tejaswi surya
ಬೆಂಗಳೂರು: ದೇಶದ ವಾಣಿಜ್ಯ ರಾಜಧಾನಿ ಮುಂಬೈ ಹಾಗೂ ಐಟಿಬಿಟಿ ರಾಜಧಾನಿ ಬೆಂಗಳೂರು ನಡುವೆ ಹೊಸ ಸೂಪರ್ ಫಾಸ್ಟ್ ರೈಲು ಸಂಚಾರಕ್ಕೆ ಕೇಂದ್ರ ರೈಲ್ವೆ ಇಲಾಖೆ ಹಸಿರು ನಿಶಾನೆ ತೋರಿದೆ.
ಇದರಿಂದಾಗಿ ಎರಡು ನಗರಗಳ ನಡುವೆ ಸೂಪರ್ ಫಾಸ್ಟ್ ರೈಲು ಬೇಕು ಎಂಬ ದಶಕಗಳ ಬೇಡಿಕೆಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ಡಿಎ ಸರ್ಕಾರ ಅಸ್ತು ಎಂದಿದೆ.
ಈ ಬಗ್ಗೆ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಅವರು ತಮ್ಮ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಬೆಂಗಳೂರು ಮತ್ತು ಮುಂಬೈ ನಡುವೆ ಶೀಘ್ರದಲ್ಲೇ ಸೂಪರ್ ಫಾಸ್ಟ್ ರೈಲನ್ನು ಪ್ರಾರಂಭಿಸಲಿದ್ದೇವೆ ಎಂದು ಘೋಷಣೆ ಮಾಡುತ್ತಿದ್ದಾರೆ. ಸದ್ಯ ಈ ಎರಡು ನಗರಗಳ ನಡುವೆ ಸೂಪರ್ ಫಾಸ್ಟ್ ಉದ್ಯಾನ್ ಎಕ್ಸ್ಪ್ರೆಸ್ ರೈಲು ಸಂಚರಿಸುತ್ತಿದ್ದು, ಪ್ರಯಾಣಿಕರ ಹಿತದೃಷ್ಟಿಯಿಂದ ರೈಲಿನ ಲೇನ್ ಸಾಮರ್ಥ್ಯವನ್ನು ಹೆಚ್ಚಿಸಲು ತೀರ್ಮಾನಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಇದನ್ನು ಓದಿ : ಮೈಸೂರು ದಸರಾಗೆ ಆಗಮಿಸುವ ನಾಡ ಜನತೆಗೆ ರೈಲ್ವೆ ಇಲಾಖೆಯಿಂದ ಬಿಗ್ ಗಿಫ್ಟ್
ಕಳೆದ 30 ವರ್ಷಗಳಿಂದ, ನಮ್ಮ ಎರಡು ಮಹಾ ನಗರಗಳನ್ನು ಒಂದೇ ಒಂದು ಸೂಪರ್ ಫಾಸ್ಟ್ ರೈಲು ಸಂಪರ್ಕಿಸುತ್ತಿತ್ತು. ಅದು – ಉದ್ಯಾನ್ ಎಕ್ಸ್ಪ್ರೆಸ್. ಆ ರೈಲು ಕೂಡ ತಲುಪಲು 24 ಗಂಟೆಗಳಿಗಿಂತ ಹೆಚ್ಚು ಸಮಯ ತೆಗೆದುಕೊಳ್ಳುತ್ತಿತ್ತು. ಇದರಿಂದಾಗಿ ಅನಿವಾರ್ಯವಾಗಿ ಜನರು ಬಸ್ ಅಥವಾ ವಿಮಾನಗಳನ್ನು ಬಳಸಬೇಕಾಗಿತ್ತು. ಇದರಿಂದ ಪ್ರಯಾಣ ದುಬಾರಿ ಮತ್ತು ಅನಾನುಕೂಲಕರವಾಗಿತ್ತು ಎಂದು ಹೇಳಿದ್ದಾರೆ.
ಹೆಚ್ಚಿನ ರೈಲು ಸೇವೆಗಳನ್ನು ಪ್ರಾರಂಭಿಸಲು ಎರಡೂ ನಗರಗಳ ಜನರಿಂದ ನಿರಂತರ ಬೇಡಿಕೆ ಇತ್ತು. ಕಳೆದ ನಾಲ್ಕು ವರ್ಷಗಳಲ್ಲಿ ನಾನು ಸಂಸತ್ತಿನಲ್ಲಿ, ಸಾರ್ವಜನಿಕ ಲೆಕ್ಕಪತ್ರ ಸಮಿತಿ (ಪಿಎಸಿ) ಸಭೆಗಳಲ್ಲಿ, ರೈಲ್ವೆ ಮಂಡಳಿ ಅಧ್ಯಕ್ಷರೊಂದಿಗೆ ಮತ್ತು ರೈಲ್ವೆ ಸಚಿವರೊಂದಿಗೆ ಈ ವಿಷಯವನ್ನು ಹಲವು ಬಾರಿ ಪ್ರಸ್ತಾಪಿಸಿದ್ದೆ. ಬೆಂಗಳೂರು ಮತ್ತು ಮುಂಬೈನಂತಹ ಪ್ರಮುಖ ಆರ್ಥಿಕ ಕೇಂದ್ರಗಳು ಬಹಳ ಹಿಂದಿನಿಂದಲೂ ಒಂದಕ್ಕಿಂತ ಹೆಚ್ಚು ನೇರ ಸೂಪರ್ ಫಾಸ್ಟ್ ರೈಲುಗಳನ್ನು ಹೊಂದಿಲ್ಲ ಎಂಬುದು ದಿಗ್ಭಮೆಗೊಳಿಸುವ ಸಂಗತಿ ಎಂದು ಆಶ್ಚರ್ಯ ವ್ಯಕ್ತಪಡಿಸಿದ್ದಾರೆ.
ದೇಶಕ್ಕೆ ಹಲವು ಪ್ರಮುಖ ಭರವಸೆಗಳನ್ನು ಈಡೇರಿಸುತ್ತಿರುವಂತೆ, ನಮ ಕೇಂದ್ರ ರೈಲ್ವೆ ಸಚಿವರಾದ ಅಶ್ವಿನಿ ವೈಷ್ಣವ್ ಅವರು ಬೆಂಗಳೂರು ಮತ್ತು ಮುಂಬೈ ರೈಲು ನಿಲ್ದಾಣಗಳಲ್ಲಿ ಲೇನ್ ಸಾಮಥ್ರ್ಯವನ್ನು ಹೆಚ್ಚಿಸುವ ಮೂಲಕ ಹೆಚ್ಚಿನ ಸೂಪರ್ ಫಾಸ್ಟ್ ರೈಲುಗಳನ್ನು ಸಾಧ್ಯವಾಗಿಸಿದ್ದಾರೆ. ಇದಕ್ಕಾಗಿ ಸಚಿವ ವಿ. ಸೋಮಣ್ಣ ಅವರ ಬೆಂಬಲಕ್ಕೂ ತೇಜಸ್ವಿ ಸೂರ್ಯ ಧನ್ಯವಾದ ಹೇಳಿದ್ದಾರೆ.
ಮುಂಬರುವ ದಿನಗಳಲ್ಲಿ, ಎರಡು ನಗರಗಳ ನಡುವಿನ ರೈಲು ಪ್ರಯಾಣ ಹೆಚ್ಚಾಗಲಿದ್ದು, ಲಕ್ಷಾಂತರ ಜನರಿಗೆ ಇದರಿಂದ ಪ್ರಯೋಜನವಾಗುತ್ತದೆ ಎಂದು ಅವರು ತಿಳಿಸಿದ್ದಾರೆ.
ಚಾಮರಾಜನಗರ : ಆರು ತಿಂಗಳ ಹೆಣ್ಣು ಮಗುವನ್ನು ಮಾರಾಟ ಮಾಡಿರುವ ಪ್ರಕರಣ ನಗರದಲ್ಲಿ ನಡೆದಿದ್ದು, ಈ ಸಂಬಂಧ ಪೋಷಕರು ಸೇರಿದಂತೆ…
ಹನೂರು : ಜಮೀನಿನಲ್ಲಿ ಹುರುಳಿ ಫಸಲನ್ನು ಹಸು ಮೇಯ್ದಿದ್ದದನ್ನು ಪ್ರಶ್ನೆಸಿದ್ದಕ್ಕೆ ವೃದ್ಧೆಯನ್ನು ಮರಕ್ಕೆ ಕಟ್ಟಿಹಾಕಿ ಹಲ್ಲೆ ನಡೆಸಿರುವ ಅಮಾನವೀಯ ಘಟನೆ…
ಹಾಸನ : ಮುಂದಿನ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಿಗೆ ಸಿದ್ಧತೆ ನಡೆಸುವ ಸಂದೇಶವನ್ನು ರಾಜ್ಯದ ಜನರಿಗೆ ತಲುಪಿಸುವ ಗುರಿಯೊಂದಿಗೆ ನಗರದಲ್ಲಿ ಆಯೋಜಿಸಿದ್ದ…
ಮಳವಳ್ಳಿ : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಹತ್ತುಕ್ಕೂ ಹೆಚ್ಚು ಮಂದಿ ತೀವ್ರವಾಗಿ ಗಾಯಗೊಂಡಿರುವ ಘಟನೆ ಹೊಸಹಳ್ಳಿ…
ನಂಜನಗೂಡು : ಶ್ರೀಕಂಠೇಶ್ವರ ದೇವಾಲಯದ ಆವರಣದಲ್ಲಿನ ಅನಧಿಕೃತ ಅಂಗಡಿಗಳನ್ನು ಇಂದು(ಜ.24) ಮತ್ತೋಮ್ಮೆ ತೆರವು ಗೊಳಿಸಲಾಯಿತು. ದೇವಾಲಯದ ನೂತನ ಕಾರ್ಯನಿರ್ವಾಹಕ ಅಧಿಕಾರ…
ಮುಂಬೈ : ಸೌದಿ ಅರೇಬಿಯಾದಿಂದ ಅಂತರರಾಷ್ಟ್ರೀಯ ಕೊರಿಯರ್ ಟರ್ಮಿನಲ್ನಲ್ಲಿ ಸಾಗಿಸುತ್ತಿದ್ದ ಗ್ರೈಂಡರ್ನಲ್ಲಿ ಬಚ್ಚಿಟ್ಟಿದ್ದ 2.89 ಕೋಟಿ ರೂ.ಮೌಲ್ಯದ ಚಿನ್ನವನ್ನು ಕಂದಾಯ…