ಬೆಂಗಳೂರು : 2026ರ ಹೊಸವರ್ಷವನ್ನು ಅದ್ದೂರಿಯಾಗಿ ಬರಮಾಡಿಕೊಳ್ಳಲಾಗಿದೆ. ರಾಜ್ಯದಲ್ಲಿ ಯಾವುದೆ ಅಹಿತಕರ ಘಟನೆ ನಡೆಯದೆ ಸುರಕ್ಷಿತವಾಗಿ ಹೊಸ ವರ್ಷಕ್ಕೆ ಕಾಲಿಟ್ಟಿದ್ದೇವೆ.
ಇದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿರುವ ಶ್ಲಾಘಿಸಿರುವ ಸಿಎಂ ಸಿದ್ದರಾಮಯ್ಯ ಪೊಲೀಸರ ಕಾರ್ಯವನ್ನು ಶ್ಲಾಘಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಅವರು, ಅಹಿತಕರ ಘಟನೆಗಳಿಗೆ ಆಸ್ಪದ ನೀಡದೆ, ಸುರಕ್ಷಿತವಾಗಿ ಹಾಗೂ ಅಷ್ಟೇ ಅದ್ಧೂರಿಯಾಗಿ ಹೊಸ ವರ್ಷವನ್ನು ಬರಮಾಡಿಕೊಳ್ಳಲು ನಮ್ಮ ಕರ್ನಾಟಕ ಪೊಲೀಸರು ತೋರಿದ ಶಿಸ್ತು, ಸಮರ್ಪಣೆ ಮತ್ತು ಅವಿಶ್ರಾಂತ ಪ್ರಯತ್ನಗಳು ಶ್ಲಾಘನೀಯ ಎಂದಿದ್ದಾರೆ.
ನಮ್ಮ ಪೊಲೀಸರ ವೃತ್ತಿಪರತೆ ಮತ್ತು ಸಾರ್ವಜನಿಕರ ಸುರಕ್ಷತೆಯೆಡೆಗಿನ ಬದ್ಧತೆಯು ನೈಜ ಸೇವಾ ಮನೋಭಾವದ ದ್ಯೋತಕ. ಪ್ರತಿಯೊಬ್ಬ ಪೊಲೀಸ್ ಸಿಬ್ಬಂದಿ ಮತ್ತು ಅವರ ಕುಟುಂಬಕ್ಕೆ ನನ್ನ ಹೃತ್ಪೂರ್ವಕ ಧನ್ಯವಾದಗಳು. ಹೊಸವರ್ಷವು ಎಲ್ಲ ಕನ್ನಡಿಗರಿಗೂ ಸುಖ, ಸಂತಸ ಮತ್ತು ಸಮೃದ್ಧಿಯನ್ನು ತರಲಿ ಎಂದು ಹಾರೈಸುತ್ತೇನೆ ಎಂದು ಹೇಳಿದ್ದಾರೆ.
ಮೈಸೂರು: ಇಲ್ಲಿನ ಚಲುವಾಂಬ ಆಸ್ಪತ್ರೆಗೆ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.…
ಬೆಂಗಳೂರು: ಕೃಷಿ ಕ್ಷೇತ್ರದಲ್ಲಿನ ಹೊಸ ಬದಲಾವಣೆಗಳು ಪ್ರತಿ ರೈತರನ್ನೂ ತಲುಪಬೇಕು. ಈ ದಿಸೆಯಲ್ಲಿ ಎಫ್ಕೆಸಿಸಿಐನ ಪ್ರಯತ್ನ ಉತ್ತಮವಾಗಿದೆ ಎಂದು ಮುಖ್ಯಮಂತ್ರಿ…
ಬೆಂಗಳೂರು: ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ) ಬರೆಯುವ ವೇಳೆ ವಿದ್ಯಾರ್ಥಿನಿ ಮೂಗಿಗೆ ಟೇಪ್ ಹಾಕಿದ ಪ್ರಕರಣ ಮಾಸುವ ಮುನ್ನವೇ ಐವರು ವಿದ್ಯಾರ್ಥಿಗಳ…
ಹಾಸನ: ಜಿಲ್ಲೆಯ ಹೊಳೆನರಸೀಪುರ ವ್ಯಾಪ್ತಿಯಲ್ಲಿ ನಡೆದ ದೇವಾಲಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರು ಭಾವುಕರಾಗಿ ಕಣ್ಣೀರು…
ಹುಬ್ಬಳ್ಳಿ: ಮೇ.20ರೊಳಗೆ ರಾಜ್ಯ ಸಚಿವ ಸಂಪುಟ ವಿಸ್ತರಣೆ ಆಗಬಹುದು ಎಂದು ವಿಧಾನಪರಿಷತ್ ಕಾಂಗ್ರೆಸ್ ಮುಖ್ಯ ಸಚೇತಕ ಸಲೀಂ ಅಹಮ್ಮದ್ ತಿಳಿಸಿದ್ದಾರೆ.…
ಬೆಂಗಳೂರು: ಪೂರ್ವ ಮುಂಗಾರು ಮಳೆ ವಾಡಿಕೆಗಿಂತ ಕಡಿಮೆಯಾದ ಪರಿಣಾಮ ಬೇಸಿಗೆಯ ಸುಡುಬಿಸಿಲು ರಾಜ್ಯದಲ್ಲಿ ಒಂದೆಡೆ ಹೆಚ್ಚಾಗುತ್ತಿದ್ದರೆ ಮತ್ತೊಂದೆಡೆ ಜಲಾಶಯಗಳ ನೀರು…