲು ಘೋಷಣೆ: ಸಂಸದ ತೇಜಸ್ವಿ ಸೂರ್ಯ ಮಾಹಿತಿ

ಬೆಂಗಳೂರು: ದೇಶದ ವಾಣಿಜ್ಯ ರಾಜಧಾನಿ ಮುಂಬೈ ಹಾಗೂ ಐಟಿಬಿಟಿ ರಾಜಧಾನಿ ಬೆಂಗಳೂರು ನಡುವೆ ಹೊಸ ಸೂಪರ್ ಫಾಸ್ಟ್ ರೈಲು ಸಂಚಾರಕ್ಕೆ ಕೇಂದ್ರ ರೈಲ್ವೆ ಇಲಾಖೆ ಹಸಿರು ನಿಶಾನೆ ತೋರಿದೆ.

ಇದರಿಂದಾಗಿ ಎರಡು ನಗರಗಳ ನಡುವೆ ಸೂಪರ್ ಫಾಸ್ಟ್ ರೈಲು ಬೇಕು ಎಂಬ ದಶಕಗಳ ಬೇಡಿಕೆಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‍ಡಿಎ ಸರ್ಕಾರ ಅಸ್ತು ಎಂದಿದೆ.

ಈ ಬಗ್ಗೆ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಅವರು ತಮ್ಮ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಬೆಂಗಳೂರು ಮತ್ತು ಮುಂಬೈ ನಡುವೆ ಶೀಘ್ರದಲ್ಲೇ ಸೂಪರ್ ಫಾಸ್ಟ್ ರೈಲನ್ನು ಪ್ರಾರಂಭಿಸಲಿದ್ದೇವೆ ಎಂದು ಘೋಷಣೆ ಮಾಡುತ್ತಿದ್ದಾರೆ. ಸದ್ಯ ಈ ಎರಡು ನಗರಗಳ ನಡುವೆ ಸೂಪರ್ ಫಾಸ್ಟ್ ಉದ್ಯಾನ್ ಎಕ್ಸ್‌ಪ್ರೆಸ್ ರೈಲು ಸಂಚರಿಸುತ್ತಿದ್ದು, ಪ್ರಯಾಣಿಕರ ಹಿತದೃಷ್ಟಿಯಿಂದ ರೈಲಿನ ಲೇನ್ ಸಾಮರ್ಥ್ಯವನ್ನು ಹೆಚ್ಚಿಸಲು ತೀರ್ಮಾನಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಇದನ್ನು ಓದಿ : ಮೈಸೂರು ದಸರಾಗೆ ಆಗಮಿಸುವ ನಾಡ ಜನತೆಗೆ ರೈಲ್ವೆ ಇಲಾಖೆಯಿಂದ ಬಿಗ್ ಗಿಫ್ಟ್

ಕಳೆದ 30 ವರ್ಷಗಳಿಂದ, ನಮ್ಮ ಎರಡು ಮಹಾ ನಗರಗಳನ್ನು ಒಂದೇ ಒಂದು ಸೂಪರ್ ಫಾಸ್ಟ್ ರೈಲು ಸಂಪರ್ಕಿಸುತ್ತಿತ್ತು. ಅದು – ಉದ್ಯಾನ್ ಎಕ್ಸ್‌ಪ್ರೆಸ್. ಆ ರೈಲು ಕೂಡ ತಲುಪಲು 24 ಗಂಟೆಗಳಿಗಿಂತ ಹೆಚ್ಚು ಸಮಯ ತೆಗೆದುಕೊಳ್ಳುತ್ತಿತ್ತು. ಇದರಿಂದಾಗಿ ಅನಿವಾರ್ಯವಾಗಿ ಜನರು ಬಸ್ ಅಥವಾ ವಿಮಾನಗಳನ್ನು ಬಳಸಬೇಕಾಗಿತ್ತು. ಇದರಿಂದ ಪ್ರಯಾಣ ದುಬಾರಿ ಮತ್ತು ಅನಾನುಕೂಲಕರವಾಗಿತ್ತು ಎಂದು ಹೇಳಿದ್ದಾರೆ. ‌

ಹೆಚ್ಚಿನ ರೈಲು ಸೇವೆಗಳನ್ನು ಪ್ರಾರಂಭಿಸಲು ಎರಡೂ ನಗರಗಳ ಜನರಿಂದ ನಿರಂತರ ಬೇಡಿಕೆ ಇತ್ತು. ಕಳೆದ ನಾಲ್ಕು ವರ್ಷಗಳಲ್ಲಿ ನಾನು ಸಂಸತ್ತಿನಲ್ಲಿ, ಸಾರ್ವಜನಿಕ ಲೆಕ್ಕಪತ್ರ ಸಮಿತಿ (ಪಿಎಸಿ) ಸಭೆಗಳಲ್ಲಿ, ರೈಲ್ವೆ ಮಂಡಳಿ ಅಧ್ಯಕ್ಷರೊಂದಿಗೆ ಮತ್ತು ರೈಲ್ವೆ ಸಚಿವರೊಂದಿಗೆ ಈ ವಿಷಯವನ್ನು ಹಲವು ಬಾರಿ ಪ್ರಸ್ತಾಪಿಸಿದ್ದೆ. ಬೆಂಗಳೂರು ಮತ್ತು ಮುಂಬೈನಂತಹ ಪ್ರಮುಖ ಆರ್ಥಿಕ ಕೇಂದ್ರಗಳು ಬಹಳ ಹಿಂದಿನಿಂದಲೂ ಒಂದಕ್ಕಿಂತ ಹೆಚ್ಚು ನೇರ ಸೂಪರ್ ಫಾಸ್ಟ್ ರೈಲುಗಳನ್ನು ಹೊಂದಿಲ್ಲ ಎಂಬುದು ದಿಗ್ಭಮೆಗೊಳಿಸುವ ಸಂಗತಿ ಎಂದು ಆಶ್ಚರ್ಯ ವ್ಯಕ್ತಪಡಿಸಿದ್ದಾರೆ.

ದೇಶಕ್ಕೆ ಹಲವು ಪ್ರಮುಖ ಭರವಸೆಗಳನ್ನು ಈಡೇರಿಸುತ್ತಿರುವಂತೆ, ನಮ ಕೇಂದ್ರ ರೈಲ್ವೆ ಸಚಿವರಾದ ಅಶ್ವಿನಿ ವೈಷ್ಣವ್ ಅವರು ಬೆಂಗಳೂರು ಮತ್ತು ಮುಂಬೈ ರೈಲು ನಿಲ್ದಾಣಗಳಲ್ಲಿ ಲೇನ್ ಸಾಮಥ್ರ್ಯವನ್ನು ಹೆಚ್ಚಿಸುವ ಮೂಲಕ ಹೆಚ್ಚಿನ ಸೂಪರ್ ಫಾಸ್ಟ್ ರೈಲುಗಳನ್ನು ಸಾಧ್ಯವಾಗಿಸಿದ್ದಾರೆ. ಇದಕ್ಕಾಗಿ ಸಚಿವ ವಿ. ಸೋಮಣ್ಣ ಅವರ ಬೆಂಬಲಕ್ಕೂ ತೇಜಸ್ವಿ ಸೂರ್ಯ ಧನ್ಯವಾದ ಹೇಳಿದ್ದಾರೆ.

ಮುಂಬರುವ ದಿನಗಳಲ್ಲಿ, ಎರಡು ನಗರಗಳ ನಡುವಿನ ರೈಲು ಪ್ರಯಾಣ ಹೆಚ್ಚಾಗಲಿದ್ದು, ಲಕ್ಷಾಂತರ ಜನರಿಗೆ ಇದರಿಂದ ಪ್ರಯೋಜನವಾಗುತ್ತದೆ ಎಂದು ಅವರು ತಿಳಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ರೈತರಿಗೆ ಗುಂಡು ಹೊಡೆಸಿದ್ದ ಬಿಜೆಪಿಗರಿಂದ ಕಾಂಗ್ರೆಸ್ ಪಾಠ ಕಲಿಯಬೇಕಿಲ್ಲ : ಸಚಿವೆ ಹೆಬ್ಬಾಳಕರ್‌

ಬೆಳಗಾವಿ : ಬಿಜೆಪಿ ನಾಯಕರಿಗೆ ರೈತರ ಮೇಲೆ ದಿಢೀರ್ ಪ್ರೀತಿ ಬಂದಿದೆ‌.‌ ಅವರು ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಲಿ, ಯಾರು…

19 mins ago

ಮೈಸೂರಿನಲ್ಲಿ 300 ಎಕರೆ ಜಮೀನಿನಲ್ಲಿ ಲೇಔಟ್‌ ನಿರ್ಮಾಣ: ಸಚಿವ ಭೈರತಿ ಸುರೇಶ್‌

ಬೆಳಗಾವಿ: ರಾಜಧಾನಿ ಬೆಂಗಳೂರನ್ನು ಹೊರತುಪಡಿಸಿದರೆ ಅತಿವೇಗವಾಗಿ ಬೆಳೆಯುತ್ತಿರುವ ಮೈಸೂರಿನಲ್ಲಿ ಸುಮಾರು 300 ಎಕರೆ ಜಮೀನಿನಲ್ಲಿ ಲೇಔಟ್ ನಿರ್ಮಾಣ ಮಾಡಿ ಸಾರ್ವಜನಿಕರಿಗೆ…

59 mins ago

ಋತುಚಕ್ರ ರಜೆ: ತಡೆಯಾಜ್ಞೆ ಮಾರ್ಪಡಿಸಿ ನಾಳೆಗೆ ವಿಚಾರಣೆ ಮುಂದೂಡಿಕೆ

ಬೆಂಗಳೂರು: ಮಹಿಳಾ ನೌಕರರಿಗೆ ಋತುಚಕ್ರದ ಸಮಯದಲ್ಲಿ ರಾಜ್ಯ ಸರ್ಕಾರ ನೀಡಿದ್ದ ರಜೆ ಆದೇಶಕ್ಕೆ ಹೈಕೋರ್ಟ್‌ ತಡೆಯಾಜ್ಞೆ ನೀಡಿತ್ತು. ಆದರೆ ಈ…

1 hour ago

482 ಎಕರೆ ಅರಣ್ಯ ಭೂಮಿ ಕಬಳಿಕೆ ಯತ್ನ: ಸಿಐಡಿ ತನಿಖೆ ಕೋರಿ ಸಿಎಂಗೆ ಪತ್ರ ಬರೆದ ಈಶ್ವರ್‌ ಖಂಡ್ರೆ

ಬೆಳಗಾವಿ:  532 ಎಕರೆ ಅರಣ್ಯ, ಸರ್ಕಾರಿ ಭೂಮಿ ಕಬಳಿಸಲು ನಕಲಿ ದಾಖಲೆ ಸಲ್ಲಿಸಿ ನ್ಯಾಯಾಲಯದಿಂದ ಆದೇಶ ಪಡೆದಿರುವ ವ್ಯಕ್ತಿಯ ಹಿಂದಿರುವವರ…

2 hours ago

ಟಾಕ್ಸಿಕ್‌ ಚಿತ್ರದ ಬಗ್ಗೆ ಬಿಗ್‌ ಅಪ್‌ಡೇಟ್‌ ಕೊಟ್ಟ ರಾಕಿಂಗ್‌ ಸ್ಟಾರ್‌ ಯಶ್‌

ರಾಕಿಂಗ್‌ ಸ್ಟಾರ್‌ ಯಶ್‌ ತಮ್ಮ ಬಹುನಿರೀಕ್ಷಿತ ಚಿತ್ರ ಟಾಕ್ಸಿಕ್‌ನ ಹೊಸ ಪೋಸ್ಟರ್‌ ಅನ್ನು ಬಿಡುಗಡೆ ಮಾಡುವ ಮೂಲಕ ಚಿತ್ರದ ಬಗ್ಗೆ…

2 hours ago

ಮೈಸೂರು: ಡ್ರಗ್ಸ್ ಮುಕ್ತ ಕರ್ನಾಟಕ ಅಭಿಯಾನ ಜಾಗೃತಿ ರಥಯಾತ್ರೆಗೆ ಚಾಲನೆ

ಮೈಸೂರು: ಡ್ರಗ್ಸ್‌ ಮುಕ್ತ ಕರ್ನಾಟಕ ಅಭಿಯಾನ ಜನಜಾಗೃತಿ ಆಂದೋಲನದ ರಥಯಾತ್ರೆಗೆ ಮೈಸೂರಿನಲ್ಲಿ ಇಂದು ಚಾಲನೆ ದೊರೆಯಿತು. ಮೈಸೂರು ನಗರದ ಜೆ.ಕೆ…

2 hours ago