ಬೆಂಗಳೂರು: ಹೊಸ ವರ್ಷ ಸಂಭ್ರಮಾಚರಣೆಗೆ ಕ್ಷಣಗಣನೆ ಶುರುವಾಗಿದ್ದು, ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಯುವಕ-ಯುವತಿಯರಲ್ಲಿ ನ್ಯೂಇಯರ್ ಜೋಶ್ ಹೆಚ್ಚಾಗಿದೆ.
ಹೊಸ ವರ್ಷದ ಸಂಭ್ರಮಾಚರಣೆ ಪ್ರಯುಕ್ತ ಜನರು ಪಾರ್ಟಿ ಮಾಡಿ ಎಂಜಾಯ್ ಮಾಡುವ ಮೂಡ್ನಲ್ಲಿದ್ದರೆ, ಬೆಂಗಳೂರಿನ ಎಂ.ಜಿ.ರೋಡ್ ಹಾಗೂ ಬ್ರಿಗೇಡ್ ರೋಡ್ ಕಲರ್ ಪುಲ್ ಲೈಟಿಂಗ್ಸ್ನೊಂದಿಗೆ ಕಂಗೊಳಿಸುತ್ತಿವೆ.
ಹೊಸ ವರ್ಷದ ಸಂಭ್ರಮಾಚರಣೆಗೆ ಬ್ರಿಗೇಡ್ ರೋಡ್, ಎಂ.ಜಿ.ರೋಡ್, ಚರ್ಚ್ ಸ್ಟ್ರೀಟ್, ಕೋರಮಂಗಲದಲ್ಲಿ ಸಕಲ ಸಿದ್ಧತೆ ನಡೆದಿದ್ದು, ಯುವಕ ಹಾಗೂ ಯುವತಿಯರು ನ್ಯೂ ಇಯರ್ ಸಂಭ್ರಮಾಚರಣೆ ಆಚರಿಸಲು ತುದಿಗಾಲಿನಲ್ಲಿ ನಿಂತಿದ್ದಾರೆ.
ಇನ್ನು ಹೊಸ ವರ್ಷದ ಸಂಭ್ರಮಾಚರಣೆ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ. ಕುಡಿದು ಟೈಟ್ ಆಗುವವರಿಗೆ ಬೆಡ್ ವ್ಯವಸ್ಥೆ ಮಾಡಲಾಗಿದ್ದು, ಹೆಣ್ಣುಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ರಾಣಿ ಚೆನ್ನಮ್ಮ ಪಡೆ ಕೂಡ ಕಾರ್ಯನಿರ್ವಹಿಸಲಿದೆ.
ಪ್ರಮುಖ ರಸ್ತೆಗಳಲ್ಲಿ ಸಾವಿರಕ್ಕೂ ಹೆಚ್ಚಿನ ಪೊಲೀಸರನ್ನು ನಿಯೋಜನೆ ಮಾಡಲಾಗಿದ್ದು, ಪ್ರಮುಖ ಸ್ಥಳಗಳಲ್ಲಿ ಸಿಸಿ ಕ್ಯಾಮರಾಗಳನ್ನು ಸಹ ಅಳವಡಿಕೆ ಮಾಡಲಾಗಿದೆ.
ಇನ್ನು ಜನರು ನ್ಯೂಇಯರ್ ಸೆಲೆಬ್ರೇಷನ್ನಲ್ಲಿ ಭಾಗಿಯಾಗಿ ಮತ್ತೆ ವಾಪಸ್ ತೆರಳಲು ಮೆಟ್ರೋ, ಬಿಎಂಟಿಸಿ ಬಸ್ಗಳ ವ್ಯವಸ್ಥೆ ಕೂಡ ಮಾಡಲಾಗಿದೆ. ರಾತ್ರಿ 2 ಗಂಟೆಯವರೆಗೆ ಮೆಟ್ರೋ ರೈಲು ಸಂಚಾರ ಮಾಡಲಿದ್ದು, ಪ್ರಮುಖ ರಸ್ತೆಗಳಿಂದಲೂ ಸಾರಿಗೆ ಸೌಲಭ್ಯ ಒದಗಿಸಲಾಗಿದೆ.
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…
ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…
ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…