ರಾಜ್ಯ

ಬೆಂಗಳೂರು-ಮುಂಬೈ ನಡುವೆ ಹೊಸ ಸೂಪರ್‌ಫಾಸ್ಟ್‌ ರೈಲು ಘೋಷಣೆ: ಸಂಸದ ತೇಜಸ್ವಿ ಸೂರ್ಯ ಮಾಹಿತಿ

ಬೆಂಗಳೂರು: ದೇಶದ ವಾಣಿಜ್ಯ ರಾಜಧಾನಿ ಮುಂಬೈ ಹಾಗೂ ಐಟಿಬಿಟಿ ರಾಜಧಾನಿ ಬೆಂಗಳೂರು ನಡುವೆ ಹೊಸ ಸೂಪರ್ ಫಾಸ್ಟ್ ರೈಲು ಸಂಚಾರಕ್ಕೆ ಕೇಂದ್ರ ರೈಲ್ವೆ ಇಲಾಖೆ ಹಸಿರು ನಿಶಾನೆ ತೋರಿದೆ.

ಇದರಿಂದಾಗಿ ಎರಡು ನಗರಗಳ ನಡುವೆ ಸೂಪರ್ ಫಾಸ್ಟ್ ರೈಲು ಬೇಕು ಎಂಬ ದಶಕಗಳ ಬೇಡಿಕೆಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‍ಡಿಎ ಸರ್ಕಾರ ಅಸ್ತು ಎಂದಿದೆ.

ಈ ಬಗ್ಗೆ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಅವರು ತಮ್ಮ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಬೆಂಗಳೂರು ಮತ್ತು ಮುಂಬೈ ನಡುವೆ ಶೀಘ್ರದಲ್ಲೇ ಸೂಪರ್ ಫಾಸ್ಟ್ ರೈಲನ್ನು ಪ್ರಾರಂಭಿಸಲಿದ್ದೇವೆ ಎಂದು ಘೋಷಣೆ ಮಾಡುತ್ತಿದ್ದಾರೆ. ಸದ್ಯ ಈ ಎರಡು ನಗರಗಳ ನಡುವೆ ಸೂಪರ್ ಫಾಸ್ಟ್ ಉದ್ಯಾನ್ ಎಕ್ಸ್‌ಪ್ರೆಸ್ ರೈಲು ಸಂಚರಿಸುತ್ತಿದ್ದು, ಪ್ರಯಾಣಿಕರ ಹಿತದೃಷ್ಟಿಯಿಂದ ರೈಲಿನ ಲೇನ್ ಸಾಮರ್ಥ್ಯವನ್ನು ಹೆಚ್ಚಿಸಲು ತೀರ್ಮಾನಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಇದನ್ನು ಓದಿ : ಮೈಸೂರು ದಸರಾಗೆ ಆಗಮಿಸುವ ನಾಡ ಜನತೆಗೆ ರೈಲ್ವೆ ಇಲಾಖೆಯಿಂದ ಬಿಗ್ ಗಿಫ್ಟ್

ಕಳೆದ 30 ವರ್ಷಗಳಿಂದ, ನಮ್ಮ ಎರಡು ಮಹಾ ನಗರಗಳನ್ನು ಒಂದೇ ಒಂದು ಸೂಪರ್ ಫಾಸ್ಟ್ ರೈಲು ಸಂಪರ್ಕಿಸುತ್ತಿತ್ತು. ಅದು – ಉದ್ಯಾನ್ ಎಕ್ಸ್‌ಪ್ರೆಸ್. ಆ ರೈಲು ಕೂಡ ತಲುಪಲು 24 ಗಂಟೆಗಳಿಗಿಂತ ಹೆಚ್ಚು ಸಮಯ ತೆಗೆದುಕೊಳ್ಳುತ್ತಿತ್ತು. ಇದರಿಂದಾಗಿ ಅನಿವಾರ್ಯವಾಗಿ ಜನರು ಬಸ್ ಅಥವಾ ವಿಮಾನಗಳನ್ನು ಬಳಸಬೇಕಾಗಿತ್ತು. ಇದರಿಂದ ಪ್ರಯಾಣ ದುಬಾರಿ ಮತ್ತು ಅನಾನುಕೂಲಕರವಾಗಿತ್ತು ಎಂದು ಹೇಳಿದ್ದಾರೆ. ‌

ಹೆಚ್ಚಿನ ರೈಲು ಸೇವೆಗಳನ್ನು ಪ್ರಾರಂಭಿಸಲು ಎರಡೂ ನಗರಗಳ ಜನರಿಂದ ನಿರಂತರ ಬೇಡಿಕೆ ಇತ್ತು. ಕಳೆದ ನಾಲ್ಕು ವರ್ಷಗಳಲ್ಲಿ ನಾನು ಸಂಸತ್ತಿನಲ್ಲಿ, ಸಾರ್ವಜನಿಕ ಲೆಕ್ಕಪತ್ರ ಸಮಿತಿ (ಪಿಎಸಿ) ಸಭೆಗಳಲ್ಲಿ, ರೈಲ್ವೆ ಮಂಡಳಿ ಅಧ್ಯಕ್ಷರೊಂದಿಗೆ ಮತ್ತು ರೈಲ್ವೆ ಸಚಿವರೊಂದಿಗೆ ಈ ವಿಷಯವನ್ನು ಹಲವು ಬಾರಿ ಪ್ರಸ್ತಾಪಿಸಿದ್ದೆ. ಬೆಂಗಳೂರು ಮತ್ತು ಮುಂಬೈನಂತಹ ಪ್ರಮುಖ ಆರ್ಥಿಕ ಕೇಂದ್ರಗಳು ಬಹಳ ಹಿಂದಿನಿಂದಲೂ ಒಂದಕ್ಕಿಂತ ಹೆಚ್ಚು ನೇರ ಸೂಪರ್ ಫಾಸ್ಟ್ ರೈಲುಗಳನ್ನು ಹೊಂದಿಲ್ಲ ಎಂಬುದು ದಿಗ್ಭಮೆಗೊಳಿಸುವ ಸಂಗತಿ ಎಂದು ಆಶ್ಚರ್ಯ ವ್ಯಕ್ತಪಡಿಸಿದ್ದಾರೆ.

ದೇಶಕ್ಕೆ ಹಲವು ಪ್ರಮುಖ ಭರವಸೆಗಳನ್ನು ಈಡೇರಿಸುತ್ತಿರುವಂತೆ, ನಮ ಕೇಂದ್ರ ರೈಲ್ವೆ ಸಚಿವರಾದ ಅಶ್ವಿನಿ ವೈಷ್ಣವ್ ಅವರು ಬೆಂಗಳೂರು ಮತ್ತು ಮುಂಬೈ ರೈಲು ನಿಲ್ದಾಣಗಳಲ್ಲಿ ಲೇನ್ ಸಾಮಥ್ರ್ಯವನ್ನು ಹೆಚ್ಚಿಸುವ ಮೂಲಕ ಹೆಚ್ಚಿನ ಸೂಪರ್ ಫಾಸ್ಟ್ ರೈಲುಗಳನ್ನು ಸಾಧ್ಯವಾಗಿಸಿದ್ದಾರೆ. ಇದಕ್ಕಾಗಿ ಸಚಿವ ವಿ. ಸೋಮಣ್ಣ ಅವರ ಬೆಂಬಲಕ್ಕೂ ತೇಜಸ್ವಿ ಸೂರ್ಯ ಧನ್ಯವಾದ ಹೇಳಿದ್ದಾರೆ.

ಮುಂಬರುವ ದಿನಗಳಲ್ಲಿ, ಎರಡು ನಗರಗಳ ನಡುವಿನ ರೈಲು ಪ್ರಯಾಣ ಹೆಚ್ಚಾಗಲಿದ್ದು, ಲಕ್ಷಾಂತರ ಜನರಿಗೆ ಇದರಿಂದ ಪ್ರಯೋಜನವಾಗುತ್ತದೆ ಎಂದು ಅವರು ತಿಳಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಡಿಕೆಶಿ ಸಂಪುಟದಲ್ಲಿ ಡಾ.ಎಚ್‌ಸಿಎಂ ಕೈ ಬಿಟ್ಟಿದ್ದಕ್ಕೆ ದಸಂಸ ತೀವ್ರ ಅಸಮಾಧಾನ

ಮೈಸೂರು:  ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ   ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…

4 hours ago

ನನ್ನ ಗೆಲುವು ಜೆಡಿಎಸ್ ಭಿಕ್ಷೆ ಅಲ್ಲ, ನಾಗಮಂಗಲ ಜನರ ಭಿಕ್ಷೆ : ಸಚಿವ ಚಲುವರಾಯಸ್ವಾಮಿ

ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…

5 hours ago

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

16 hours ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

16 hours ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

16 hours ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

16 hours ago