ಬೆಂಗಳೂರು: ಚಳಿಗಾಲದ ಸೀಸನ್ನಲ್ಲೂ ಕರ್ನಾಟಕ ರಾಜ್ಯದಲ್ಲಿ ಮಳೆಯ ರಗಳೆ ಜಾಸ್ತಿಯಾಗಿದೆ. ಬಂಗಾಳಕೊಲ್ಲಿಯಲ್ಲಿ ಮತ್ತೆ ವಾಯುಭಾರ ಕುಸಿತ ಉಂಟಾಗಿದ್ದು, ರಾಜ್ಯದಲ್ಲಿ ಮುಂದಿನ 5 ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಈ ಹಿನ್ನೆಲೆಯಲ್ಲಿ ಒಂದೆಡೆ ವಿಪರೀತ ಚಳಿ, ಮತ್ತೊಂದೆಡೆ ಮಳೆಯಿಂದ ರಾಜ್ಯದ ಜನತೆ ತೊಂದರೆ ಅನುಭವಿಸುವ ಸ್ಥಿತಿ ನಿರ್ಮಾಣವಾಗಿದೆ.
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಇಂದು ಬೆಳಿಗ್ಗೆಯಿಂದಲೇ ಮೋಡಕವಿದ ವಾತಾವರಣವಿದ್ದು, ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಉಳಿದಂತೆ ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ಕೋಲಾರ, ಹಾಸನ, ತುಮಕೂರು, ಚಿಕ್ಕಬಳ್ಳಾಪುರ, ದೊಡ್ಡಬಳ್ಳಾಪುರ, ರಾಮನಗರ, ಚಾಮರಾಜನಗರ, ಚಿತ್ರದುರ್ಗದಲ್ಲಿ ಮುಂದಿನ ಐದು ದಿನಗಳ ಕಾಲ ಮಳೆಯಾಗುವ ಸಾಧ್ಯತೆಯಿದೆ.
ಕರಾವಳಿ ಹಾಗೂ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಒಣ ಹವೆಯಿದ್ದು, ರಾಜ್ಯದ ಒಳನಾಡು ಜಿಲ್ಲೆಗಳಲ್ಲಿ ದಟ್ಟ ಮಂಜು ಆವರಿಸಲಿದೆ ಎಂದು ಅಂದಾಜಿಸಲಾಗಿದೆ.
ಬೆಂಗಳೂರು : ನಾಳೆಯಿಂದ ಐಪಿಎಲ್ ಪಂದ್ಯಾವಳಿಗಳು ಆರಂಭವಾಗಲಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಸಂಬಂಧಪಟ್ಟ…
ಮದ್ದೂರು : ಖಾಸಗಿ ಶಾಲೆ ಬಸ್ ಮತ್ತು ಖಾಸಗಿ ಬಸ್ ನಡುವೆ ಅಪಘಾತ ಸಂಭವಿಸಿ, 14 ವಿದ್ಯಾರ್ಥಿಗಳ ಜತೆಗೆ 6…
ಹನೂರು : ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಬುಧವಾರ ನಡೆದ ಹುಂಡಿ ಹಣ ಎಣಿಕೆಯಲ್ಲಿ ಈ ಬಾರಿ…
ಎಚ್.ಡಿ.ಕೋಟೆ : ರಾಜ್ಯದಲ್ಲಿ ಜಾತ್ಯತೀತ ಜನತಾದಳ-ಬಿಜೆಪಿಯ ಮೈತ್ರಿಯ ಸರ್ಕಾರ ಅಧಿಕಾರಕ್ಕೆ ಬಂದು ಜನಪರ ಆಡಳಿತ ನೀಡುವ ದಿನಗಳು ಹತ್ತಿರವಾಗುತ್ತಿವೆ ಎಂದು…
ಬೆಂಗಳೂರು : ದಾವಣಗೆರೆ ಉಪಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಸಾದಿಕ್ ಪೈಲ್ವಾನ್ ತಾವು ಕಣದಿಂದ ಹಿಂದೆ ಸರಿದಿರುವುದಾಗಿ ಘೋಷಿಸಿದ್ದಾರೆ.…
ಬೆಂಗಳೂರು : ಕರ್ನಾಟಕದ ಶೈಕ್ಷಣಿಕ ಇತಿಹಾಸದಲ್ಲಿ ರಾಜ್ಯ ಸರ್ಕಾರವು ಅತ್ಯಂತ ಮಹತ್ವದ ತೀರ್ಮಾನವೊಂದನ್ನು ಕೈಗೊಂಡಿದ್ದು, ಎಸ್ಎಸ್ಎಲ್ಸಿ ಪರೀಕ್ಷಾ ಪದ್ಧತಿಯಲ್ಲಿ ಆಮೂಲಾಗ್ರ…