ಬೆಂಗಳೂರು: ರಾಜ್ಯದಲ್ಲಿ ಇನ್ನೂ ಎರಡು ದಿನ ಭಾರೀ ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದಾದ್ಯಂತ ಮಳೆಯ ಅಬ್ಬರ ಜೋರಾಗಿದ್ದು, ಅದರಲ್ಲೂ ಮಲೆನಾಡು ಭಾಗಗಳಲ್ಲಿ ವರುಣನ ಆರ್ಭಟ ಇನ್ನೆರಡು ದಿನ ಹೆಚ್ಚಾಗಲಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಶಾಲಾ ಮಕ್ಕಳ ಹಿತದೃಷ್ಟಿಯಿಂದ ನಾಳೆ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಯ 7 ತಾಲ್ಲೂಕಿನ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಭಾರೀ ಮಳೆ ಮುನ್ಸೂಚನೆ ಇರುವುದರಿಂದ ನದಿ, ಸಮುದ್ರ ತೀರದ ಜನರಿಗೆ ಎಚ್ಚರ ವಹಿಸಲು ಸೂಚಿಸಲಾಗಿದೆ. ಇನ್ನು ಪದವಿ, ಡಿಪ್ಲೊಮಾ, ಇಂಜಿನಿಯರಿಂಗ್ ಹಾಗೂ ಐಟಿಐ ಕಾಲೇಜಿಗೆ ಎಂದಿನಂತೆ ತರಗತಿ ನಡೆಯಲಿದೆ. ಇನ್ನು ಕೊಡಗಿನಲ್ಲೂ ಇನ್ನೆರಡು ದಿನಗಳಲ್ಲಿ ಭಾರೀ ಮಳೆಯಾಗಲಿದ್ದು, ಜನಜೀವನ ಅಸ್ತವ್ಯಸ್ತವಾಗುವ ಸಂಭವವಿದೆ. ಈ ಹಿನ್ನೆಲೆಯಲ್ಲಿ ಜನತೆ ಎಚ್ಚರಿಕೆ ವಹಿಸಬೇಕು ಎಂದು ಸೂಚನೆ ನೀಡಲಾಗಿದೆ.
ಮಳೆಯ ಪ್ರಮಾಣ ನೋಡಿಕೊಂಡು ಶಾಲೆಗಳಿಗೆ ರಜೆ ನೀಡುವ ಅಧಿಕಾರವನ್ನು ಆಯಾಯ ಜಿಲ್ಲೆಯ ಜಿಲ್ಲಾಧಿಕಾರಿಗೆ ನೀಡಿದ್ದು, ಮಳೆ ಜಾಸ್ತಿಯಾದರಷ್ಟೇ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ನೀಡಲಾಗುತ್ತದೆ ಎಂಬ ಮಾಹಿತಿ ಲಭ್ಯವಾಗಿದೆ.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…