dinesh gundurao
ಬೆಳಗಾವಿ : ರಾಜ್ಯದಲ್ಲಿ ಹೊಸ ತಾಲ್ಲೂಕುಗಳಲ್ಲಿ ಸದ್ಯಕ್ಕೆ ತಾಲ್ಲೂಕು ಮಟ್ಟದ ಆಸ್ಪತ್ರೆಗಳ ಮಂಜೂರಾತಿ ಇಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ವಿಧಾನಸಭೆಗೆ ತಿಳಿಸಿದರು. ಪ್ರಶ್ನೋತ್ತರ ವೇಳೆಯಲ್ಲಿ ಶಾಸಕ ಡಾ.ಚಂದ್ರು ಲಮಾಣಿ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ರಾಜ್ಯದಲ್ಲಿ 45 ಹೊಸ ತಾಲ್ಲೂಕುಗಳಿದ್ದು, ಸದ್ಯಕ್ಕೆ ಅಲ್ಲಿ ಆಸ್ಪತ್ರೆಗಳ ಮಂಜೂರಾತಿ ಇಲ್ಲ ಎಂದು ಸ್ಪಷ್ಟಪಡಿಸಿದರು.
ಕಲ್ಯಾಣ ಕರ್ನಾಟಕ ಭಾಗದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ, ಸಮುದಾಯ ಆರೋಗ್ಯ ಕೇಂದ್ರ, ತಾಲ್ಲೂಕು ಆಸ್ಪತ್ರೆಗಳ ಅಗತ್ಯತೆ, ಬೇಡಿಕೆಗಳನ್ನು ಪರಿಶೀಲನೆ ಮಾಡಿ ವರದಿ ನೀಡಲು ಸಮಿತಿ ರಚಿಸಲಾಗಿದೆ. ವೈಜ್ಞಾನಿಕವಾಗಿ ಸಮಿತಿ ವರದಿ ಆಧರಿಸಿ ಆಸ್ಪತ್ರೆಗಳನ್ನು ಮಂಜೂರು ಮಾಡಲಾಗುತ್ತದೆ. ಇದಕ್ಕಾಗಿ ೮೫೦ ಕೋಟಿ ರೂ. ವೆಚ್ಚ ಮಾಡಲಾಗುವುದು ಎಂದರು.
ಇದನ್ನು ಓದಿ: ಸಾಮಾಜಿಕ ಬಹಿಷ್ಕಾರ ಹಾಕಿದ್ರೆ 3 ವರ್ಷ ಜೈಲು ಜೊತೆಗೆ ದಂಡ : ಮಸೂದೆ ಮಂಡಿಸಿದ ರಾಜ್ಯ ಸರ್ಕಾರ
ಶಿರಹಟ್ಟಿಯಲ್ಲಿ ೧.೫೩ ಲಕ್ಷ ಜನಸಂಖ್ಯೆಯಿದ್ದು, ಈಗಾಗಲೇ ಒಂದು ಸಮುದಾಯ ಆರೋಗ್ಯ ಕೇಂದ್ರ ಕಾರ್ಯ ನಿರ್ವಹಿಸುತ್ತಿದೆ. ಮತ್ತೊಂದು ಸಿಎಚ್ಸಿ ಮಂಜುರಾತಿ ಮಾಡಲು ಮಾರ್ಗಸೂಚಿ ಪ್ರಕಾರ ಅವಕಾಶವಿಲ್ಲ. ಸಮಿತಿ ವರದಿ ಆಧರಿಸಿ ಕಲ್ಯಾಣ ಕರ್ನಾಟಕ ಭಾಗದಲ್ಲಿ ಆಸ್ಪತ್ರೆಗಳ ಕೊರತೆ ನೀಗಿಸಲಾಗುವುದು ಎಂದು ಹೇಳಿದರು.
ಇದಕ್ಕೂ ಮುನ್ನ ಮಾತನಾಡಿದ ಡಾ.ಚಂದ್ರ ಲಮಾಣಿ ಅವರು, ಶಿರಹಟ್ಟಿ ತಾಲ್ಲೂಕು ಕೇಂದ್ರವಾಗಿದ್ದು, ಅಲ್ಲಿ ತಾಲ್ಲೂಕು ಆಸ್ಪತ್ರೆಯಾಗಬೇಕು ಹಾಗೂ ಹೊಸ ಆರೋಗ್ಯ ಸಮುದಾಯ ಕೇಂದ್ರ ನಿರ್ಮಿಸಬೇಕೆಂದು ಒತ್ತಾಯಿಸಿದರು.
ಶಾಸಕ ಐಹೊಳೆ ಮಹಾಲಿಂಗಪ್ಪ ಅವರ ಪ್ರಶ್ನೆಗೆ ಉತ್ತರಿಸಿದ ಆರೋಗ್ಯ ಸಚಿವರು, ರಾಯಭಾಗದಲ್ಲಿ ೧೦೦ ಹಾಸಿಗೆ ಸಾಮರ್ಥ್ಯದ ಆಸ್ಪತ್ರೆಯಿದ್ದು, ಅಲ್ಲಿ ಕೊರತೆಯಿರುವ ತಜ್ಞವೈದ್ಯರನ್ನು ಜನವರಿ ತಿಂಗಳೊಳಗೆ ಒದಗಿಸಲಾಗುವುದು, ನಂತರ ತಾಯಿ, ಮಕ್ಕಳ ಆಸ್ಪತ್ರೆಯ ಬಗ್ಗೆ ಪರಿಶೀಲಿಸೋಣ ಎಂದು ಹೇಳಿದರು.
ವರಹಳ್ಳಿ ಆನಂದ, ಸಂಶೋಧನಾ ವಿದ್ಯಾರ್ಥಿ, ಮೈಸೂರು ವಿಶ್ವವಿದ್ಯಾನಿಲಯ ಮೈಸೂರು: ನಗರದ ಅಗ್ರಹಾರದಲ್ಲಿರುವ ಶ್ರೀ ಕೃಷ್ಣ ರಾಜ ಸರ್ಕಾರಿ ಹಿರಿಯ ಪ್ರಾಥಮಿಕ…
ನವೀನ್ ಡಿಸೋಜ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗೆ ಹಿನ್ನೆಡೆ; ಯೋಜನೆಯ ಸದುಪಯೋಗಕ್ಕೆ ಆರೋಗ್ಯ ಇಲಾಖೆ ಮನವಿ ಮಡಿಕೇರಿ: ಜಿಲ್ಲೆಯಲ್ಲಿ ಕೇಂದ್ರ…
ಸಂದರ್ಶನ: ರಶ್ಮಿ ಕೋಟಿ " ಟ್ರಾನ್ಸ್ಜೆಂಡರ್ ಹಕ್ಕುಗಳ ತಿದ್ದುಪಡಿ ಮಸೂದೆ ದೇಶದಾದ್ಯಂತ ತೀವ್ರ ಚರ್ಚೆಗೆ ಕಾರಣವಾಗಿದೆ. ಸಮುದಾಯದವರೊಂದಿಗೆ ಸಮಾಲೋಚನೆ ಇಲ್ಲದೆ…
ಎಂ.ನಾರಾಯಣ ಜಿಲ್ಲಾ ಮಟ್ಟದ ವಿಭಾಗದಲ್ಲಿ ಪ್ರಶಸ್ತಿಗೆ ಪಾತ್ರವಾದ ಮೈಸೂರು ಜಿಲ್ಲೆಯ ಏಕೈಕ ಗ್ರಾಮ ಪಂಚಾಯಿತಿ ತಿ.ನರಸೀಪುರ: ಗ್ರಾಮೀಣ ಆಡಳಿತ ಸಂಸ್ಥೆಯಾಗಿ…
ಕೆ.ಪಿ.ಮದನ್ ಮೈಸೂರು: ಬಾಗಿಲಿಗೆ ಬೀಗವಿಲ್ಲದೆ ವರ್ಷ ಪೂರ್ತಿ ತೆರೆದೇ ಇರುವ ಉದ್ಯಾನ.., ನೀರಿಲ್ಲದೆ ನಲುಗುತ್ತಿರುವ ಸಸಿಗಳು.., ಹಸಿರು ಕಂಡು ಪಾರ್ಕ್ಗೆ…