ರಾಜ್ಯ

ಹೊಸ ತಾಲ್ಲೂಕುಗಳಿಗೆ ಸದ್ಯಕ್ಕಿಲ್ಲ ಆಸ್ಪತ್ರೆ ಭಾಗ್ಯ

ಬೆಳಗಾವಿ : ರಾಜ್ಯದಲ್ಲಿ ಹೊಸ ತಾಲ್ಲೂಕುಗಳಲ್ಲಿ ಸದ್ಯಕ್ಕೆ ತಾಲ್ಲೂಕು ಮಟ್ಟದ ಆಸ್ಪತ್ರೆಗಳ ಮಂಜೂರಾತಿ ಇಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ವಿಧಾನಸಭೆಗೆ ತಿಳಿಸಿದರು. ಪ್ರಶ್ನೋತ್ತರ ವೇಳೆಯಲ್ಲಿ ಶಾಸಕ ಡಾ.ಚಂದ್ರು ಲಮಾಣಿ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ರಾಜ್ಯದಲ್ಲಿ 45 ಹೊಸ ತಾಲ್ಲೂಕುಗಳಿದ್ದು, ಸದ್ಯಕ್ಕೆ ಅಲ್ಲಿ ಆಸ್ಪತ್ರೆಗಳ ಮಂಜೂರಾತಿ ಇಲ್ಲ ಎಂದು ಸ್ಪಷ್ಟಪಡಿಸಿದರು.

ಕಲ್ಯಾಣ ಕರ್ನಾಟಕ ಭಾಗದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ, ಸಮುದಾಯ ಆರೋಗ್ಯ ಕೇಂದ್ರ, ತಾಲ್ಲೂಕು ಆಸ್ಪತ್ರೆಗಳ ಅಗತ್ಯತೆ, ಬೇಡಿಕೆಗಳನ್ನು ಪರಿಶೀಲನೆ ಮಾಡಿ ವರದಿ ನೀಡಲು ಸಮಿತಿ ರಚಿಸಲಾಗಿದೆ. ವೈಜ್ಞಾನಿಕವಾಗಿ ಸಮಿತಿ ವರದಿ ಆಧರಿಸಿ ಆಸ್ಪತ್ರೆಗಳನ್ನು ಮಂಜೂರು ಮಾಡಲಾಗುತ್ತದೆ. ಇದಕ್ಕಾಗಿ ೮೫೦ ಕೋಟಿ ರೂ. ವೆಚ್ಚ ಮಾಡಲಾಗುವುದು ಎಂದರು.

ಇದನ್ನು ಓದಿಸಾಮಾಜಿಕ ಬಹಿಷ್ಕಾರ ಹಾಕಿದ್ರೆ 3 ವರ್ಷ ಜೈಲು ಜೊತೆಗೆ ದಂಡ : ಮಸೂದೆ ಮಂಡಿಸಿದ ರಾಜ್ಯ ಸರ್ಕಾರ 

ಶಿರಹಟ್ಟಿಯಲ್ಲಿ ೧.೫೩ ಲಕ್ಷ ಜನಸಂಖ್ಯೆಯಿದ್ದು, ಈಗಾಗಲೇ ಒಂದು ಸಮುದಾಯ ಆರೋಗ್ಯ ಕೇಂದ್ರ ಕಾರ್ಯ ನಿರ್ವಹಿಸುತ್ತಿದೆ. ಮತ್ತೊಂದು ಸಿಎಚ್‌ಸಿ ಮಂಜುರಾತಿ ಮಾಡಲು ಮಾರ್ಗಸೂಚಿ ಪ್ರಕಾರ ಅವಕಾಶವಿಲ್ಲ. ಸಮಿತಿ ವರದಿ ಆಧರಿಸಿ ಕಲ್ಯಾಣ ಕರ್ನಾಟಕ ಭಾಗದಲ್ಲಿ ಆಸ್ಪತ್ರೆಗಳ ಕೊರತೆ ನೀಗಿಸಲಾಗುವುದು ಎಂದು ಹೇಳಿದರು.

ಇದಕ್ಕೂ ಮುನ್ನ ಮಾತನಾಡಿದ ಡಾ.ಚಂದ್ರ ಲಮಾಣಿ ಅವರು, ಶಿರಹಟ್ಟಿ ತಾಲ್ಲೂಕು ಕೇಂದ್ರವಾಗಿದ್ದು, ಅಲ್ಲಿ ತಾಲ್ಲೂಕು ಆಸ್ಪತ್ರೆಯಾಗಬೇಕು ಹಾಗೂ ಹೊಸ ಆರೋಗ್ಯ ಸಮುದಾಯ ಕೇಂದ್ರ ನಿರ್ಮಿಸಬೇಕೆಂದು ಒತ್ತಾಯಿಸಿದರು.

ಶಾಸಕ ಐಹೊಳೆ ಮಹಾಲಿಂಗಪ್ಪ ಅವರ ಪ್ರಶ್ನೆಗೆ ಉತ್ತರಿಸಿದ ಆರೋಗ್ಯ ಸಚಿವರು, ರಾಯಭಾಗದಲ್ಲಿ ೧೦೦ ಹಾಸಿಗೆ ಸಾಮರ್ಥ್ಯದ ಆಸ್ಪತ್ರೆಯಿದ್ದು, ಅಲ್ಲಿ ಕೊರತೆಯಿರುವ ತಜ್ಞವೈದ್ಯರನ್ನು ಜನವರಿ ತಿಂಗಳೊಳಗೆ ಒದಗಿಸಲಾಗುವುದು, ನಂತರ ತಾಯಿ, ಮಕ್ಕಳ ಆಸ್ಪತ್ರೆಯ ಬಗ್ಗೆ ಪರಿಶೀಲಿಸೋಣ ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಉಳುವ ‘ಯೋಗಿ’ ಕೂಗಿಗೆ ಸರ್ಕಾರ ತರ್ತಾಗಿ ಸ್ಪಂದಿಸಲಿ

ರಾಜ್ಯದ ೧೭೫ ತಾಲ್ಲೂಕುಗಳು ಭೀಕರ ಬರಕ್ಕೆ ತತ್ತರಿಸಿ, ಶೇಕಡಾ ೮೦ ಕ್ಕೂ ಹೆಚ್ಚು ಬೆಳೆ ನಷ್ಟದಿಂದ ಅನ್ನದಾತರು ಸಂಪೂರ್ಣ ಕಂಗಾಲಾಗಿದ್ದರೂ…

37 mins ago

ಓದುಗರ ಪತ್ರ: ರಾಷ್ಟ್ರಕವಿ ಶ್ಲಾಘನೆಯ ಸ್ಮರಣೆ

೧೯೮೬ರ ಆಗಸ್ಟ್ ೨೯ರಂದು (ಜಗದ್ಗುರು ವೀರಸಿಂಹಾಸನ ಮಹಾಸಂಸ್ಥಾನ ಮಠದ ೨೩ ನೇ ಮಠಾಧಿಪತಿ) ಶಿವರಾತ್ರಿ ರಾಜೇಂದ್ರ ಶ್ರೀಗಳ ಅಮೃತ ಮಹೋತ್ಸವದ…

39 mins ago

ಓದುಗರ ಪತ್ರ: ಸೈಬರ್ ವಂಚನೆ: ಜಾಗೃತಿಯೂ ಫಲ ನೀಡುತ್ತಿಲ್ಲವಲ್ಲ…

ರಾಜ್ಯದಲ್ಲಿ ಸೈಬರ್ ವಂಚನೆ ಪ್ರಕರಣಗಳು ಹೆಚ್ಚುತ್ತಿದ್ದು, ಕಳೆದ ಏಳು ತಿಂಗಳ ಅವಧಿಯಲ್ಲಿ ಸುಮಾರು ರೂ.೬೦೦ ಕೋಟಿಯಷ್ಟು ಹಣ ಸೈಬರ್ ವಂಚಕರ…

41 mins ago

ಸೇವೆ, ಶಿಕ್ಷಣ, ಸಂಸ್ಕಾರದ ಸಂಗಮವಾಗಿದ್ದ ರಾಜೇಂದ್ರ ಶ್ರೀ

ಡಾ.ಕೆ.ಪಿ.ಸಿದ್ಧಲಿಂಗಸ್ವಾಮಿ ಇಂದು ಶ್ರೀ ಶಿವರಾತ್ರಿ ರಾಜೇಂದ್ರ ಸ್ವಾಮೀಜಿ ೧೧೧ನೇ ಜಯಂತಿ ಕೆಲವರು ತಮ್ಮ ಕಾಲದಲ್ಲಿ ಬದುಕುತ್ತಾರೆ; ಕೆಲವರು ತಮ್ಮ ಕಾಲವನ್ನೇ…

4 hours ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಆತ್ಮಬಲ ಅಸ್ತ್ರದಿಂದ ಬ್ರಿಟಿಷರ ಮಣಿಸಿದ ಗಾಂಧಿ ಗಾಂಧಿಜಿ ಕಲ್ಪನೆಯ ಸರ್ವೋದಯ ಸಮಾಜದಲ್ಲಿ ಎಲ್ಲರೂ ಸ್ವತಂತ್ರವಾಗಿರುತ್ತಾರೆ. ಇಲ್ಲಿ ಜಾತಿ, ವರ್ಗ, ಶೋಷಣೆ…

4 hours ago

ಗಾಂಧಿವಾದಕ್ಕೆ ಮರುಳಾಗಿದ್ದ ಮೈಸೂರಿನ ಯಶೋಧರಾ ದಾಸಪ್ಪ

ರೋಹಿಣಿ ಸಂಗಪ್ಪ ದಳವಾಯಿ ಮೈಸೂರು ರಾಜ್ಯ ಕಂಡ ಅಪ್ರತಿಮ ಹೋರಾಟಗಾರ್ತಿ ಮತ್ತು ಜನಸೇವಕಿ ಯಶೋಧರಾ ದಾಸಪ್ಪ. ತಮ್ಮ ದಿಟ್ಟ ನಿಲುವು,…

4 hours ago