ಬೆಂಗಳೂರು: ರಾಜ್ಯದಲ್ಲಿ ಇನ್ನೂ ಎರಡು ದಿನ ಭಾರೀ ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದಾದ್ಯಂತ ಮಳೆಯ ಅಬ್ಬರ ಜೋರಾಗಿದ್ದು, ಅದರಲ್ಲೂ ಮಲೆನಾಡು ಭಾಗಗಳಲ್ಲಿ ವರುಣನ ಆರ್ಭಟ ಇನ್ನೆರಡು ದಿನ ಹೆಚ್ಚಾಗಲಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಶಾಲಾ ಮಕ್ಕಳ ಹಿತದೃಷ್ಟಿಯಿಂದ ನಾಳೆ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಯ 7 ತಾಲ್ಲೂಕಿನ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಭಾರೀ ಮಳೆ ಮುನ್ಸೂಚನೆ ಇರುವುದರಿಂದ ನದಿ, ಸಮುದ್ರ ತೀರದ ಜನರಿಗೆ ಎಚ್ಚರ ವಹಿಸಲು ಸೂಚಿಸಲಾಗಿದೆ. ಇನ್ನು ಪದವಿ, ಡಿಪ್ಲೊಮಾ, ಇಂಜಿನಿಯರಿಂಗ್ ಹಾಗೂ ಐಟಿಐ ಕಾಲೇಜಿಗೆ ಎಂದಿನಂತೆ ತರಗತಿ ನಡೆಯಲಿದೆ. ಇನ್ನು ಕೊಡಗಿನಲ್ಲೂ ಇನ್ನೆರಡು ದಿನಗಳಲ್ಲಿ ಭಾರೀ ಮಳೆಯಾಗಲಿದ್ದು, ಜನಜೀವನ ಅಸ್ತವ್ಯಸ್ತವಾಗುವ ಸಂಭವವಿದೆ. ಈ ಹಿನ್ನೆಲೆಯಲ್ಲಿ ಜನತೆ ಎಚ್ಚರಿಕೆ ವಹಿಸಬೇಕು ಎಂದು ಸೂಚನೆ ನೀಡಲಾಗಿದೆ.
ಮಳೆಯ ಪ್ರಮಾಣ ನೋಡಿಕೊಂಡು ಶಾಲೆಗಳಿಗೆ ರಜೆ ನೀಡುವ ಅಧಿಕಾರವನ್ನು ಆಯಾಯ ಜಿಲ್ಲೆಯ ಜಿಲ್ಲಾಧಿಕಾರಿಗೆ ನೀಡಿದ್ದು, ಮಳೆ ಜಾಸ್ತಿಯಾದರಷ್ಟೇ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ನೀಡಲಾಗುತ್ತದೆ ಎಂಬ ಮಾಹಿತಿ ಲಭ್ಯವಾಗಿದೆ.
ಚಾಮರಾಜನಗರ : ರಾಜ್ಯ ಆಹಾರ ಆಯೋಗದ ಅಧ್ಯಕ್ಷರಾದ ಡಾ. ಎಚ್.ಕೃಷ್ಣ ಅವರು ತಮ್ಮ ದಿಢೀರ್ ಭೇಟಿ ಸಂದರ್ಭದಲ್ಲಿ ನ್ಯೂನತೆ ಕಂಡುಬಂದಿರುವ…
ಬೆಂಗಳೂರು : ಸಭಾಪತಿಗಳ ಆದೇಶಕ್ಕೆ ಗೌರವ ನೀಡದೆ, ಗೈರು ಹಾಜರಾಗಿದ್ದ ಹಿನ್ನೆಲೆಯಲ್ಲಿ ಬಿಜೆಪಿ ಸದಸ್ಯ ಸಿ.ಟಿ.ರವಿ ಅವರನ್ನು ವಿಧಾನ ಪರಿಷತ್ತಿನಿಂದ…
ಮಂಡ್ಯ : ಹೊಸದಾಗಿ ಬಾರ್ ಆರಂಭಿಸಲು ಸಿಎಲ್ 7 ಲೈಸೆನ್ಸ್ ನೀಡಲು ಲಂಚ ಕೇಳಿದ ಆರೋಪದಡಿ ಮಂಡ್ಯ ಅಬಕಾರಿ ಉಪ…
ಮೈಸೂರು : ಮೈಸೂರಲ್ಲಿ ಪದೇ ಪದೇ ಡ್ರಗ್ಸ್ ಪ್ರಕರಣಗಳು ಪತ್ತೆಯಾಗುತ್ತಿರುವುದು ಪೊಲೀಸರನ್ನು ನಿದ್ದೆಗೆಡಿಸಿದೆ. ಈ ಸಂಬಂಧ ಹೈಕೋರ್ಟ್ ಸಹ ಕಳವಳ…
ಮಂಡ್ಯ : ಮೈಸೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ (ಎನ್ಎಚ್-275) ಹಾಗೂ ಸರ್ವಿಸ್ ರಸ್ತೆಗಳಲ್ಲಿ ತಡರಾತ್ರಿ ಪ್ರಯಾಣಿಕರನ್ನು ತಡೆದು ಸುಲಿಗೆ, ದರೋಡೆ ಮಾಡುತ್ತಿರುವುದಕ್ಕೆ…
ಗಾಜಿಯಾಬಾದ್ : ಆನ್ಲೈನ್ ಗೇಮ್ ಆಡಬೇಡಿ ಎಂದಿದ್ದಕ್ಕೆ ಮೂವರು ಅಪ್ರಾಪ್ತ ಸಹೋದರಿಯರು ಹೌಸಿಂಗ್ ಸೊಸೈಟಿಯ 9ನೇ ಮಹಡಿಯಿಂದ ಹಾರಿ ಆತ್ಮಹತ್ಯೆ…