ಬೆಂಗಳೂರು: ಚಳಿಗಾಲದ ಸೀಸನ್ನಲ್ಲೂ ಕರ್ನಾಟಕ ರಾಜ್ಯದಲ್ಲಿ ಮಳೆಯ ರಗಳೆ ಜಾಸ್ತಿಯಾಗಿದೆ. ಬಂಗಾಳಕೊಲ್ಲಿಯಲ್ಲಿ ಮತ್ತೆ ವಾಯುಭಾರ ಕುಸಿತ ಉಂಟಾಗಿದ್ದು, ರಾಜ್ಯದಲ್ಲಿ ಮುಂದಿನ 5 ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಈ ಹಿನ್ನೆಲೆಯಲ್ಲಿ ಒಂದೆಡೆ ವಿಪರೀತ ಚಳಿ, ಮತ್ತೊಂದೆಡೆ ಮಳೆಯಿಂದ ರಾಜ್ಯದ ಜನತೆ ತೊಂದರೆ ಅನುಭವಿಸುವ ಸ್ಥಿತಿ ನಿರ್ಮಾಣವಾಗಿದೆ.
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಇಂದು ಬೆಳಿಗ್ಗೆಯಿಂದಲೇ ಮೋಡಕವಿದ ವಾತಾವರಣವಿದ್ದು, ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಉಳಿದಂತೆ ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ಕೋಲಾರ, ಹಾಸನ, ತುಮಕೂರು, ಚಿಕ್ಕಬಳ್ಳಾಪುರ, ದೊಡ್ಡಬಳ್ಳಾಪುರ, ರಾಮನಗರ, ಚಾಮರಾಜನಗರ, ಚಿತ್ರದುರ್ಗದಲ್ಲಿ ಮುಂದಿನ ಐದು ದಿನಗಳ ಕಾಲ ಮಳೆಯಾಗುವ ಸಾಧ್ಯತೆಯಿದೆ.
ಕರಾವಳಿ ಹಾಗೂ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಒಣ ಹವೆಯಿದ್ದು, ರಾಜ್ಯದ ಒಳನಾಡು ಜಿಲ್ಲೆಗಳಲ್ಲಿ ದಟ್ಟ ಮಂಜು ಆವರಿಸಲಿದೆ ಎಂದು ಅಂದಾಜಿಸಲಾಗಿದೆ.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…