ರಾಜ್ಯ

ಹೊಸ ವರ್ಷ ಸಂಭ್ರಮ | ಮಾರ್ಗಸೂಚಿ ಪ್ರಕಟ ; ಉಲ್ಲಂಘಿಸಿದರೆ ಕಠಿಣ ಕ್ರಮದ ಎಚ್ಚರಿಕೆ

ಬೆಂಗಳೂರು : 2027ರ ಹೊಸ ವರ್ಷಾಚರಣೆಯ ಸಂಭ್ರಮಕ್ಕೆ ದಿನಗಣನೆ ಶುರುವಾಗಿರುವ ಬೆನ್ನಲ್ಲೇ ಬೆಂಗಳೂರು ಪೊಲೀಸರು ಹೊಸ ಮಾರ್ಗಸೂಚಿ ಪ್ರಕಟಿಸಿದ್ದಾರೆ.

ಗೋವಾದ ನೈಟ್‍ಕ್ಲಬ್ ಅಗ್ನಿ ದುರಂತದಲ್ಲಿ 20ಕ್ಕೂ ಹೆಚ್ಚು ಜನ ಮೃತಪಟ್ಟ ಘಟನೆಯ ನಂತರ ಇದೀಗ ಸುರಕ್ಷತೆಯ ದೃಷ್ಠಿಯಿಂದ ಸರ್ಕಾರ, ಪೊಲೀಸ್ ಇಲಾಖೆ ಹಾಗೂ ನ್ಯಾಷನಲ್ ರೆಸ್ಟೋರೆಂಟ್ ಅಸೋಸಿಯೇಷನ್ ಆಫ್ ಇಂಡಿಯಾ ಬೆಂಗಳೂರಿನ ಪಬ್, ಬಾರ್, ಕ್ಲಬ್‍ಗಳಿಗೆ 19 ಅಂಶಗಳ ಮಾರ್ಗಸೂಚಿ ಬಿಡುಗಡೆ ಮಾಡಿವೆ.

ಧ್ವನಿವರ್ಧಕ ಸೌಂಡ್ ಎಷ್ಟಿರಬೇಕು? ಏನೆಲ್ಲ ಮುನ್ನೆಚ್ಚರಿಕೆ ಕ್ರಮ ತಗೆದುಕೊಳ್ಳಬೇಕು? ಎಲ್ ಡಿ ಸ್ಕ್ರೀನ್ ಹಾಗೂ ಸುರಕ್ಷಿತಾ ಮಾನದಂಡಗಳ ಕುರಿತು ಸಲಹೆ ಸೂಚನೆ ನೀಡಲಾಗಿದೆ.

ಪ್ರಮುಖವಾಗಿ ಕಾರ್ಯಕ್ರಮ ಸ್ಥಳಗಳಲ್ಲಿ ಪಟಾಕಿ ಸಿಡಿಸುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಈ ನಿಯಮಗಳನ್ನು ಉಲ್ಲಂಘಿಸಿದರೆ ಕಠಿಣ ಕ್ರಮದ ಎಚ್ಚರಿಕೆಯನ್ನು ಪೊಲೀಸರು ನೀಡಿದ್ದಾರೆ.

ಇದನ್ನೂ ಓದಿ:-ಬೌದ್ಧ ಬಿಕ್ಕುಗಳಿಗೆ ಶೀಘ್ರದಲ್ಲೇ ಮಾಸಿಕ ಸಂಭಾವನೆ : ಸರ್ಕಾರ ಘೋಷಣೆ

ಗೋವಾ ಪಬ್ ದುರಂತದ ನಂತರ ಮತ್ತಷ್ಟು ಬಿಗಿ ಕ್ರಮಗಳನ್ನು ಜಾರಿಗೆ ತರಲು ಖಾಕಿ ಪಡೆ ಮುಂದಾಗಿದೆ.
ವಿಶೇಷ ಅತಿಥಿಗಳ ಮಾಹಿತಿ
ಸೆಲೆಬ್ರಿಟಿಗಳು, ಡಿಜೆಗಳು, ಅಥವಾ ನಟ-ನಟಿಯರನ್ನು ಆಹ್ವಾನಿಸಿದ್ದಲ್ಲಿ ಅವರ ಮಾಹಿತಿಯನ್ನು ಸ್ಥಳೀಯ ಪೊಲೀಸ್ ಠಾಣೆಗೆ ಕಡ್ಡಾಯವಾಗಿ ನೀಡಬೇಕು.
ಇತರೆ ನಿರ್ಬಂಧಗಳು
ಲೈಸೆನ್ಸ್ ಇಲ್ಲದ ಔಟ್ ಡೋರ್ ಸ್ಥಳಗಳಲ್ಲಿ ಮದ್ಯ ಸರಬರಾಜಿಗೆ ಅವಕಾಶವಿಲ್ಲ. ಹೋಟೆಲ್‍ಗಳ ರೂಮ್‍ಗಳಲ್ಲಿ ಗುಂಪು ಸೇರಿ ನಿಯಮಬಾಹಿರವಾಗಿ ಖಾಸಗಿ ಪಾರ್ಟಿ ನಡೆಸಲು ಅವಕಾಶ ನೀಡಬಾರದು. ಯಾವುದೇ ಅಹಿತಕರ ಘಟನೆ ನಡೆದರೆ ತಕ್ಷಣ ಪೊಲೀಸರಿಗೆ ಮಾಹಿತಿ ನೀಡಬೇಕು.

ಮಾರ್ಗಸೂಚಿ ಇಂತಿವೆ….
1. ಕಾರ್ಯಕ್ರಮಗಳಿಗೆ ಸಂಬಂಧ ಪಟ್ಟ ಇಲಾಖೆಗಳಿಂದ ಅನುಮತಿ ಕಡ್ಡಾಯ ಹಾಗೂ ನಿಯಮ ಪಾಲಿಸಬೇಕು.
2. ಹೊಸ ವರ್ಷಾಚರಣೆ ಸಂಬಂಧ ನಿಗಧಿತ ಸಮಯವನ್ನ ಪಾಲಿಸಬೇಕು.
3. ಕಡ್ಡಾಯವಾಗಿ ಧ್ವನಿವರ್ಧಕ ಪರವಾನಗಿ ಪಡೆದುಕೊಂಡ ನಂತರ ನಿಗದಿತ ಶಬ್ಧ ಮಿತಿ ಇರಬೇಕು.
4. ಸ್ಥಳಾವಕಾಶಕ್ಕೆ ತಕ್ಕಂತೆ ಟಿಕೆಟ್/ಪಾಸ್‍ಗಳನ್ನು ವಿತರಿಸಬೇಕು. ಹಾಗೂ ನೆಲಮಹಡಿ, ಪಾಕಿರ್ಂಗ್ ಸ್ಥಳಗಳು, ಟೆರೆಸ್‍ನಲ್ಲಿ ಕಾರ್ಯಕ್ರಮಗಳನ್ನು ಆಯೋಜಿಸುವಂತಿಲ್ಲ.
5. ಕಾರ್ಯಕ್ರಮದ ಸ್ಥಳಗಳಲ್ಲಿ ಸ್ಕ್ರೀನ್‍ಗಳನ್ನು ಸಾರ್ವಜನಿಕರಿಗೆ ಕಾಣುವಂತೆ ಸ್ಕ್ರೀನಿಂಗ್ ಮಾಡಬಾರದು.
6. ಕಾರ್ಯಕ್ರಮಕ್ಕೆ ಬರುವವರ ತಪಾಸಣೆ ನಡೆಸಿ ಸಂಶಯಾಸ್ಪದ ವಸ್ತು/ವ್ಯಕ್ತಿಗಳು ಕಂಡು ಬಂದಲ್ಲಿ ಪೆÇಲೀಸರಿಗೆ ಮಾಹಿತಿ ನೀಡುಬೇಕು.
7. ಅಗ್ನಿ ನಂದಿಸುವ ವಸ್ತುಗಳನ್ನ ಅಳವಡಿಸಿಕೊಳ್ಳಬೇಕು, ನಿರ್ಗಮನ ದ್ವಾರಗಳು ದೊಡ್ಡದಾಗಿರಬೇಕು.
8. ಕಾರ್ಯಕ್ರಮದ ಪ್ರತಿ ಜಾಗದಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಿ 30 ದಿನಗಳವರೆಗೆ ಸ್ಟೋರೆಜ್ ಮಾಡಬೇಕು.
9. ಮಾದಕ ವಸ್ತುಗಳ ಬಳಕೆ ಕಂಡು ಬಂದರೆ ತಕ್ಷಣವೇ ಸ್ಥಳೀಯ ಪೆÇಲೀಸರಿಗೆ ಮಾಹಿತಿ ನೀಡಬೇಕು. ಪೆÇಲೀಸರೇ ದಾಳಿ ನಡೆಸಿದಾಗ ಸಿಕ್ಕಿಬಿದ್ದರೆ ಕಾರ್ಯಕ್ರಮದ ಕಟ್ಟಡದ ಮಾಲೀಕರು/ಮ್ಯಾನೇಜರ್ ವಿರುದ್ಧ ಕೇಸ್.
10. ಸಾರ್ವಜನಿಕರ ವಾಹನಗಳಿಗೆ ತಮ್ಮ ಪಾಕಿರ್ಂಗ್ ಸ್ಥಳದಲ್ಲಿಯೇ ವ್ಯವಸ್ಥೆ ಮಾಡಿಸಬೇಕು.
11. ಹೊಸ ವರ್ಷಾಚರಣೆಯ ಕಾರ್ಯಕ್ರಮಗಳಿಗೆ ಸೆಲೆಬ್ರಿಟಿಗಳು, ಡಿಜೆಗಳು, ನಟ ನಟಿಯರನ್ನ ಆಹ್ವಾನಿಸಿದ್ದಲ್ಲಿ ಅವರ ಮಾಹಿತಿಯನ್ನು ಸ್ಥಳೀಯ ಪೆÇಲೀಸ್ ಠಾಣೆಗೆ ನೀಡಬೇಕು.
12. ಪಾಕಿರ್ಂಗ್ ಸ್ಥಳ ಮತ್ತು ಮಹಿಳೆಯರಿರುವ ಸ್ಥಳಗಳ ಬಳಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳಾ ಖಾಸಗಿ ಭದ್ರತಾ ಸಿಬ್ಬಂದಿ ನೇಮಿಸಬೇಕು.
13. ಸೆಕ್ಯೂರಿಟಿ ಸಿಬ್ಬಂದಿ ಹಾಗೂ ಬೌನ್ಸರ್‍ಗಳನ್ನು ನಿಯೋಜಿಸಿ ಕೊಳ್ಳುವ ಏಜೆನ್ಸಿಗಳು ‘PSಂಖಂ’ ದಲ್ಲಿ ನೊಂದಣಿ ಮಾಡಬೇಕು.
14. ಪಾರ್ಟಿ ವೇಳೆ ಇರುವ ಕೆಲಸಗಾರರ ಮಾಹಿತಿಯನ್ನ ಧೃಢೀಕೃತ ಐ.ಡಿ ಕಾರ್ಡ್‍ನೊಂದಿಗೆ ನೀಡಬೇಕು.
15. ಲೈಸೆನ್ಸ್ ಇಲ್ಲದ ಔಟ್ ಡೋರ್ ಸ್ಥಳಗಳಲ್ಲಿ ಮದ್ಯ ಸರಬರಾಜಿಗೆ ಅವಕಾಶವಿಲ್ಲ.
16. ಹೋಟೆಲ್‍ಗಳ ರೂಮ್‍ಗಳಲ್ಲಿ ಗುಂಪು ಸೇರಿ ನಿಯಮ ಬಾಹಿರವಾಗಿ ಖಾಸಗಿ ಪಾರ್ಟಿ ನಡೆಸಲು ಅವಕಾಶ ನೀಡಬಾರದು.
17. ಕಾರ್ಯಕ್ರಮದ ಸ್ಥಳದಲ್ಲಿ ಗಲಾಟೆ ನಡೆದಲ್ಲಿ ಕೂಡಲೇ ಪೆÇಲೀಸರಿಗೆ ಮಾಹಿತಿ ನೀಡಬೇಕು.
18. ಕಾರ್ಯಕ್ರಮದ ವೇಳೆ ಪಟಾಕಿ ಸಿಡಿಸುವುದನ್ನ ಸಂಪೂರ್ಣವಾಗಿ ನಿಷೇಧಿಸಿದೆ.
19. ಯಾವುದೇ ಅಹಿತಕರವಾದ ಘಟನೆಗಳು ನಡೆಯದಂತೆ ಕ್ರಮಗಳನ್ನ ಕೈಗೊಳ್ಳಬೇಕು.

ಆಂದೋಲನ ಡೆಸ್ಕ್

Recent Posts

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026: ಗಜಪಯಣಕ್ಕೆ ವಿದ್ಯುಕ್ತ ಚಾಲನೆ

ಹುಣಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ 2026ರ ದಸರಾ ಗಜಪಯಣಕ್ಕೆ ಇಂದು ಅದ್ಧೂರಿ ಚಾಲನೆ ದೊರೆತಿದೆ. ಮೈಸೂರು ಜಿಲ್ಲಾ…

57 mins ago

ಓದುಗರ ಪತ್ರ: ಕಾವೇರಿ ನದಿ ನೀರಿನ ವಿವಾದಕ್ಕೆ ಮಾತುಕತೆಯೇ ಮದ್ದು

ತಮಿಳುನಾಡಿಗೆ ಮುಂದಿನ ಹದಿನೈದು ದಿನಗಳ ಕಾಲ ನಿತ್ಯ ಒಂಬತ್ತು ಸಾವಿರ ಕ್ಯುಸೆಕ್ಸ್ ಕಾವೇರಿ ನದಿ ನೀರು ಹರಿಸಬೇಕಾಗಿರುವುದು ಅಘಾತಕಾರಿ ಸಂಗತಿಯಾಗಿದೆ.…

2 hours ago

ಓದುಗರ ಪತ್ರ: ಈ ‘ಎರಡು’ ಸಮಸ್ಯೆಗಳಿಗೆ ಪರಿಹಾರ ಸಿಗಬೇಕು

ಮೈಸೂರು ನಗರವು ‘ಸ್ವಚ್ಛ ನಗರಿ’, ‘ಸಾಂಸ್ಕೃತಿಕ ನಗರಿ’ ಮತ್ತು ‘ಪಾರಂಪರಿಕನಗರಿ’ ಎಂದೇ ಖ್ಯಾತವಾಗಿದೆ. ಆದರೆ, ಇತ್ತೀಚಿನ ದಿನಗಳಲ್ಲಿ ಈ ಹೆಮ್ಮೆಯ…

2 hours ago

ಓದುಗರ ಪತ್ರ: ಸ್ಥಳ ಶುದ್ಧೀಕರಣಕ್ಕಿಂತ ಮನ ಶುದ್ಧೀಕರಣವಾಗಲಿ

ಎಐಸಿಸಿ ಅಧ್ಯಕ್ಷರು ಹಾಗೂ ಕಾಂಗ್ರೆಸ್ ಹಿರಿಯ ಮುಖಂಡರಾದ, ಮಲ್ಲಿಕಾರ್ಜುನ ಖರ್ಗೆ ಅವರು ಉತ್ತರಖಂಡದ ಹಲ್ದ್ವಾನಿಯದಲ್ಲಿ ಭಾಷಣ ಮಾಡಿದ ಸ್ಥಳವನ್ನು ಶುದ್ಧೀಕರಣ…

2 hours ago

ಮಳೆ ಕೊರತೆಯ ನಡುವೆಯೂ ಕೃಷಿಗೆ ಆತಂಕವಿಲ್ಲ

ನವೀನ್ ಡಿಸೋಜ ಕೊಡಗಿನಲ್ಲಿ ಇಲ್ಲಿಯವರೆಗೆ ಶೇ.೩೭ರಷ್ಟು ಮಳೆ ಕೊರತೆ; ಭರದಿಂದ ಸಾಗಿದ ಬಿತ್ತನೆ ಕಾರ್ಯ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ವಾಡಿಕೆಗಿಂತ…

6 hours ago

ರಸ್ತೆ ಕಾಮಗಾರಿ ಕಳಪೆ: ಸಾರ್ವಜನಿಕರ ಆರೋಪ

ದಾಸೇಗೌಡ ಸರಗೂರು ಸರಗೂರು: ಸ್ಥಳ ಪರಿಶೀಲಿಸಿ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಆಗ್ರಹ ಸರಗೂರು: ಪಟ್ಟಣದ ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ…

6 hours ago