ಬೆಂಗಳೂರು : 2026ರ ಹೊಸವರ್ಷವನ್ನು ಅದ್ದೂರಿಯಾಗಿ ಬರಮಾಡಿಕೊಳ್ಳಲಾಗಿದೆ. ರಾಜ್ಯದಲ್ಲಿ ಯಾವುದೆ ಅಹಿತಕರ ಘಟನೆ ನಡೆಯದೆ ಸುರಕ್ಷಿತವಾಗಿ ಹೊಸ ವರ್ಷಕ್ಕೆ ಕಾಲಿಟ್ಟಿದ್ದೇವೆ.
ಇದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿರುವ ಶ್ಲಾಘಿಸಿರುವ ಸಿಎಂ ಸಿದ್ದರಾಮಯ್ಯ ಪೊಲೀಸರ ಕಾರ್ಯವನ್ನು ಶ್ಲಾಘಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಅವರು, ಅಹಿತಕರ ಘಟನೆಗಳಿಗೆ ಆಸ್ಪದ ನೀಡದೆ, ಸುರಕ್ಷಿತವಾಗಿ ಹಾಗೂ ಅಷ್ಟೇ ಅದ್ಧೂರಿಯಾಗಿ ಹೊಸ ವರ್ಷವನ್ನು ಬರಮಾಡಿಕೊಳ್ಳಲು ನಮ್ಮ ಕರ್ನಾಟಕ ಪೊಲೀಸರು ತೋರಿದ ಶಿಸ್ತು, ಸಮರ್ಪಣೆ ಮತ್ತು ಅವಿಶ್ರಾಂತ ಪ್ರಯತ್ನಗಳು ಶ್ಲಾಘನೀಯ ಎಂದಿದ್ದಾರೆ.
ನಮ್ಮ ಪೊಲೀಸರ ವೃತ್ತಿಪರತೆ ಮತ್ತು ಸಾರ್ವಜನಿಕರ ಸುರಕ್ಷತೆಯೆಡೆಗಿನ ಬದ್ಧತೆಯು ನೈಜ ಸೇವಾ ಮನೋಭಾವದ ದ್ಯೋತಕ. ಪ್ರತಿಯೊಬ್ಬ ಪೊಲೀಸ್ ಸಿಬ್ಬಂದಿ ಮತ್ತು ಅವರ ಕುಟುಂಬಕ್ಕೆ ನನ್ನ ಹೃತ್ಪೂರ್ವಕ ಧನ್ಯವಾದಗಳು. ಹೊಸವರ್ಷವು ಎಲ್ಲ ಕನ್ನಡಿಗರಿಗೂ ಸುಖ, ಸಂತಸ ಮತ್ತು ಸಮೃದ್ಧಿಯನ್ನು ತರಲಿ ಎಂದು ಹಾರೈಸುತ್ತೇನೆ ಎಂದು ಹೇಳಿದ್ದಾರೆ.
ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್ನಲ್ಲಿ ತೆರಳುತ್ತಿದ್ದ 60…
ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…
ರಾಜ್ಯದ ೮೦೫ ಪೆಟ್ರೋಲ್ ಬಂಕ್ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…
ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…
ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…